‘ರಾಮಕೃಷ್ಣಯ್ಯ ಅವರು ಇತ್ತೀಚೆಗೆ ರಾತ್ರಿ 11 ಗಂಟೆ ಸುಮಾರಿಗೆ ನವರಂಗ ಚಿತ್ರಮಂದಿರ ಬಳಿ ಆಟೊ ಹತ್ತಿದ್ದರು. ಸ್ವಲ್ಪ ದೂರ ಪ್ರಯಾಣಿಸಿದ ಬಳಿಕ ಚಾಲಕ ಹಾಗೂ ಆತನ ಜತೆಯಲ್ಲಿದ್ದ ವ್ಯಕ್ತಿ ರಾಮಕೃಷ್ಣಯ್ಯ ಅವರಿಗೆ ಬೆದರಿಸಿದ್ದರು. ಬಳಿಕ ಚಾಕು ತೋರಿಸಿ ಮೊಬೈಲ್ ಫೋನ್ ಹಾಗೂ ನಗದು ಸುಲಿಗೆ ಮಾಡಿದ್ದರು. ನಂತರ, ವಿವಿಧೆಡೆ ಸುತ್ತಾಡಿಸಿ ಮಧ್ಯರಾತ್ರಿ 1.30ರ ಸುಮಾರಿಗೆ ಗೋವಿಂದರಾಜನಗರದ ಎಂಸಿ ಲೇಔಟ್ನ ಕ್ಯೂಟಿಸ್ ಆಸ್ಪತ್ರೆಯ ಬಳಿ ಬಿಟ್ಟು ಹೋಗಿದ್ದರು’ ಎಂದು ಪೊಲೀಸರು ಹೇಳಿದರು.