<p><strong>ಬೆಂಗಳೂರು</strong>: ವಿಜಯನಗರದ ಹೋಟೆಲ್ವೊಂದರಲ್ಲಿ ನಿಂತಿದ್ದ ಯುವತಿಗೆ ಹಿಂದಿನಿಂದ ಸ್ಪರ್ಶಿಸಿ ಅಸಭ್ಯವಾಗಿ ವರ್ತಿಸಿದ್ದ ಯುವಕನಿಗಾಗಿ ವಿಜಯನಗರ ಪೊಲೀಸರು ಶೋಧ ನಡೆಸುತ್ತಿದ್ದಾರೆ.</p>.<p>ವಿಜಯನಗರದ ಆರ್ಪಿಸಿ ಬಡಾವಣೆಯಲ್ಲಿರುವ ಹೋಟೆಲ್ಗೆ ಮೂವರು ಯುವಕರು ಬಂದಿದ್ದರು. ಅದೇ ಸಮಯದಲ್ಲಿ ಯುವತಿ ಸಹ, ಹೋಟೆಲ್ನಿಂದ ತಿಂಡಿ ಪಾರ್ಸೆಲ್ ತೆಗೆದುಕೊಂಡು ಹೋಗಲು ಬಂದಿದ್ದರು. ಹಿಂದಿನಿಂದ ಬಂದ ಯುವಕನೊಬ್ಬ ಆ ಯುವತಿಗೆ ಸ್ಪರ್ಶಿಸಿ, ಅನುಚಿತವಾಗಿ ವರ್ತಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಹೋಟೆಲ್ನಲ್ಲಿದ್ದ ಸಿಸಿ ಟಿವಿ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಯಾಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊವೊಂದು ಹರಿದಾಡುತ್ತಿದೆ.</p>.<p>‘ಅನುಚಿತ ವರ್ತನೆಯನ್ನು ಪ್ರಶ್ನಿಸಿದ್ದ ಯುವತಿ ಮತ್ತು ಯುವಕನ ನಡುವೆ ಗಲಾಟೆ ನಡೆದಿದ್ದು, ಯುವತಿ ಕೂಗಾಟ ಕೇಳಿ ಸ್ಥಳೀಯರು ಜಮಾಯಿಸುತ್ತಿದ್ದಂತೆ ಯುವಕರ ಗುಂಪು ಅಲ್ಲಿಂದ ಪರಾರಿಯಾಗಿದೆ. ಹೋಟೆಲ್ ಸಿಬ್ಬಂದಿಯೇ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಯುವಕರಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ’ ಎಂದು ಮೂಲಗಳು ತಿಳಿಸಿವೆ.</p> <p>ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ವಿಜಯನಗರದ ಹೋಟೆಲ್ವೊಂದರಲ್ಲಿ ನಿಂತಿದ್ದ ಯುವತಿಗೆ ಹಿಂದಿನಿಂದ ಸ್ಪರ್ಶಿಸಿ ಅಸಭ್ಯವಾಗಿ ವರ್ತಿಸಿದ್ದ ಯುವಕನಿಗಾಗಿ ವಿಜಯನಗರ ಪೊಲೀಸರು ಶೋಧ ನಡೆಸುತ್ತಿದ್ದಾರೆ.</p>.<p>ವಿಜಯನಗರದ ಆರ್ಪಿಸಿ ಬಡಾವಣೆಯಲ್ಲಿರುವ ಹೋಟೆಲ್ಗೆ ಮೂವರು ಯುವಕರು ಬಂದಿದ್ದರು. ಅದೇ ಸಮಯದಲ್ಲಿ ಯುವತಿ ಸಹ, ಹೋಟೆಲ್ನಿಂದ ತಿಂಡಿ ಪಾರ್ಸೆಲ್ ತೆಗೆದುಕೊಂಡು ಹೋಗಲು ಬಂದಿದ್ದರು. ಹಿಂದಿನಿಂದ ಬಂದ ಯುವಕನೊಬ್ಬ ಆ ಯುವತಿಗೆ ಸ್ಪರ್ಶಿಸಿ, ಅನುಚಿತವಾಗಿ ವರ್ತಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಹೋಟೆಲ್ನಲ್ಲಿದ್ದ ಸಿಸಿ ಟಿವಿ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಯಾಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊವೊಂದು ಹರಿದಾಡುತ್ತಿದೆ.</p>.<p>‘ಅನುಚಿತ ವರ್ತನೆಯನ್ನು ಪ್ರಶ್ನಿಸಿದ್ದ ಯುವತಿ ಮತ್ತು ಯುವಕನ ನಡುವೆ ಗಲಾಟೆ ನಡೆದಿದ್ದು, ಯುವತಿ ಕೂಗಾಟ ಕೇಳಿ ಸ್ಥಳೀಯರು ಜಮಾಯಿಸುತ್ತಿದ್ದಂತೆ ಯುವಕರ ಗುಂಪು ಅಲ್ಲಿಂದ ಪರಾರಿಯಾಗಿದೆ. ಹೋಟೆಲ್ ಸಿಬ್ಬಂದಿಯೇ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಯುವಕರಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ’ ಎಂದು ಮೂಲಗಳು ತಿಳಿಸಿವೆ.</p> <p>ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>