<p><strong>ಕೆ.ಆರ್.ಪುರ:</strong> ಬೆಂಗಳೂರು ಪೂರ್ವ ತಾಲ್ಲೂಕಿನ ಕೆ.ಆರ್.ಪುರ ಹಾಗೂ ಮಹದೇವಪುರ ಕ್ಷೇತ್ರಕ್ಕೆ ಮೂಲಸೌಕರ್ಯ ಕಲ್ಪಿಸಬೇಕು ಮತ್ತು ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿ ಪ್ರಜಾ ವಿಮೋಚನಾ ಚಳವಳಿ ಸಂಘಟನೆಯ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕೆ.ಎ.ದಯಾನಂದ ಅವರಿಗೆ ಮನವಿ ಸಲ್ಲಿಸಿದರು.</p>.<p>ಕೆ.ಆರ್.ಪುರ, ಮಹದೇವಪುರ ಕ್ಷೇತ್ರದಲ್ಲಿ ಕುಡಿಯುವ ನೀರು, ರಸ್ತೆ, ಚರಂಡಿ ಇನ್ನಿತರ ಸೌಕರ್ಯಗಳ ಕೊರತೆಯಿದೆ. ಸಮಸ್ಯೆ ಪರಿಹರಿಸಲು ಹಲವಾರು ಬಾರಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು ಹೇಳಿದರು.</p>.<p>ಗುಂಜೂರು ಗ್ರಾಮದಲ್ಲಿ ಸಮುದಾಯ ಭವನ ನಿರ್ಮಿಸಬೇಕು, ಅಂಬೇಡ್ಕರ್ ಭವನಕ್ಕೆ ಭೂಮಿ ಮೀಸಲಿಡಬೇಕು. ಒತ್ತುವರಿಯಾಗಿರುವ ಸ್ಮಶಾನ ಜಾಗ ತೆರವು ಮಾಡಬೇಕು ಎಂದು ಪ್ರಜಾ ವಿಮೋಚನಾ ಚಳವಳಿ ಸಂಘಟನೆ ಅಧ್ಯಕ್ಷ ಆನೇಕಲ್ ಕೃಷ್ಣಪ್ಪ ಒತ್ತಾಯಿಸಿದರು.</p>.<p>ಗುಂಜೂರು, ಮಾರತ್ತಹಳ್ಳಿ, ರಾಮಗೊಂಡನಹಳ್ಳಿ, ವರ್ತೂರು ಗ್ರಾಮಗಳ ವಸತಿ ರಹಿತ ಬಡ ಕುಟುಂಬಗಳು ವಸತಿಗಾಗಿ ಅರ್ಜಿ ಸಲ್ಲಿಸಿದ್ದು, ಶೀಘ್ರ ಇತ್ಯರ್ಥಪಡಿಸಬೇಕು ಎಂದು ರಾಜ್ಯ ಕಾರ್ಯದರ್ಶಿ ಅದೂರು ಕೆ.ದೇವರಾಜ್ ಅವರು ಒತ್ತಾಯಿಸಿದರು.</p>.<p>ಬೆಂಗಳೂರು ವಿಭಾಗೀಯ ಘಟಕದ ಅಧ್ಯಕ್ಷ ಮಾದೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪುರ:</strong> ಬೆಂಗಳೂರು ಪೂರ್ವ ತಾಲ್ಲೂಕಿನ ಕೆ.ಆರ್.ಪುರ ಹಾಗೂ ಮಹದೇವಪುರ ಕ್ಷೇತ್ರಕ್ಕೆ ಮೂಲಸೌಕರ್ಯ ಕಲ್ಪಿಸಬೇಕು ಮತ್ತು ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿ ಪ್ರಜಾ ವಿಮೋಚನಾ ಚಳವಳಿ ಸಂಘಟನೆಯ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕೆ.ಎ.ದಯಾನಂದ ಅವರಿಗೆ ಮನವಿ ಸಲ್ಲಿಸಿದರು.</p>.<p>ಕೆ.ಆರ್.ಪುರ, ಮಹದೇವಪುರ ಕ್ಷೇತ್ರದಲ್ಲಿ ಕುಡಿಯುವ ನೀರು, ರಸ್ತೆ, ಚರಂಡಿ ಇನ್ನಿತರ ಸೌಕರ್ಯಗಳ ಕೊರತೆಯಿದೆ. ಸಮಸ್ಯೆ ಪರಿಹರಿಸಲು ಹಲವಾರು ಬಾರಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು ಹೇಳಿದರು.</p>.<p>ಗುಂಜೂರು ಗ್ರಾಮದಲ್ಲಿ ಸಮುದಾಯ ಭವನ ನಿರ್ಮಿಸಬೇಕು, ಅಂಬೇಡ್ಕರ್ ಭವನಕ್ಕೆ ಭೂಮಿ ಮೀಸಲಿಡಬೇಕು. ಒತ್ತುವರಿಯಾಗಿರುವ ಸ್ಮಶಾನ ಜಾಗ ತೆರವು ಮಾಡಬೇಕು ಎಂದು ಪ್ರಜಾ ವಿಮೋಚನಾ ಚಳವಳಿ ಸಂಘಟನೆ ಅಧ್ಯಕ್ಷ ಆನೇಕಲ್ ಕೃಷ್ಣಪ್ಪ ಒತ್ತಾಯಿಸಿದರು.</p>.<p>ಗುಂಜೂರು, ಮಾರತ್ತಹಳ್ಳಿ, ರಾಮಗೊಂಡನಹಳ್ಳಿ, ವರ್ತೂರು ಗ್ರಾಮಗಳ ವಸತಿ ರಹಿತ ಬಡ ಕುಟುಂಬಗಳು ವಸತಿಗಾಗಿ ಅರ್ಜಿ ಸಲ್ಲಿಸಿದ್ದು, ಶೀಘ್ರ ಇತ್ಯರ್ಥಪಡಿಸಬೇಕು ಎಂದು ರಾಜ್ಯ ಕಾರ್ಯದರ್ಶಿ ಅದೂರು ಕೆ.ದೇವರಾಜ್ ಅವರು ಒತ್ತಾಯಿಸಿದರು.</p>.<p>ಬೆಂಗಳೂರು ವಿಭಾಗೀಯ ಘಟಕದ ಅಧ್ಯಕ್ಷ ಮಾದೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>