<p><strong>ಬೆಂಗಳೂರು:</strong> ನಗರದಿಂದ ಪಾವಗಡಕ್ಕೆ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಬ್ಯಾಗ್ನಲ್ಲಿದ್ದ ಚಿನ್ನಾಭರಣ ಕಳ್ಳತನ ಮಾಡಲಾಗಿದ್ದು, ಈ ಬಗ್ಗೆ ಉಪ್ಪಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ಏಪ್ರಿಲ್ 29ರಂದು ನಡೆದಿರುವ ಕಳ್ಳತನ ಸಂಬಂಧ ಮಹಿಳೆಯ ಮಗ ದೂರು ನೀಡಿದ್ದಾರೆ. ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಕೆಎಸ್ಆರ್ಟಿಸಿ ಬಸ್ ಸಾಗಿದ್ದ ರಸ್ತೆ ಹಾಗೂ ಇತರೆ ಸ್ಥಳಗಳಲ್ಲಿರುವ ಸಿ.ಸಿ.ಟಿ.ವಿ ಕ್ಯಾಮೆರಾ ಪರಿಶೀಲನೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.</p>.<p>‘ತುಮಕೂರು ಜಿಲ್ಲೆಯ ಪಾವಗಡದ ಮಹಿಳೆ, ಕೆಲಸ ನಿಮಿತ್ತ ಯಲಹಂಕದಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದರು. ವಾಪಸು ಊರಿಗೆ ಹೋಗಲು ಯಲಹಂಕದಿಂದ ಮೆಜೆಸ್ಟಿಕ್ ನಿಲ್ದಾಣಕ್ಕೆ ಏಪ್ರಿಲ್ 29ರಂದು ಬೆಳಿಗ್ಗೆ 6.20 ಗಂಟೆ ಸುಮಾರಿಗೆ ಬಂದಿದ್ದರು. ಅಲ್ಲಿಂದ, ಪಾವಗಡಕ್ಕೆ ಹೊರಟಿದ್ದ ಕೆಎಸ್ಆರ್ಟಿಸಿ ಬಸ್ ಹತ್ತಿದ್ದರು.’</p>.<p>‘ಬೆಳಿಗ್ಗೆ 11 ಗಂಟೆಗೆ ಬಸ್ ಪಾವಗಡ ತಲುಪಿತ್ತು. ನಿಲ್ದಾಣದಲ್ಲಿ ಇಳಿದಿದ್ದ ಮಹಿಳೆ, ಮನೆಗೆ ಹೋಗಿದ್ದರು. ಬ್ಯಾಗ್ ಪರಿಶೀಲಿಸಿದಾಗ, ಚಿನ್ನಾಭರಣ ಇರಲಿಲ್ಲ’ ಎಂದು ಪೊಲೀಸರು ತಿಳಿಸಿದರು.</p>.<p>‘ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಮಹಿಳೆಯ ಬ್ಯಾಗ್ನಲ್ಲಿದ್ದ ಚಿನ್ನಾಭರಣವನ್ನು ಆರೋಪಿಗಳು ಕಳ್ಳತನ ಮಾಡಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ₹ 3.80 ಲಕ್ಷ ಮೌಲ್ಯದ ಚಿನ್ನಾಭರಣ ಬ್ಯಾಗ್ನಲ್ಲಿದ್ದವು ಎಂಬುದಾಗಿ ದೂರುದಾರರು ಮಾಹಿತಿ ನೀಡಿದ್ದಾರೆ’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದಿಂದ ಪಾವಗಡಕ್ಕೆ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಬ್ಯಾಗ್ನಲ್ಲಿದ್ದ ಚಿನ್ನಾಭರಣ ಕಳ್ಳತನ ಮಾಡಲಾಗಿದ್ದು, ಈ ಬಗ್ಗೆ ಉಪ್ಪಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ಏಪ್ರಿಲ್ 29ರಂದು ನಡೆದಿರುವ ಕಳ್ಳತನ ಸಂಬಂಧ ಮಹಿಳೆಯ ಮಗ ದೂರು ನೀಡಿದ್ದಾರೆ. ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಕೆಎಸ್ಆರ್ಟಿಸಿ ಬಸ್ ಸಾಗಿದ್ದ ರಸ್ತೆ ಹಾಗೂ ಇತರೆ ಸ್ಥಳಗಳಲ್ಲಿರುವ ಸಿ.ಸಿ.ಟಿ.ವಿ ಕ್ಯಾಮೆರಾ ಪರಿಶೀಲನೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.</p>.<p>‘ತುಮಕೂರು ಜಿಲ್ಲೆಯ ಪಾವಗಡದ ಮಹಿಳೆ, ಕೆಲಸ ನಿಮಿತ್ತ ಯಲಹಂಕದಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದರು. ವಾಪಸು ಊರಿಗೆ ಹೋಗಲು ಯಲಹಂಕದಿಂದ ಮೆಜೆಸ್ಟಿಕ್ ನಿಲ್ದಾಣಕ್ಕೆ ಏಪ್ರಿಲ್ 29ರಂದು ಬೆಳಿಗ್ಗೆ 6.20 ಗಂಟೆ ಸುಮಾರಿಗೆ ಬಂದಿದ್ದರು. ಅಲ್ಲಿಂದ, ಪಾವಗಡಕ್ಕೆ ಹೊರಟಿದ್ದ ಕೆಎಸ್ಆರ್ಟಿಸಿ ಬಸ್ ಹತ್ತಿದ್ದರು.’</p>.<p>‘ಬೆಳಿಗ್ಗೆ 11 ಗಂಟೆಗೆ ಬಸ್ ಪಾವಗಡ ತಲುಪಿತ್ತು. ನಿಲ್ದಾಣದಲ್ಲಿ ಇಳಿದಿದ್ದ ಮಹಿಳೆ, ಮನೆಗೆ ಹೋಗಿದ್ದರು. ಬ್ಯಾಗ್ ಪರಿಶೀಲಿಸಿದಾಗ, ಚಿನ್ನಾಭರಣ ಇರಲಿಲ್ಲ’ ಎಂದು ಪೊಲೀಸರು ತಿಳಿಸಿದರು.</p>.<p>‘ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಮಹಿಳೆಯ ಬ್ಯಾಗ್ನಲ್ಲಿದ್ದ ಚಿನ್ನಾಭರಣವನ್ನು ಆರೋಪಿಗಳು ಕಳ್ಳತನ ಮಾಡಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ₹ 3.80 ಲಕ್ಷ ಮೌಲ್ಯದ ಚಿನ್ನಾಭರಣ ಬ್ಯಾಗ್ನಲ್ಲಿದ್ದವು ಎಂಬುದಾಗಿ ದೂರುದಾರರು ಮಾಹಿತಿ ನೀಡಿದ್ದಾರೆ’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>