<p><strong>ಬೆಂಗಳೂರು: </strong>ಗೊಟ್ಟಿಗೆರೆ–ನಾಗವಾರ ಮೆಟ್ರೊ ರೈಲು ಮಾರ್ಗದ ಮತ್ತೊಂದು ಸುರಂಗ ಕೊರೆಯುವ ಕಾಮಗಾರಿ ಪೂರ್ಣಗೊಂಡಿದ್ದು, ಎಂ.ಜಿ.ರಸ್ತೆಯಿಂದ ಕಾಮಗಾರಿ ಆರಂಭಿಸಿದ್ದ ಸುರಂಗ ಕೊರೆಯುವ ಯಂತ್ರ(ಟಿಬಿಎಂ) ‘ಲಾವಿ’ ಬುಧವಾರ ರಾಷ್ಟ್ರೀಯ ಮಿಲಿಟರಿ ಶಾಲೆ ನಿಲ್ದಾಣದ(ವೆಲ್ಲಾರ ಜಂಕ್ಷನ್) ಬಳಿ ಹೊರಬಂದಿದೆ.</p>.<p>‘2022ರ ಮೇ 20ರಂದು ಹೊರಟಿದ್ದ ಟಿಬಿಎಂ, 1134 ಮೀಟರ್ ಸುರಂಗ ಕೊರೆದಿದೆ. ಇದರೊಂದಿಗೆ 14 ಕಿಲೋ ಮೀಟರ್ ಸುರಂಗ ಮಾರ್ಗದಲ್ಲಿ ಒಟ್ಟು ಶೇ 72ರಷ್ಟು ಪೂರ್ಣಗೊಂಡಂತಾಗಿದೆ’ ಎಂದು ಬಿಎಂಆರ್ಸಿಎಲ್ ತಿಳಿಸಿದೆ.</p>.<p>ಒಟ್ಟಾರೆ 21,245 ಕಿಲೋ ಮೀಟರ್ ಸುರಂಗ ಕೊರೆಯುವ ಮಾರ್ಗವನ್ನು ನಾಲ್ಕು ಪ್ಯಾಕೇಜ್ಗಳಾಗಿ ವಿಂಗಡಿಸಲಾಗಿದ್ದು, 9 ಯಂತ್ರಗಳನ್ನು ನಿಯೋಜಿಸಲಾಗಿದೆ. ಇವುಗಳ ಪೈಕಿ 3 ಟಿಬಿಎಂಗಳಾದ ಊರ್ಜಾ, ವರದ ಮತ್ತು ಅವ್ನಿ ಈಗಾಗಲೇ ತಮ್ಮ ಕಾಮಗಾರಿ ಪೂರ್ಣಗೊಳಿಸಿವೆ ಎಂದು ವಿವರಿಸಿದೆ.</p>.<p>15,210 ಮೀಟರ್ ಸುರಂಗ ಕೊರೆಯಲಾಗಿದ್ದು, ಪಾಟರಿ ಟೌನ್ ನಿಲ್ದಾಣದಿಂದ ಶಾದಿಮಹಲ್ ತನಕ ಸುರಂಗ ಕೊರೆಯುತ್ತಿರುವ ಟಿಬಿಎಂ ವಿಂಧ್ಯಾ, ಈ ತಿಂಗಳ ಅಂತ್ಯದ ವೇಳೆಗೆ ತನ್ನ ಕಾರ್ಯವನ್ನು ಪೂರ್ಣಗೊಳಿಸಲು ಯೋಜಿಸಿದೆ ಎಂದು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಗೊಟ್ಟಿಗೆರೆ–ನಾಗವಾರ ಮೆಟ್ರೊ ರೈಲು ಮಾರ್ಗದ ಮತ್ತೊಂದು ಸುರಂಗ ಕೊರೆಯುವ ಕಾಮಗಾರಿ ಪೂರ್ಣಗೊಂಡಿದ್ದು, ಎಂ.ಜಿ.ರಸ್ತೆಯಿಂದ ಕಾಮಗಾರಿ ಆರಂಭಿಸಿದ್ದ ಸುರಂಗ ಕೊರೆಯುವ ಯಂತ್ರ(ಟಿಬಿಎಂ) ‘ಲಾವಿ’ ಬುಧವಾರ ರಾಷ್ಟ್ರೀಯ ಮಿಲಿಟರಿ ಶಾಲೆ ನಿಲ್ದಾಣದ(ವೆಲ್ಲಾರ ಜಂಕ್ಷನ್) ಬಳಿ ಹೊರಬಂದಿದೆ.</p>.<p>‘2022ರ ಮೇ 20ರಂದು ಹೊರಟಿದ್ದ ಟಿಬಿಎಂ, 1134 ಮೀಟರ್ ಸುರಂಗ ಕೊರೆದಿದೆ. ಇದರೊಂದಿಗೆ 14 ಕಿಲೋ ಮೀಟರ್ ಸುರಂಗ ಮಾರ್ಗದಲ್ಲಿ ಒಟ್ಟು ಶೇ 72ರಷ್ಟು ಪೂರ್ಣಗೊಂಡಂತಾಗಿದೆ’ ಎಂದು ಬಿಎಂಆರ್ಸಿಎಲ್ ತಿಳಿಸಿದೆ.</p>.<p>ಒಟ್ಟಾರೆ 21,245 ಕಿಲೋ ಮೀಟರ್ ಸುರಂಗ ಕೊರೆಯುವ ಮಾರ್ಗವನ್ನು ನಾಲ್ಕು ಪ್ಯಾಕೇಜ್ಗಳಾಗಿ ವಿಂಗಡಿಸಲಾಗಿದ್ದು, 9 ಯಂತ್ರಗಳನ್ನು ನಿಯೋಜಿಸಲಾಗಿದೆ. ಇವುಗಳ ಪೈಕಿ 3 ಟಿಬಿಎಂಗಳಾದ ಊರ್ಜಾ, ವರದ ಮತ್ತು ಅವ್ನಿ ಈಗಾಗಲೇ ತಮ್ಮ ಕಾಮಗಾರಿ ಪೂರ್ಣಗೊಳಿಸಿವೆ ಎಂದು ವಿವರಿಸಿದೆ.</p>.<p>15,210 ಮೀಟರ್ ಸುರಂಗ ಕೊರೆಯಲಾಗಿದ್ದು, ಪಾಟರಿ ಟೌನ್ ನಿಲ್ದಾಣದಿಂದ ಶಾದಿಮಹಲ್ ತನಕ ಸುರಂಗ ಕೊರೆಯುತ್ತಿರುವ ಟಿಬಿಎಂ ವಿಂಧ್ಯಾ, ಈ ತಿಂಗಳ ಅಂತ್ಯದ ವೇಳೆಗೆ ತನ್ನ ಕಾರ್ಯವನ್ನು ಪೂರ್ಣಗೊಳಿಸಲು ಯೋಜಿಸಿದೆ ಎಂದು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>