<p><strong>ಬೆಂಗಳೂರು</strong>: ತಮ್ಮ ವಿರುದ್ಧ ಮೂರು ಪ್ರಕರಣಗಳು ಲೋಕಾಯುಕ್ತದಲ್ಲಿ ವಿಚಾರಣೆಗೆ ಬಾಕಿ ಇರುವ ಮಾಹಿತಿ ಮುಚ್ಚಿಟ್ಟು ತನಿಖಾ ಸಂಸ್ಥೆಯ ತಾಂತ್ರಿಕ ವಿಭಾಗದ ಮುಖ್ಯಸ್ಥರ ಹುದ್ದೆಗೆ ವರ್ಗಾವಣೆಯಾಗಿ ಬಂದಿರುವ ಆರೋಪದ ಮೇಲೆ ಮುಖ್ಯ ಎಂಜಿನಿಯರ್ ಟಿ.ಡಿ. ನಂಜುಂಡಪ್ಪ ಅವರಿಗೆ ಲೋಕಾಯುಕ್ತರು ನೋಟಿಸ್ ಜಾರಿ ಮಾಡಿದ್ದಾರೆ.</p>.<p>ಲೋಕಾಯುಕ್ತದ ತಾಂತ್ರಿಕ ವಿಭಾಗದ ಮುಖ್ಯ ಎಂಜಿನಿಯರ್ ಹುದ್ದೆಯಲ್ಲಿದ್ದ ಎಂ.ವಿ. ಪ್ರಸಾದ್ ಅವರನ್ನು ಮಾರ್ಚ್ 15ರಂದು ವರ್ಗಾವಣೆ ಮಾಡಲಾಗಿತ್ತು. ಈ ಹುದ್ದೆಗೆ ನಂಜುಂಡಪ್ಪ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿತ್ತು.</p>.<p>ಕರ್ನಾಟಕ ಗೃಹ ಮಂಡಳಿ (ಕೆಎಚ್ಬಿ) ಮುಖ್ಯ ಎಂಜಿನಿಯರ್ ಹುದ್ದೆಯಲ್ಲಿದ್ದ ಅವಧಿಯಲ್ಲಿ ಕೆಂಗೇರಿಯ ಬಂಡೆಮಠ ಕೆಎಚ್ಬಿ ಬಡಾವಣೆಯ ಕಾಮಗಾರಿಯಲ್ಲಿ ಅವ್ಯವಹಾರ ನಡೆಸಿದ ಆರೋಪದ ಮೇಲೆ ನಂಜುಂಡಪ್ಪ ವಿರುದ್ಧ ಬಂಡೆಮಠ ಕೆಎಚ್ಬಿ ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ ಲೋಕಾಯುಕ್ತಕ್ಕೆ ದೂರು ಸಲ್ಲಿಸಿತ್ತು. 2023ರಿಂದಲೂ ಈ ಪ್ರಕರಣದ ವಿಚಾರಣೆ ನಡೆಯುತ್ತಿದೆ.</p>.<p>ಲೋಕಾಯುಕ್ತದಲ್ಲಿ ವಿಚಾರಣೆ ಬಾಕಿ ಇರುವ ಅಧಿಕಾರಿಯನ್ನು ಅದೇ ತನಿಖಾ ಸಂಸ್ಥೆಯ ಮುಖ್ಯ ಎಂಜಿನಿಯರ್ ಹುದ್ದೆಗೆ ನೇಮಿಸಿರುವುದನ್ನು ಪ್ರಶ್ನಿಸಿ ಬಂಡೆಮಠ ಕೆಎಚ್ಬಿ ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಬಿ. ರಾಮಕೃಷ್ಣೇಗೌಡ ಲೋಕಾಯುಕ್ತರಿಗೆ ದೂರು ಸಲ್ಲಿಸಿದ್ದರು. ಆ ಬಳಿಕ ಸಂಸ್ಥೆಯ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ನಂಜುಂಡಪ್ಪ ವಿರುದ್ಧ ಮೂರು ದೂರುಗಳ ವಿಚಾರಣೆ ಬಾಕಿ ಇರುವ ಮಾಹಿತಿ ಲಭಿಸಿದೆ.</p>.<p>ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ, ‘ನಂಜುಂಡಪ್ಪ ವಿರುದ್ಧ ಮೂರು ಪ್ರಕರಣಗಳ ವಿಚಾರಣೆ ಬಾಕಿ ಇರುವ ಮಾಹಿತಿ ಸಿಕ್ಕಿದೆ. ಮಾಹಿತಿ ಮುಚ್ಚಿಟ್ಟು ಸಂಸ್ಥೆಯಲ್ಲಿ ಕರ್ತವ್ಯಕ್ಕೆ ಹಾಜರಾಗಿರುವ ಬಗ್ಗೆ ನೋಟಿಸ್ ಜಾರಿ ಮಾಡಿದ್ದೇವೆ’ ಎಂದರು.</p>.<p>‘ಲೋಕಾಯುಕ್ತದಲ್ಲಿ ವಿಚಾರಣೆ ಎದುರಿಸುತ್ತಿರುವವರನ್ನು ನಮ್ಮ ಸಂಸ್ಥೆಯಲ್ಲೇ ನೇಮಿಸಿಕೊಳ್ಳುವುದಿಲ್ಲ. ನಂಜುಂಡಪ್ಪ ಅವರ ಉತ್ತರವನ್ನು ಪರಿಶೀಲಿಸಿದ ಬಳಿಕ ಅವರನ್ನು ವಾಪಸ್ ಕಳುಹಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ತಮ್ಮ ವಿರುದ್ಧ ಮೂರು ಪ್ರಕರಣಗಳು ಲೋಕಾಯುಕ್ತದಲ್ಲಿ ವಿಚಾರಣೆಗೆ ಬಾಕಿ ಇರುವ ಮಾಹಿತಿ ಮುಚ್ಚಿಟ್ಟು ತನಿಖಾ ಸಂಸ್ಥೆಯ ತಾಂತ್ರಿಕ ವಿಭಾಗದ ಮುಖ್ಯಸ್ಥರ ಹುದ್ದೆಗೆ ವರ್ಗಾವಣೆಯಾಗಿ ಬಂದಿರುವ ಆರೋಪದ ಮೇಲೆ ಮುಖ್ಯ ಎಂಜಿನಿಯರ್ ಟಿ.ಡಿ. ನಂಜುಂಡಪ್ಪ ಅವರಿಗೆ ಲೋಕಾಯುಕ್ತರು ನೋಟಿಸ್ ಜಾರಿ ಮಾಡಿದ್ದಾರೆ.</p>.<p>ಲೋಕಾಯುಕ್ತದ ತಾಂತ್ರಿಕ ವಿಭಾಗದ ಮುಖ್ಯ ಎಂಜಿನಿಯರ್ ಹುದ್ದೆಯಲ್ಲಿದ್ದ ಎಂ.ವಿ. ಪ್ರಸಾದ್ ಅವರನ್ನು ಮಾರ್ಚ್ 15ರಂದು ವರ್ಗಾವಣೆ ಮಾಡಲಾಗಿತ್ತು. ಈ ಹುದ್ದೆಗೆ ನಂಜುಂಡಪ್ಪ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿತ್ತು.</p>.<p>ಕರ್ನಾಟಕ ಗೃಹ ಮಂಡಳಿ (ಕೆಎಚ್ಬಿ) ಮುಖ್ಯ ಎಂಜಿನಿಯರ್ ಹುದ್ದೆಯಲ್ಲಿದ್ದ ಅವಧಿಯಲ್ಲಿ ಕೆಂಗೇರಿಯ ಬಂಡೆಮಠ ಕೆಎಚ್ಬಿ ಬಡಾವಣೆಯ ಕಾಮಗಾರಿಯಲ್ಲಿ ಅವ್ಯವಹಾರ ನಡೆಸಿದ ಆರೋಪದ ಮೇಲೆ ನಂಜುಂಡಪ್ಪ ವಿರುದ್ಧ ಬಂಡೆಮಠ ಕೆಎಚ್ಬಿ ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ ಲೋಕಾಯುಕ್ತಕ್ಕೆ ದೂರು ಸಲ್ಲಿಸಿತ್ತು. 2023ರಿಂದಲೂ ಈ ಪ್ರಕರಣದ ವಿಚಾರಣೆ ನಡೆಯುತ್ತಿದೆ.</p>.<p>ಲೋಕಾಯುಕ್ತದಲ್ಲಿ ವಿಚಾರಣೆ ಬಾಕಿ ಇರುವ ಅಧಿಕಾರಿಯನ್ನು ಅದೇ ತನಿಖಾ ಸಂಸ್ಥೆಯ ಮುಖ್ಯ ಎಂಜಿನಿಯರ್ ಹುದ್ದೆಗೆ ನೇಮಿಸಿರುವುದನ್ನು ಪ್ರಶ್ನಿಸಿ ಬಂಡೆಮಠ ಕೆಎಚ್ಬಿ ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಬಿ. ರಾಮಕೃಷ್ಣೇಗೌಡ ಲೋಕಾಯುಕ್ತರಿಗೆ ದೂರು ಸಲ್ಲಿಸಿದ್ದರು. ಆ ಬಳಿಕ ಸಂಸ್ಥೆಯ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ನಂಜುಂಡಪ್ಪ ವಿರುದ್ಧ ಮೂರು ದೂರುಗಳ ವಿಚಾರಣೆ ಬಾಕಿ ಇರುವ ಮಾಹಿತಿ ಲಭಿಸಿದೆ.</p>.<p>ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ, ‘ನಂಜುಂಡಪ್ಪ ವಿರುದ್ಧ ಮೂರು ಪ್ರಕರಣಗಳ ವಿಚಾರಣೆ ಬಾಕಿ ಇರುವ ಮಾಹಿತಿ ಸಿಕ್ಕಿದೆ. ಮಾಹಿತಿ ಮುಚ್ಚಿಟ್ಟು ಸಂಸ್ಥೆಯಲ್ಲಿ ಕರ್ತವ್ಯಕ್ಕೆ ಹಾಜರಾಗಿರುವ ಬಗ್ಗೆ ನೋಟಿಸ್ ಜಾರಿ ಮಾಡಿದ್ದೇವೆ’ ಎಂದರು.</p>.<p>‘ಲೋಕಾಯುಕ್ತದಲ್ಲಿ ವಿಚಾರಣೆ ಎದುರಿಸುತ್ತಿರುವವರನ್ನು ನಮ್ಮ ಸಂಸ್ಥೆಯಲ್ಲೇ ನೇಮಿಸಿಕೊಳ್ಳುವುದಿಲ್ಲ. ನಂಜುಂಡಪ್ಪ ಅವರ ಉತ್ತರವನ್ನು ಪರಿಶೀಲಿಸಿದ ಬಳಿಕ ಅವರನ್ನು ವಾಪಸ್ ಕಳುಹಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>