<p><strong>ಬೆಂಗಳೂರು:</strong> ಉನ್ನತ ಶಿಕ್ಷಣ ಬೋಧನೆಗಷ್ಟೇ ಸೀಮಿತವಾಗಬಾರದು. ವಾಸ್ತವದ ಪ್ರಯೋಗಗಳಿಗೆ ತೆರೆದುಕೊಳ್ಳುವ ರೀತಿ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಬೇಕು ಎಂದು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಜಿ.ಜಗದೀಶ್ ಹೇಳಿದರು.</p>.<p>ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ಹಮ್ಮಿಕೊಂಡಿದ್ದ ‘ಉನ್ನತ ಶಿಕ್ಷಣದಲ್ಲಿ 21ನೇ ಶತಮಾನದ ಕೌಶಲಗಳು’ ಕುರಿತ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಬದಲಾವಣೆಗೆ ತಕ್ಕಂತೆ ಉನ್ನತ ಶಿಕ್ಷಣ ಸಂಸ್ಥೆಗಳೂ ಸಜ್ಜುಗೊಳ್ಳಬೇಕು. ಕಲಿಕಾ ವಿಧಾನಗಳು ಬದಲಾಗಬೇಕು. ಅಧ್ಯಾಪಕರು ನಿರಂತರವಾಗಿ ಪುನಃಶ್ಚೇತನಗೊಳ್ಳಬೇಕು. ಜಗತ್ತಿನ ಶಿಕ್ಷಣ ವ್ಯವಸ್ಥೆ ಜತೆಗೆ ರಾಜ್ಯದ ವಿದ್ಯಾರ್ಥಿಗಳನ್ನೂ ಸಿದ್ಧಗೊಳಿಸಬೇಕು. ಅದಕ್ಕೆ ಅಗತ್ಯವಾದ ಕೌಶಲಗಳನ್ನು ಹೇಳಿಕೊಡಬೇಕು ಎಂದರು.</p>.<p>ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಕ ಎಸ್.ಬಿ. ಅಪ್ಪಾಜಿ ಗೌಡ, ಹೆಚ್ಚುವರಿ ನಿರ್ದೇಶಕಿ ಜಿ. ಶೋಭಾ, ಆಡಳಿತಾಧಿಕಾರಿ ಶೋಭಾ ಟಿ.ಆರ್, ಜಂಟಿ ನಿರ್ದೇಶಕ ಕೆ. ರಾಮಕೃಷ್ಣ ರೆಡ್ಡಿ, ಪ್ರಾಂಶುಪಾಲ ಪಿ.ಟಿ.ಶ್ರೀನಿವಾಸ ನಾಯಕ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಉನ್ನತ ಶಿಕ್ಷಣ ಬೋಧನೆಗಷ್ಟೇ ಸೀಮಿತವಾಗಬಾರದು. ವಾಸ್ತವದ ಪ್ರಯೋಗಗಳಿಗೆ ತೆರೆದುಕೊಳ್ಳುವ ರೀತಿ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಬೇಕು ಎಂದು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಜಿ.ಜಗದೀಶ್ ಹೇಳಿದರು.</p>.<p>ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ಹಮ್ಮಿಕೊಂಡಿದ್ದ ‘ಉನ್ನತ ಶಿಕ್ಷಣದಲ್ಲಿ 21ನೇ ಶತಮಾನದ ಕೌಶಲಗಳು’ ಕುರಿತ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಬದಲಾವಣೆಗೆ ತಕ್ಕಂತೆ ಉನ್ನತ ಶಿಕ್ಷಣ ಸಂಸ್ಥೆಗಳೂ ಸಜ್ಜುಗೊಳ್ಳಬೇಕು. ಕಲಿಕಾ ವಿಧಾನಗಳು ಬದಲಾಗಬೇಕು. ಅಧ್ಯಾಪಕರು ನಿರಂತರವಾಗಿ ಪುನಃಶ್ಚೇತನಗೊಳ್ಳಬೇಕು. ಜಗತ್ತಿನ ಶಿಕ್ಷಣ ವ್ಯವಸ್ಥೆ ಜತೆಗೆ ರಾಜ್ಯದ ವಿದ್ಯಾರ್ಥಿಗಳನ್ನೂ ಸಿದ್ಧಗೊಳಿಸಬೇಕು. ಅದಕ್ಕೆ ಅಗತ್ಯವಾದ ಕೌಶಲಗಳನ್ನು ಹೇಳಿಕೊಡಬೇಕು ಎಂದರು.</p>.<p>ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಕ ಎಸ್.ಬಿ. ಅಪ್ಪಾಜಿ ಗೌಡ, ಹೆಚ್ಚುವರಿ ನಿರ್ದೇಶಕಿ ಜಿ. ಶೋಭಾ, ಆಡಳಿತಾಧಿಕಾರಿ ಶೋಭಾ ಟಿ.ಆರ್, ಜಂಟಿ ನಿರ್ದೇಶಕ ಕೆ. ರಾಮಕೃಷ್ಣ ರೆಡ್ಡಿ, ಪ್ರಾಂಶುಪಾಲ ಪಿ.ಟಿ.ಶ್ರೀನಿವಾಸ ನಾಯಕ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>