<p><strong>ಪೀಣ್ಯ ದಾಸರಹಳ್ಳಿ:</strong> ಚಿಕ್ಕಬಾಣಾವರ ಕೆರೆ ಅಭಿವೃದ್ಧಿ ಕಾಮಗಾರಿಯನ್ನು ಶಾಸಕ ಎಸ್. ಮುನಿರಾಜು, ಬಿಡಿಎ ಮತ್ತು ಪುರಸಭೆ ಅಧಿಕಾರಿಗಳೊಂದಿಗೆ ಪರಿಶೀಲಿಸಿದರು.</p>.<p>105 ಎಕರೆ ವಿಸ್ತೀರ್ಣದಲ್ಲಿರುವ ಈ ಕೆರೆಯ ಅಭಿವೃದ್ಧಿಗೆ ಬಿಡಿಎ ₹12.60 ಕೋಟಿ ಮತ್ತು ಪುರಸಭೆ ₹2 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ.</p>.<p>ಕೆರೆಯ ನೀಲ ನಕ್ಷೆಯನ್ನು ಪರಿಶೀಲಿಸಿದ ಶಾಸಕ ಮುನಿರಾಜು, ಸರ್ವೆ ಅಧಿಕಾರಿಗಳಿಂದ ಕೆರೆ ಒತ್ತುವರಿ ಕುರಿತು ಮಾಹಿತಿ ಪಡೆದರು. ಮುಲಾಜಿಲ್ಲದೆ ಒತ್ತುವರಿಯನ್ನು ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಬಿಡಿಎ ಎಂಜಿನಿಯರ್ ಅರವಿಂದ್, ‘ಚಿಕ್ಕಬಾಣಾವರ ಕೆರೆಯ ಒತ್ತುವರಿ ಜಾಗವನ್ನು ಮತ್ತೊಮ್ಮೆ ಭೂಮಾಪನ ಮಾಡಿಸಿ ಸ್ಥಳ ಗುರುತಿಸಿದರೆ, ಅದನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳುತ್ತೇವೆ’ ಎಂದರು.</p>.<p>ಪುರಸಭೆ ಮುಖ್ಯಾಧಿಕಾರಿ ಎಚ್.ಎ. ಕುಮಾರ್, ಎಂಜಿನಿಯರ್ಗಳಾದ ಸುಮತಿ, ಹರೀಶ್, ಉಪ ತಹಸೀಲ್ದಾರ್ ಉಷಾ, ಬಿಡಿಎ ಎಂಜಿನಿಯರ್ಗಳಾದ ನವೀನ್, ಸ್ಥಳೀಯ ಮುಖಂಡರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೀಣ್ಯ ದಾಸರಹಳ್ಳಿ:</strong> ಚಿಕ್ಕಬಾಣಾವರ ಕೆರೆ ಅಭಿವೃದ್ಧಿ ಕಾಮಗಾರಿಯನ್ನು ಶಾಸಕ ಎಸ್. ಮುನಿರಾಜು, ಬಿಡಿಎ ಮತ್ತು ಪುರಸಭೆ ಅಧಿಕಾರಿಗಳೊಂದಿಗೆ ಪರಿಶೀಲಿಸಿದರು.</p>.<p>105 ಎಕರೆ ವಿಸ್ತೀರ್ಣದಲ್ಲಿರುವ ಈ ಕೆರೆಯ ಅಭಿವೃದ್ಧಿಗೆ ಬಿಡಿಎ ₹12.60 ಕೋಟಿ ಮತ್ತು ಪುರಸಭೆ ₹2 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ.</p>.<p>ಕೆರೆಯ ನೀಲ ನಕ್ಷೆಯನ್ನು ಪರಿಶೀಲಿಸಿದ ಶಾಸಕ ಮುನಿರಾಜು, ಸರ್ವೆ ಅಧಿಕಾರಿಗಳಿಂದ ಕೆರೆ ಒತ್ತುವರಿ ಕುರಿತು ಮಾಹಿತಿ ಪಡೆದರು. ಮುಲಾಜಿಲ್ಲದೆ ಒತ್ತುವರಿಯನ್ನು ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಬಿಡಿಎ ಎಂಜಿನಿಯರ್ ಅರವಿಂದ್, ‘ಚಿಕ್ಕಬಾಣಾವರ ಕೆರೆಯ ಒತ್ತುವರಿ ಜಾಗವನ್ನು ಮತ್ತೊಮ್ಮೆ ಭೂಮಾಪನ ಮಾಡಿಸಿ ಸ್ಥಳ ಗುರುತಿಸಿದರೆ, ಅದನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳುತ್ತೇವೆ’ ಎಂದರು.</p>.<p>ಪುರಸಭೆ ಮುಖ್ಯಾಧಿಕಾರಿ ಎಚ್.ಎ. ಕುಮಾರ್, ಎಂಜಿನಿಯರ್ಗಳಾದ ಸುಮತಿ, ಹರೀಶ್, ಉಪ ತಹಸೀಲ್ದಾರ್ ಉಷಾ, ಬಿಡಿಎ ಎಂಜಿನಿಯರ್ಗಳಾದ ನವೀನ್, ಸ್ಥಳೀಯ ಮುಖಂಡರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>