<p><strong>ಬೆಂಗಳೂರು</strong>: ಬಾಕಿ ಇರುವ ಜಿಎಸ್ಟಿಯ ಮೊತ್ತವನ್ನು ಕಡಿಮೆ ಮಾಡಲು ₹80,000 ಲಂಚ ಪಡೆಯುತ್ತಿದ್ದಾಗ ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ಸೋಮವಾರ ಬಂಧಿಸಿದ್ದಾರೆ.</p>.<p>ಮಹದೇವಪುರದ ಮಹೇಶ್ವರಿನಗರದ ಉದ್ಯಮಿ ಪವನ್ ಕುಮಾರ್ ಎನ್. ಅವರು ತಮ್ಮ ಉದ್ಯಮದ ಜಿಎಸ್ಟಿ ಬಾಕಿ ಉಳಿಸಿಕೊಂಡಿದ್ದರು. ಕೋರಮಂಗಲ ವಿಭಾಗದ ವಾಣಿಜ್ಯ ತೆರಿಗೆ ಅಧಿಕಾರಿ ಶೇಖರ್ ಪಿ. ಪಾಟೀಲ ಅವರು ಜಿಎಸ್ಟಿ ಮೊತ್ತವನ್ನು ಕಡಿಮೆ ಮಾಡಿಕೊಡುವುದಾಗಿ ಹೇಳಿದ್ದರು. ಇದಕ್ಕಾಗಿ ₹80,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು.</p>.<p>ಈ ಸಂಬಂಧ ಪವನ್ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರ ಮಾರ್ಗದರ್ಶನದಂತೆ ಸೋಮವಾರ ಶೇಖರ್ ಅವರಿಗೆ, ಅವರ ಕಚೇರಿಯಲ್ಲೇ ₹80,000 ನೀಡಿದ್ದರು. ಅದರಲ್ಲಿ ₹55,500 ಅನ್ನು ತನ್ನಲ್ಲಿಯೇ ಉಳಿಸಿಕೊಂಡು, ಉಳಿದ ₹29,500ನ್ನು ಆನ್ಲೈನ್ ಮೂಲಕ ಜಿಎಸ್ಟಿ ಪಾವತಿಸುವಂತೆ ದೂರುದಾರರಿಗೆ ವಾಪಸ್ ಮಾಡಿದ್ದರು. </p>.<p>ಇದೇ ವೇಳೆ ದಾಳಿ ನಡೆಸಿದ್ದ ಲೋಕಾಯುಕ್ತ ಪೊಲೀಸರು, ಲಂಚದ ಸಮೇತ ಆರೋಪಿಯನ್ನು ಬಂಧಿಸಿದರು. ಲೋಕಾಯುಕ್ತ ಎಸ್ಪಿ ಕೋನ ವಂಶಿಕೃಷ್ಣ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ತನಿಖೆ ಮುಂದುವರೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬಾಕಿ ಇರುವ ಜಿಎಸ್ಟಿಯ ಮೊತ್ತವನ್ನು ಕಡಿಮೆ ಮಾಡಲು ₹80,000 ಲಂಚ ಪಡೆಯುತ್ತಿದ್ದಾಗ ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ಸೋಮವಾರ ಬಂಧಿಸಿದ್ದಾರೆ.</p>.<p>ಮಹದೇವಪುರದ ಮಹೇಶ್ವರಿನಗರದ ಉದ್ಯಮಿ ಪವನ್ ಕುಮಾರ್ ಎನ್. ಅವರು ತಮ್ಮ ಉದ್ಯಮದ ಜಿಎಸ್ಟಿ ಬಾಕಿ ಉಳಿಸಿಕೊಂಡಿದ್ದರು. ಕೋರಮಂಗಲ ವಿಭಾಗದ ವಾಣಿಜ್ಯ ತೆರಿಗೆ ಅಧಿಕಾರಿ ಶೇಖರ್ ಪಿ. ಪಾಟೀಲ ಅವರು ಜಿಎಸ್ಟಿ ಮೊತ್ತವನ್ನು ಕಡಿಮೆ ಮಾಡಿಕೊಡುವುದಾಗಿ ಹೇಳಿದ್ದರು. ಇದಕ್ಕಾಗಿ ₹80,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು.</p>.<p>ಈ ಸಂಬಂಧ ಪವನ್ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರ ಮಾರ್ಗದರ್ಶನದಂತೆ ಸೋಮವಾರ ಶೇಖರ್ ಅವರಿಗೆ, ಅವರ ಕಚೇರಿಯಲ್ಲೇ ₹80,000 ನೀಡಿದ್ದರು. ಅದರಲ್ಲಿ ₹55,500 ಅನ್ನು ತನ್ನಲ್ಲಿಯೇ ಉಳಿಸಿಕೊಂಡು, ಉಳಿದ ₹29,500ನ್ನು ಆನ್ಲೈನ್ ಮೂಲಕ ಜಿಎಸ್ಟಿ ಪಾವತಿಸುವಂತೆ ದೂರುದಾರರಿಗೆ ವಾಪಸ್ ಮಾಡಿದ್ದರು. </p>.<p>ಇದೇ ವೇಳೆ ದಾಳಿ ನಡೆಸಿದ್ದ ಲೋಕಾಯುಕ್ತ ಪೊಲೀಸರು, ಲಂಚದ ಸಮೇತ ಆರೋಪಿಯನ್ನು ಬಂಧಿಸಿದರು. ಲೋಕಾಯುಕ್ತ ಎಸ್ಪಿ ಕೋನ ವಂಶಿಕೃಷ್ಣ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ತನಿಖೆ ಮುಂದುವರೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>