<p><strong>ನೆಲಮಂಗಲ:</strong> ತಾಲ್ಲೂಕಿನ ತಡಶೀಘಟ್ಟದ ಪುರಾತನ ಲಕ್ಷ್ಮೀನರಸಿಂಹಸ್ವಾಮಿ ಬ್ರಹ್ಮರಥೋತ್ಸವವು ಮಂಗಳವಾರ ಮಧ್ಯಾಹ್ನ ಭಕ್ತರ ಸಮ್ಮುಖದಲ್ಲಿ ನಡೆಯಿತು.</p>.<p>ಕಂಬದ ಲಕ್ಷ್ಮೀನರಸಿಂಹಸ್ವಾಮಿ ಎಂದೇ ಪ್ರಖ್ಯಾತಿ ಹೊಂದಿದ್ದು, ಗರುಡ ಪಕ್ಷ ರಥ ಪ್ರದಕ್ಷಿಣೆ ಹಾಕಿದ ಮೇಲೆ ತೇರನ್ನು ಎಳೆಯುವುದು ಇಲ್ಲಿನ ವಿಶೇಷ.</p>.<p>ಗರುಡ ಪಕ್ಷಿ ರಥ ಪ್ರದಕ್ಷಿಣೆ ಹಾಕುವುದನ್ನೇ ಕಾಯುತ್ತಿದ್ದ ಭಕ್ತರು ಗರುಡ ಪಕ್ಷಿ ಬರುತ್ತಿದ್ದಂತೆ ಸ್ವಾಮಿಗೆ ಜೈಕಾರ ಕೂಗಿದರು.<br />ಸಂಭ್ರಮದ ನಡುವೆ ರಥವನ್ನು ಎಳೆಯಲಾಯಿತು. ಭಕ್ತರು ತಮ್ಮ ಹರಕೆ ತೀರಿಸಿದರು.</p>.<p><strong>ಕಬ್ಬಾಳಮ್ಮ ದೇವಿ ರಥೋತ್ಸವ<br />ರಾಜರಾಜೇಶ್ವರಿನಗರ:</strong> ಅರೇಹಳ್ಳಿ ಬಳಿಯ ತಪೋವನ ಕ್ಷೇತ್ರ ಹನುಮಗಿರಿ ಕಬ್ಬಾಳಮ್ಮ ದೇವಿಯ 20ನೇ ವರ್ಷದ ಬ್ರಹ್ಮರಥೋತ್ಸವ ಸಂಭ್ರಮದಿಂದ ನಡೆಯಿತು.</p>.<p>ತಪೋವನ ಕ್ಷೇತ್ರದ ಸಂಸ್ಥಾಪಕ ಅಧ್ಯಕ್ಷ ವಿ.ಆಂಜನಪ್ಪ, ಅಧ್ಯಕ್ಷ ಡಿ.ಪುರುಷೋತ್ತಮ್, ಸಮಿತಿಯ ಕೆ.ಮರಿಯಪ್ಪ, ಎಂ.ಗೋಪಾಲ್, ಸುರೇಶ್ ಕುಮಾರ್ ನೇತೃತ್ವದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ನಡೆದವು.</p>.<p>ರಥೋತ್ಸವದ ಸಮಯದಲ್ಲಿ ವಿವಿಧ ಜಾನಪದ ಕಲಾ ತಂಡಗಳ ಪ್ರದರ್ಶನ ನಡೆಯಿತು.</p>.<p>ಬಮೂಲ್ ಮಾಜಿ ಅಧ್ಯಕ್ಷ ಆರ್.ಕೆ.ರಮೇಶ್, ಪಾಲಿಕೆ ಮಾಜಿ ಸದಸ್ಯರಾದ ಹನುಮಂತಯ್ಯ, ರಮೇಶ್ ರಾಜು, ಬಿಎಂಟಿಸಿ ಮಾಜಿ ನಿರ್ದೇಶಕ ವಿಜಯಕುಮಾರ್, ಉತ್ತರಹಳ್ಳಿ ಹೋಬಳಿ ಒಕ್ಕಲಿಗರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಈಶ್ವರ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನೆಲಮಂಗಲ:</strong> ತಾಲ್ಲೂಕಿನ ತಡಶೀಘಟ್ಟದ ಪುರಾತನ ಲಕ್ಷ್ಮೀನರಸಿಂಹಸ್ವಾಮಿ ಬ್ರಹ್ಮರಥೋತ್ಸವವು ಮಂಗಳವಾರ ಮಧ್ಯಾಹ್ನ ಭಕ್ತರ ಸಮ್ಮುಖದಲ್ಲಿ ನಡೆಯಿತು.</p>.<p>ಕಂಬದ ಲಕ್ಷ್ಮೀನರಸಿಂಹಸ್ವಾಮಿ ಎಂದೇ ಪ್ರಖ್ಯಾತಿ ಹೊಂದಿದ್ದು, ಗರುಡ ಪಕ್ಷ ರಥ ಪ್ರದಕ್ಷಿಣೆ ಹಾಕಿದ ಮೇಲೆ ತೇರನ್ನು ಎಳೆಯುವುದು ಇಲ್ಲಿನ ವಿಶೇಷ.</p>.<p>ಗರುಡ ಪಕ್ಷಿ ರಥ ಪ್ರದಕ್ಷಿಣೆ ಹಾಕುವುದನ್ನೇ ಕಾಯುತ್ತಿದ್ದ ಭಕ್ತರು ಗರುಡ ಪಕ್ಷಿ ಬರುತ್ತಿದ್ದಂತೆ ಸ್ವಾಮಿಗೆ ಜೈಕಾರ ಕೂಗಿದರು.<br />ಸಂಭ್ರಮದ ನಡುವೆ ರಥವನ್ನು ಎಳೆಯಲಾಯಿತು. ಭಕ್ತರು ತಮ್ಮ ಹರಕೆ ತೀರಿಸಿದರು.</p>.<p><strong>ಕಬ್ಬಾಳಮ್ಮ ದೇವಿ ರಥೋತ್ಸವ<br />ರಾಜರಾಜೇಶ್ವರಿನಗರ:</strong> ಅರೇಹಳ್ಳಿ ಬಳಿಯ ತಪೋವನ ಕ್ಷೇತ್ರ ಹನುಮಗಿರಿ ಕಬ್ಬಾಳಮ್ಮ ದೇವಿಯ 20ನೇ ವರ್ಷದ ಬ್ರಹ್ಮರಥೋತ್ಸವ ಸಂಭ್ರಮದಿಂದ ನಡೆಯಿತು.</p>.<p>ತಪೋವನ ಕ್ಷೇತ್ರದ ಸಂಸ್ಥಾಪಕ ಅಧ್ಯಕ್ಷ ವಿ.ಆಂಜನಪ್ಪ, ಅಧ್ಯಕ್ಷ ಡಿ.ಪುರುಷೋತ್ತಮ್, ಸಮಿತಿಯ ಕೆ.ಮರಿಯಪ್ಪ, ಎಂ.ಗೋಪಾಲ್, ಸುರೇಶ್ ಕುಮಾರ್ ನೇತೃತ್ವದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ನಡೆದವು.</p>.<p>ರಥೋತ್ಸವದ ಸಮಯದಲ್ಲಿ ವಿವಿಧ ಜಾನಪದ ಕಲಾ ತಂಡಗಳ ಪ್ರದರ್ಶನ ನಡೆಯಿತು.</p>.<p>ಬಮೂಲ್ ಮಾಜಿ ಅಧ್ಯಕ್ಷ ಆರ್.ಕೆ.ರಮೇಶ್, ಪಾಲಿಕೆ ಮಾಜಿ ಸದಸ್ಯರಾದ ಹನುಮಂತಯ್ಯ, ರಮೇಶ್ ರಾಜು, ಬಿಎಂಟಿಸಿ ಮಾಜಿ ನಿರ್ದೇಶಕ ವಿಜಯಕುಮಾರ್, ಉತ್ತರಹಳ್ಳಿ ಹೋಬಳಿ ಒಕ್ಕಲಿಗರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಈಶ್ವರ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>