<p><strong>ಬೆಂಗಳೂರು</strong>: ಕೆಎಲ್ಇ ಸೊಸೈಟಿ ಅಡಿಯಲ್ಲಿ ಬರುವ ರಾಜಾಜಿನಗರದ ಎಸ್. ನಿಜಲಿಂಗಪ್ಪ ಕಾಲೇಜಿನ ವಜ್ರಮಹೋತ್ಸವದ ಅಂಗವಾಗಿ ತಾಂತ್ರಿಕ ಮತ್ತು ತಾಂತ್ರಿಕೇತರ ವಿದ್ಯಾರ್ಥಿಗಳಿಗಾಗಿ ಅ.20ರಂದು ಮೆಗಾ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.</p>.<p>ಕರ್ನಾಟಕ ಕೌಶಲ ಅಭಿವೃದ್ಧಿ ನಿಗಮ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನದ ರಾಷ್ಟ್ರೀಯ ಸಂಸ್ಥೆಯ ಕೌಶಲ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ವಿಭಾಗ, ರಾಷ್ಟ್ರೀಯ ವೃತ್ತಿ ಸೇವೆ– ಅಂಗವಿಕಲರ ಕೇಂದ್ರ, ರಾಜ್ಯ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಗಳ ಸಹಯೋಗದೊಂದಿಗೆ ಹಮ್ಮಿಕೊಂಡಿರುವ ಈ ಮೇಳದಲ್ಲಿ 60 ಕಂಪನಿಗಳು ಭಾಗವಹಿಸಲಿವೆ.</p>.<p>ಅಂಗವಿಕಲ ಅಭ್ಯರ್ಥಿಗಳಿಗೂ ಹೆಸರು ನೋಂದಣಿಗೆ ಅವಕಾಶವಿದೆ ಎಂದು ಕೆಎಲ್ಇ ಸಂಸ್ಥೆಯ ನಿರ್ದೇಶಕ ಎಂ.ಎಂ.ಕವಲಗಿಮಠ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>2,700 ಅಭ್ಯರ್ಥಿಗಳು ಆನ್ಲೈನ್ ಪೋರ್ಟಲ್ನಲ್ಲಿ ಹೆಸರು ನೋಂದಾಯಿಸಿಕೊಂಡಿದ್ದಾರೆ. ಆಯ್ಕೆಯಾದವರಿಗೆ ಅಂದೇ ನೇಮಕಾತಿಪತ್ರ ನೀಡಲಾಗುವುದು ಎಂದು ಸಂಸ್ಥೆಯ ಉಪ ನಿರ್ದೇಶಕ ದಿವಾಕರ್ ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕೆಎಲ್ಇ ಸೊಸೈಟಿ ಅಡಿಯಲ್ಲಿ ಬರುವ ರಾಜಾಜಿನಗರದ ಎಸ್. ನಿಜಲಿಂಗಪ್ಪ ಕಾಲೇಜಿನ ವಜ್ರಮಹೋತ್ಸವದ ಅಂಗವಾಗಿ ತಾಂತ್ರಿಕ ಮತ್ತು ತಾಂತ್ರಿಕೇತರ ವಿದ್ಯಾರ್ಥಿಗಳಿಗಾಗಿ ಅ.20ರಂದು ಮೆಗಾ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.</p>.<p>ಕರ್ನಾಟಕ ಕೌಶಲ ಅಭಿವೃದ್ಧಿ ನಿಗಮ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನದ ರಾಷ್ಟ್ರೀಯ ಸಂಸ್ಥೆಯ ಕೌಶಲ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ವಿಭಾಗ, ರಾಷ್ಟ್ರೀಯ ವೃತ್ತಿ ಸೇವೆ– ಅಂಗವಿಕಲರ ಕೇಂದ್ರ, ರಾಜ್ಯ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಗಳ ಸಹಯೋಗದೊಂದಿಗೆ ಹಮ್ಮಿಕೊಂಡಿರುವ ಈ ಮೇಳದಲ್ಲಿ 60 ಕಂಪನಿಗಳು ಭಾಗವಹಿಸಲಿವೆ.</p>.<p>ಅಂಗವಿಕಲ ಅಭ್ಯರ್ಥಿಗಳಿಗೂ ಹೆಸರು ನೋಂದಣಿಗೆ ಅವಕಾಶವಿದೆ ಎಂದು ಕೆಎಲ್ಇ ಸಂಸ್ಥೆಯ ನಿರ್ದೇಶಕ ಎಂ.ಎಂ.ಕವಲಗಿಮಠ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>2,700 ಅಭ್ಯರ್ಥಿಗಳು ಆನ್ಲೈನ್ ಪೋರ್ಟಲ್ನಲ್ಲಿ ಹೆಸರು ನೋಂದಾಯಿಸಿಕೊಂಡಿದ್ದಾರೆ. ಆಯ್ಕೆಯಾದವರಿಗೆ ಅಂದೇ ನೇಮಕಾತಿಪತ್ರ ನೀಡಲಾಗುವುದು ಎಂದು ಸಂಸ್ಥೆಯ ಉಪ ನಿರ್ದೇಶಕ ದಿವಾಕರ್ ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>