<p><strong>ಬೆಂಗಳೂರು</strong>: ಜಗಜ್ಯೋತಿ ಬಸವಣ್ಣ ಅವರನ್ನು ಶುಕ್ರವಾರ ಶ್ರದ್ಧಾಭಕ್ತಿಯಿಂದ ಸ್ಮರಣೆ ಮಾಡಲಾಯಿತು.</p>.<p>ದಾಸರಹಳ್ಳಿ ವಾರ್ಡ್ ಬಸವವನ ಉದ್ಯಾನದಲ್ಲಿ ಮಾಜಿ ಸಚಿವ ವಿ.ಸೋಮಣ್ಣ ಅವರು ಕಾಯಕ ಯೋಗಿ ಬಸವೇಶ್ವರರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು.</p>.<p>ಬಸವೇಶ್ವರರು ಹಾಕಿಕೊಟ್ಟ ದಾರಿಯಲ್ಲಿ ಸಾಗಿದಾಗ ಮಾತ್ರ ಸಮಾನತೆ ಸಾಧಿಸಬಹುದು. ಜಾತಿ ನಿರ್ಮೂಲನೆ ಮಾಡಿ ಸಮ ಸಮಾಜ ನಿರ್ಮಾಣ ಮಾಡಬಹುದು ಎಂದು ಸೋಮಣ್ಣ ತಿಳಿಸಿದರು.</p>.<p>ಮಂಡಲ ಅಧ್ಯಕ್ಷ ವಿಶ್ವನಾಥಗೌಡ, ಮಾಜಿ ಪಾಲಿಕೆ ಸದಸ್ಯರಾದ ದಾಸೇಗೌಡ, ಬಿಜೆಪಿ ಮುಖಂಡರಾದ ಶ್ರೀಧರ್, ಎಚ್. ರಮೇಶ್, ವೇಣುಗೋಪಾಲ್, ವಾರ್ಡ್ ಅಧ್ಯಕ್ಷ ಹರೀಶ್ ಉಪಸ್ಥಿತರಿದ್ದರು.</p>.<p>ಬಿಜೆಪಿ: ಅಣ್ಣ ಬಸವಣ್ಣ 12ನೇ ಶತಮಾನದಲ್ಲೇ ಸಮಸಮಾಜದ ನಿರ್ಮಾಣದ ಕನಸು ಕಂಡವರು. ತುಳಿತಕ್ಕೆ ಒಳಗಾದ ಸಮಾಜಕ್ಕೆ ನ್ಯಾಯ ಕೊಡಬೇಕೆಂಬ ಆಶಯವನ್ನು ಹೊಂದಿ ಕಾರ್ಯ ನಿರ್ವಹಿಸಿದ್ದರು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ನೆನಪು ಮಾಡಿಕೊಂಡರು. </p>.<p>ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಬಸವಣ್ಣನ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಅವರು ಮಾತನಾಡಿದರು.</p>.<p>‘ಬಸವಣ್ಣ ನಿಜಜೀವನದ ಅನುಭವಗಳನ್ನು ವಚನಗಳ ಮೂಲಕ ಸಾಮಾನ್ಯ ಜನರಿಗೂ ತಲುಪುವಂತೆ ಮಾಡಿದ್ದಾರೆ. ವಚನಗಳು ನಮ್ಮ ಜೀವನಕ್ಕೆ ದಾರಿದೀಪ’ ಎಂದು ಹೇಳಿದರು.</p>.<p>ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಡಿ. ಲಕ್ಷ್ಮಿನಾರಾಯಣ, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್, ರಾಜ್ಯ ಕಾರ್ಯದರ್ಶಿ ತಮ್ಮೇಶ್ ಗೌಡ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಹರೀಶ್, ಮುಖಂಡರಾದ ಚಿ.ನಾ.ರಾಮು, ಕಾರ್ಯಾಲಯ ಸಹ ಕಾರ್ಯದರ್ಶಿ ವಿಶ್ವನಾಥ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಜಗಜ್ಯೋತಿ ಬಸವಣ್ಣ ಅವರನ್ನು ಶುಕ್ರವಾರ ಶ್ರದ್ಧಾಭಕ್ತಿಯಿಂದ ಸ್ಮರಣೆ ಮಾಡಲಾಯಿತು.</p>.<p>ದಾಸರಹಳ್ಳಿ ವಾರ್ಡ್ ಬಸವವನ ಉದ್ಯಾನದಲ್ಲಿ ಮಾಜಿ ಸಚಿವ ವಿ.ಸೋಮಣ್ಣ ಅವರು ಕಾಯಕ ಯೋಗಿ ಬಸವೇಶ್ವರರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು.</p>.<p>ಬಸವೇಶ್ವರರು ಹಾಕಿಕೊಟ್ಟ ದಾರಿಯಲ್ಲಿ ಸಾಗಿದಾಗ ಮಾತ್ರ ಸಮಾನತೆ ಸಾಧಿಸಬಹುದು. ಜಾತಿ ನಿರ್ಮೂಲನೆ ಮಾಡಿ ಸಮ ಸಮಾಜ ನಿರ್ಮಾಣ ಮಾಡಬಹುದು ಎಂದು ಸೋಮಣ್ಣ ತಿಳಿಸಿದರು.</p>.<p>ಮಂಡಲ ಅಧ್ಯಕ್ಷ ವಿಶ್ವನಾಥಗೌಡ, ಮಾಜಿ ಪಾಲಿಕೆ ಸದಸ್ಯರಾದ ದಾಸೇಗೌಡ, ಬಿಜೆಪಿ ಮುಖಂಡರಾದ ಶ್ರೀಧರ್, ಎಚ್. ರಮೇಶ್, ವೇಣುಗೋಪಾಲ್, ವಾರ್ಡ್ ಅಧ್ಯಕ್ಷ ಹರೀಶ್ ಉಪಸ್ಥಿತರಿದ್ದರು.</p>.<p>ಬಿಜೆಪಿ: ಅಣ್ಣ ಬಸವಣ್ಣ 12ನೇ ಶತಮಾನದಲ್ಲೇ ಸಮಸಮಾಜದ ನಿರ್ಮಾಣದ ಕನಸು ಕಂಡವರು. ತುಳಿತಕ್ಕೆ ಒಳಗಾದ ಸಮಾಜಕ್ಕೆ ನ್ಯಾಯ ಕೊಡಬೇಕೆಂಬ ಆಶಯವನ್ನು ಹೊಂದಿ ಕಾರ್ಯ ನಿರ್ವಹಿಸಿದ್ದರು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ನೆನಪು ಮಾಡಿಕೊಂಡರು. </p>.<p>ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಬಸವಣ್ಣನ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಅವರು ಮಾತನಾಡಿದರು.</p>.<p>‘ಬಸವಣ್ಣ ನಿಜಜೀವನದ ಅನುಭವಗಳನ್ನು ವಚನಗಳ ಮೂಲಕ ಸಾಮಾನ್ಯ ಜನರಿಗೂ ತಲುಪುವಂತೆ ಮಾಡಿದ್ದಾರೆ. ವಚನಗಳು ನಮ್ಮ ಜೀವನಕ್ಕೆ ದಾರಿದೀಪ’ ಎಂದು ಹೇಳಿದರು.</p>.<p>ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಡಿ. ಲಕ್ಷ್ಮಿನಾರಾಯಣ, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್, ರಾಜ್ಯ ಕಾರ್ಯದರ್ಶಿ ತಮ್ಮೇಶ್ ಗೌಡ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಹರೀಶ್, ಮುಖಂಡರಾದ ಚಿ.ನಾ.ರಾಮು, ಕಾರ್ಯಾಲಯ ಸಹ ಕಾರ್ಯದರ್ಶಿ ವಿಶ್ವನಾಥ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>