<p><strong>ಯಲಹಂಕ</strong>: ದೇಸಿ ಕ್ರೀಡೆಗಳ ಕುರಿತು ಜಾಗೃತಿಮೂಡಿಸುವ ಮತ್ತು ಪುನರುಜ್ಜೀವನಗೊಳಿಸುವ ಉದ್ದೇಶದೊಂದಿಗೆ ರೇವಾ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ‘ಖೇಲ್ ಖೋಜ್’ ಕಾರ್ಯಕ್ರಮಕ್ಕೆ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವಾಲಯದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್ ಚಾಲನೆ ನೀಡಿದರು.</p>.<p>ನಂತರ ಮಾತನಾಡಿದ ಅವರು, ‘ಕ್ರೀಡೆ ವಿದ್ಯಾರ್ಥಿಗಳ ಜೀವನದಲ್ಲಿ ನಿರ್ಣಾಯಕ ಪಾತ್ರವಹಿಸುತ್ತದೆ. ಜೊತೆಗೆ ಮಾನಸಿಕ ಕೌಶಲಗಳ ಸುಧಾರಣೆಗೆ ಸಹಕಾರಿಯಾಗಿದೆ. ತಂಡದ ಕಾರ್ಯ ವಿಸ್ತರಿಸಿ, ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ‘ ಎಂದರು.</p>.<p>ವಿಶ್ವವಿದ್ಯಾಲಯದ ಕುಲಾಧಿಪತಿ ಡಾ.ಪಿ.ಶ್ಯಾಮರಾಜು ಮಾತನಾಡಿ, ‘ಸಾಂಪ್ರದಾಯಿಕ ಹಾಗೂ ಸ್ಥಳೀಯ ಕ್ರೀಡೆಗಳನ್ನು ಪುನಶ್ಚೇತನಗೊಳಿಸುವ ಉದ್ದೇಶದಿಂದ ವಿಶ್ವವಿದ್ಯಾಲಯದಲ್ಲಿ ಹಳೆಯ ಆಟಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ‘ ಎಂದು ತಿಳಿಸಿದರು.</p>.<p>‘ದೇಸಿ ಕಲೆಗಳಿಗೆ ಹೆಚ್ಚಿನ ಒತ್ತು ನೀಡಬೇಕಾದುದು ಅತಿಮುಖ್ಯ. ಈ ಕಲೆಗಳನ್ನು ಕಲಿಯುವುದರ ಜೊತೆಗೆ ತಮ್ಮ ಮಕ್ಕಳಿಗೂ ಕಲಿಸಿ, ಉಳಿಸಿ–ಬೆಳೆಸಬೇಕು. ಸರ್ಕಾರಗಳು ಸಹ ಈ ಕಲೆಗಳ ಬೆಳವಣಿಗೆಗೆ ಹೆಚ್ಚಿನ ಒತ್ತು ನೀಡಬೇಕು‘ ಎಂದು ರಾಷ್ಟ್ರಮಟ್ಟದ ಮಲ್ಲಕಂಬ ಪಟು ಶ್ರೀಶೈಲ ಹೂಗಾರ ಅಭಿಪ್ರಾಯಪಟ್ಟರು.</p>.<p> ಕಲರಿಪಯಟ್ಟು, ತಂಗ್ ತಾ. ಕೋಲುವರಸೆ, ಕತ್ತಿವರಸೆ, ಚೌಪರ್, ಸಿಲಂಬಮ್, ಮಲ್ಲಕಂಬ ಮತ್ತಿತರ ಹಳೆಯ ಸಮರ ಕಲೆಗಳನ್ನು ವಿದ್ಯಾರ್ಥಿಗಳು ಪ್ರದರ್ಶಿಸಿ ಜನರ ಗಮನ ಸೆಳೆದರು.</p>.<p>ಸಾಂಪ್ರದಾಯಿಕ ಕ್ರೀಡೆಗಳಿಗಾಗಿ ತೆರೆಯಲಾಗಿದ್ದ 35 ಮಳಿಗೆಗಳಲ್ಲಿ ಶಾಲಾ–ಕಾಲೇಜು ವಿದ್ಯಾರ್ಥಿಗಳು ಗೋಲಿ, ಗಿಲ್ಲಿ ದಾಂಡು, ಲಗೋರಿ, ಬುಗುರಿ, ಚೌಕಾಬಾರ, ಪಗಡೆ ಮತ್ತಿತರ ಆಟಗಳನ್ನು ಆಡಿ ಸಂಭ್ರಮಿಸಿದರು. </p>.<p>ಕುಲಪತಿ ಡಾ.ಎಂ.ಧನಂಜಯ, ಕುಲಸಚಿವ ಡಾ.ಎನ್.ರಮೇಶ್, ಟ್ರಸ್ಟಿ ಉಮೇಶ್.ಎಸ್.ರಾಜು ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ</strong>: ದೇಸಿ ಕ್ರೀಡೆಗಳ ಕುರಿತು ಜಾಗೃತಿಮೂಡಿಸುವ ಮತ್ತು ಪುನರುಜ್ಜೀವನಗೊಳಿಸುವ ಉದ್ದೇಶದೊಂದಿಗೆ ರೇವಾ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ‘ಖೇಲ್ ಖೋಜ್’ ಕಾರ್ಯಕ್ರಮಕ್ಕೆ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವಾಲಯದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್ ಚಾಲನೆ ನೀಡಿದರು.</p>.<p>ನಂತರ ಮಾತನಾಡಿದ ಅವರು, ‘ಕ್ರೀಡೆ ವಿದ್ಯಾರ್ಥಿಗಳ ಜೀವನದಲ್ಲಿ ನಿರ್ಣಾಯಕ ಪಾತ್ರವಹಿಸುತ್ತದೆ. ಜೊತೆಗೆ ಮಾನಸಿಕ ಕೌಶಲಗಳ ಸುಧಾರಣೆಗೆ ಸಹಕಾರಿಯಾಗಿದೆ. ತಂಡದ ಕಾರ್ಯ ವಿಸ್ತರಿಸಿ, ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ‘ ಎಂದರು.</p>.<p>ವಿಶ್ವವಿದ್ಯಾಲಯದ ಕುಲಾಧಿಪತಿ ಡಾ.ಪಿ.ಶ್ಯಾಮರಾಜು ಮಾತನಾಡಿ, ‘ಸಾಂಪ್ರದಾಯಿಕ ಹಾಗೂ ಸ್ಥಳೀಯ ಕ್ರೀಡೆಗಳನ್ನು ಪುನಶ್ಚೇತನಗೊಳಿಸುವ ಉದ್ದೇಶದಿಂದ ವಿಶ್ವವಿದ್ಯಾಲಯದಲ್ಲಿ ಹಳೆಯ ಆಟಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ‘ ಎಂದು ತಿಳಿಸಿದರು.</p>.<p>‘ದೇಸಿ ಕಲೆಗಳಿಗೆ ಹೆಚ್ಚಿನ ಒತ್ತು ನೀಡಬೇಕಾದುದು ಅತಿಮುಖ್ಯ. ಈ ಕಲೆಗಳನ್ನು ಕಲಿಯುವುದರ ಜೊತೆಗೆ ತಮ್ಮ ಮಕ್ಕಳಿಗೂ ಕಲಿಸಿ, ಉಳಿಸಿ–ಬೆಳೆಸಬೇಕು. ಸರ್ಕಾರಗಳು ಸಹ ಈ ಕಲೆಗಳ ಬೆಳವಣಿಗೆಗೆ ಹೆಚ್ಚಿನ ಒತ್ತು ನೀಡಬೇಕು‘ ಎಂದು ರಾಷ್ಟ್ರಮಟ್ಟದ ಮಲ್ಲಕಂಬ ಪಟು ಶ್ರೀಶೈಲ ಹೂಗಾರ ಅಭಿಪ್ರಾಯಪಟ್ಟರು.</p>.<p> ಕಲರಿಪಯಟ್ಟು, ತಂಗ್ ತಾ. ಕೋಲುವರಸೆ, ಕತ್ತಿವರಸೆ, ಚೌಪರ್, ಸಿಲಂಬಮ್, ಮಲ್ಲಕಂಬ ಮತ್ತಿತರ ಹಳೆಯ ಸಮರ ಕಲೆಗಳನ್ನು ವಿದ್ಯಾರ್ಥಿಗಳು ಪ್ರದರ್ಶಿಸಿ ಜನರ ಗಮನ ಸೆಳೆದರು.</p>.<p>ಸಾಂಪ್ರದಾಯಿಕ ಕ್ರೀಡೆಗಳಿಗಾಗಿ ತೆರೆಯಲಾಗಿದ್ದ 35 ಮಳಿಗೆಗಳಲ್ಲಿ ಶಾಲಾ–ಕಾಲೇಜು ವಿದ್ಯಾರ್ಥಿಗಳು ಗೋಲಿ, ಗಿಲ್ಲಿ ದಾಂಡು, ಲಗೋರಿ, ಬುಗುರಿ, ಚೌಕಾಬಾರ, ಪಗಡೆ ಮತ್ತಿತರ ಆಟಗಳನ್ನು ಆಡಿ ಸಂಭ್ರಮಿಸಿದರು. </p>.<p>ಕುಲಪತಿ ಡಾ.ಎಂ.ಧನಂಜಯ, ಕುಲಸಚಿವ ಡಾ.ಎನ್.ರಮೇಶ್, ಟ್ರಸ್ಟಿ ಉಮೇಶ್.ಎಸ್.ರಾಜು ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>