<p><strong>ಬೆಂಗಳೂರು</strong>: ‘ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದ’ ಆರೋಪದಡಿ ಜೈಲು ಸೇರಿ ಜಾಮೀನು ಮೇಲೆ ಹೊರಬಂದಿರುವ ಯುವಕನೊಬ್ಬ, ‘ಯುವತಿ ಹಾಗೂ ಇತರರು ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದಾರೆ’ ಎಂದು ಆರೋಪಿಸಿ ರಾಜರಾಜೇಶ್ವರಿನಗರ ಠಾಣೆಗೆ ದೂರು ನೀಡಿದ್ದಾರೆ.</p>.<p>‘ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ 24 ವರ್ಷದ ಯುವಕನ ವಿರುದ್ಧ 31 ವರ್ಷದ ಯುವತಿ ದೂರು ನೀಡಿದ್ದರು. ಅದರನ್ವಯ ಯುವಕನನ್ನು ಬಂಧಿಸಲಾಗಿತ್ತು. ಇದೀಗ ಅದೇ ಯುವಕ, ಯುವತಿ ಮೇಲೆಯೇ ದೂರು ನೀಡಿದ್ದಾನೆ. ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p><strong>ದೂರಿನ ವಿವರ</strong>: ‘ಕೆಲಸ ಮಾಡುತ್ತಿದ್ದ ಕಂಪನಿಯಲ್ಲಿ ಪರಿಚಯವಾಗಿದ್ದ ಯುವತಿ ಜೊತೆ ಸಲುಗೆ ಇಟ್ಟುಕೊಂಡಿದ್ದೆ. ಇಬ್ಬರೂ ಹಲವೆಡೆ ಸುತ್ತಾಡಿದ್ದೆವು. ₹ 20 ಲಕ್ಷ ನೀಡುವಂತೆ ಯುವತಿ ಬೇಡಿಕೆ ಇರಿಸಿದ್ದರು. ಹಣ ನೀಡದಿದ್ದರಿಂದ ನನ್ನ ವಿರುದ್ಧ ಕೋಣನಕುಂಟೆ ಠಾಣೆಯಲ್ಲಿ ಸುಳ್ಳು ದೂರು ನೀಡಿದ್ದರು’ ಎಂದು ಯುವಕ ದೂರಿನಲ್ಲಿ ತಿಳಿಸಿದ್ದಾರೆ.</p>.<p>‘ಜೈಲಿನಿಂದ ಬಿಡುಗಡೆಗೊಂಡ ಬಳಿಕವೂ ಯುವತಿ ಹಾಗೂ ಇತರರು, ಹಣಕ್ಕಾಗಿ ಪೀಡಿಸುತ್ತಿದ್ದಾರೆ. ಜೀವ ಬೆದರಿಕೆಯೊಡ್ಡುತ್ತಿದ್ದಾರೆ’ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದ’ ಆರೋಪದಡಿ ಜೈಲು ಸೇರಿ ಜಾಮೀನು ಮೇಲೆ ಹೊರಬಂದಿರುವ ಯುವಕನೊಬ್ಬ, ‘ಯುವತಿ ಹಾಗೂ ಇತರರು ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದಾರೆ’ ಎಂದು ಆರೋಪಿಸಿ ರಾಜರಾಜೇಶ್ವರಿನಗರ ಠಾಣೆಗೆ ದೂರು ನೀಡಿದ್ದಾರೆ.</p>.<p>‘ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ 24 ವರ್ಷದ ಯುವಕನ ವಿರುದ್ಧ 31 ವರ್ಷದ ಯುವತಿ ದೂರು ನೀಡಿದ್ದರು. ಅದರನ್ವಯ ಯುವಕನನ್ನು ಬಂಧಿಸಲಾಗಿತ್ತು. ಇದೀಗ ಅದೇ ಯುವಕ, ಯುವತಿ ಮೇಲೆಯೇ ದೂರು ನೀಡಿದ್ದಾನೆ. ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p><strong>ದೂರಿನ ವಿವರ</strong>: ‘ಕೆಲಸ ಮಾಡುತ್ತಿದ್ದ ಕಂಪನಿಯಲ್ಲಿ ಪರಿಚಯವಾಗಿದ್ದ ಯುವತಿ ಜೊತೆ ಸಲುಗೆ ಇಟ್ಟುಕೊಂಡಿದ್ದೆ. ಇಬ್ಬರೂ ಹಲವೆಡೆ ಸುತ್ತಾಡಿದ್ದೆವು. ₹ 20 ಲಕ್ಷ ನೀಡುವಂತೆ ಯುವತಿ ಬೇಡಿಕೆ ಇರಿಸಿದ್ದರು. ಹಣ ನೀಡದಿದ್ದರಿಂದ ನನ್ನ ವಿರುದ್ಧ ಕೋಣನಕುಂಟೆ ಠಾಣೆಯಲ್ಲಿ ಸುಳ್ಳು ದೂರು ನೀಡಿದ್ದರು’ ಎಂದು ಯುವಕ ದೂರಿನಲ್ಲಿ ತಿಳಿಸಿದ್ದಾರೆ.</p>.<p>‘ಜೈಲಿನಿಂದ ಬಿಡುಗಡೆಗೊಂಡ ಬಳಿಕವೂ ಯುವತಿ ಹಾಗೂ ಇತರರು, ಹಣಕ್ಕಾಗಿ ಪೀಡಿಸುತ್ತಿದ್ದಾರೆ. ಜೀವ ಬೆದರಿಕೆಯೊಡ್ಡುತ್ತಿದ್ದಾರೆ’ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>