ಕಾಡಂಚಲ್ಲಿ ಮಹಿಳೆಯ ಮನೆ ಇದ್ದು ಚಿರತೆ ದಾಳಿ ಮಾಡಿದ ಸ್ಥಳವನ್ನು ಪರಿಶೀಲಿಸಿದ್ದೇವೆ. ಮಹಿಳೆಯನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದೇವೆ. ಚಿರತೆ ಉಗುರಿನಿಂದ ಗಾಯವಾಗಿದ್ದು ಚಿರತೆ ಸೆರೆ ಹಿಡಿಯಲು ಬೋನು ಇಟ್ಟಿದ್ದೇವೆ.
–ಎಸ್. ಶ್ರೀಧರ್ ತಾಲ್ಲೂಕು ವಲಯ ಅರಣ್ಯ ಅಧಿಕಾರಿ ನೆಲಮಂಗಲ
ಚಿರತೆ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವಂತೆ ಅರಣ್ಯ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಗಾಯಗೊಂಡ ಮಹಿಳೆಗೆ ಸೂಕ್ತ ಪರಿಹಾರ ಒದಗಿಸುವ ಪ್ರಯತ್ನ ಮಾಡಲಾಗುವುದು.