<p>ಬೆಂಗಳೂರು: ನಗರದ ಹಲವೆಡೆ ಮನೆಗಳಿಗೆ ನುಗ್ಗಿ ಚಿನ್ನಾಭರಣ ಕಳವು ಮಾಡಿ ಆ ಆಭರಣಗಳನ್ನು ಹೊರ ರಾಜ್ಯಗಳ ಚಿನ್ನಾಭರಣ ಅಂಗಡಿಗಳಿಗೆ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಕೋಣನಕೊಂಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ಕೋಣನಕುಂಟೆಯ ಇಮ್ರಾನ್ ಅಲಿಯಾಸ್ ‘ಚೋರ್’ ಇಮ್ರಾನ್ ಬಂಧಿತ.</p>.<p>ಆತನಿಂದ ₹1 ಕೋಟಿ ಮೌಲ್ಯದ ಚಿನ್ನಾಭರಣ, ಬೆಳ್ಳಿ ಸಾಮಗ್ರಿ ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.</p>.<p>ಬಂಧನದಿಂದ ಒಟ್ಟು 26 ಕಳವು ಪ್ರಕರಣಗಳು ಪತ್ತೆಯಾಗಿವೆ. ಆರೋಪಿಯು ವೃತ್ತಿಪರ ಕಳ್ಳನಾಗಿದ್ದು, ನಗರದ ವಿವಿಧೆಡೆ ಸುತ್ತಾಡಿ ಮನೆಗಳ್ಳತನ ಮಾಡುತ್ತಿದ್ದ. ನಂತರ, ಕದ್ದ ಚಿನ್ನಾಭರಣಗಳನ್ನು ಮೈಸೂರು ಸೇರಿದಂತೆ ಹೊರ ರಾಜ್ಯದಲ್ಲಿ ಮಾರಾಟ ಮಾಡುತ್ತಿದ್ದ. ಕೆಲವು ಆಭರಣಗಳನ್ನು ಗಿರವಿ ಇಡುತ್ತಿದ್ದ ಎಂದು ಪೊಲೀಸರು ಹೇಳಿದರು.</p>.<p>ಚುಂಚಘಟ್ಟದಲ್ಲಿ ವಾಸವಿರುವ ವ್ಯಕ್ತಿಯೊಬ್ಬರು ಮನೆಗೆ ಬೀಗ ಹಾಕಿಕೊಂಡು ಅಂಗಡಿಗೆ ಹೋಗಿದ್ದರು. ವಾಪಸ್ ರಾತ್ರಿ ಮನೆಗೆ ಬಂದು ನೋಡಿದಾಗ ಮನೆಯ ಮುಂಭಾಗದ ಬಾಗಿಲನ್ನು ಒಡೆದು ಒಳನುಗ್ಗಿದ್ದ ಆರೋಪಿ ಬೀರುವಿನಲ್ಲಿಟ್ಟಿದ್ದ 300 ಗ್ರಾಂ ಚಿನ್ನಾಭರಣ ಹಾಗೂ ₹1.70 ಲಕ್ಷ ನಗದು ಕಳವು ಮಾಡಿಕೊಂಡು ಹೋಗಿದ್ದು ಗೊತ್ತಾಗಿತ್ತು. ಮನೆ ಮಾಲೀಕರು ನೀಡಿದ ದೂರು ಆಧರಿಸಿ ಕಳ್ಳನನ್ನು ಪತ್ತೆಹಚ್ಚಿ ಬಂಧಿಸಲಾಯಿತು ಎಂದು ಪೊಲೀಸರು ಹೇಳಿದರು.</p>.<p>ಕೃತ್ಯ ನಡೆಸಿದ್ದ ಸ್ಥಳದಲ್ಲಿ ಅಳವಡಿಸಿದ್ದ ಸಿ.ಸಿ.ಟಿ.ವಿ. ಕ್ಯಾಮೆರಾದಲ್ಲಿ ಸೆರೆಯಾದ ದೃಶ್ಯಾವಳಿ ಪರಿಶೀಲನೆ ನಡೆಸಿ ಆರೋಪಿಯನ್ನು ಪತ್ತೆ ಮಾಡಲಾಯಿತು ಎಂದು ಪೊಲೀಸರು ತಿಳಿಸಿದರು.</p>.<p>ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಇಮ್ರಾನ್ ಮನೆ ಕಳ್ಳತನ ಮಾಡುತ್ತಿದ್ದ. 120ಕ್ಕೂ ಹೆಚ್ಚು ಕಳ್ಳತನ ಮಾಡಿದ್ದ ಎನ್ನಲಾಗಿದೆ. ಹೀಗಾಗಿ ಈತನನ್ನು ‘ಸೆಂಚುರಿ ಕಳ್ಳ’ ಎಂದೂ ಕರೆಯುತ್ತಿದ್ದರು. ಬೀಗ ಹಾಕಿದ್ದ ಮನೆಗಳನ್ನು ಗುರುತಿಸಿ ಒಬ್ಬನೇ ಬಂದು ಕಳ್ಳತನ ಮಾಡುವುದು ಈತನ ಅಪರಾಧ ಶೈಲಿ. ದೊಡ್ಡ ಮನೆಗಳಿಗೆ ಕನ್ನ ಹಾಕುವಂತಹ ಕೆಲವು ಕಳ್ಳತನ ಪ್ರಕರಣಗಳಲ್ಲಿ ಮಾತ್ರ ಸಹಾಯಕರನ್ನು ಕರೆದುಕೊಂಡು ಹೋಗುತ್ತಿದ್ದ ಎಂದು ಪೊಲೀಸರು ಹೇಳಿದರು.</p>.<p>₹50 ಸಾವಿರ ಬಹುಮಾನ ಘೋಷಣೆ:<br>ಚೋರ್ ಇಮ್ರಾನ್ ಕದ್ದ ಆಭರಣಗಳನ್ನು ಮುಂಬೈ, ಹೈದರಾಬಾದ್, ಮೈಸೂರು, ಬೆಂಗಳೂರು ಸೇರಿದಂತೆ ವಿವಿಧ ಸ್ಥಳಗಳಲ್ಲಿ ಜುವೆಲ್ಲರಿ ಅಂಗಡಿಗಳಲ್ಲಿ ಮಾರಾಟ ಮಾಡುತ್ತಿದ್ದ. ಇದರಿಂದ ಬಂದ ಹಣ ತೆಗೆದುಕೊಂಡು ಗೋವಾ ಹಾಗೂ ಮುಂಬೈಗಳಲ್ಲಿ ಉಳಿದುಕೊಂಡು ಮೋಜು ಮಾಡುತ್ತಿದ್ದ. ಹಣ ಖಾಲಿಯಾದ ಬಳಿಕ ಮತ್ತೆ ನಗರಕ್ಕೆ ಬಂದು ಬೀಗ ಹಾಕಿದ ಮನೆಗಳನ್ನು ಗುರುತಿಸಿ ಕಳವು ಮಾಡುತ್ತಿದ್ದ ಎಂಬುದು ವಿಚಾರಣೆಯಿಂದ ಗೊತ್ತಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.</p>.<p>ಪೊಲೀಸರ ಕಾರ್ಯಾಚರಣೆಗೆ ಪ್ರಶಂಸೆ ವ್ಯಕ್ತಪಡಿಸಿರುವ ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ಅವರು ಆರೋಪಿಯನ್ನು ಬಂಧಿಸಿದ ತಂಡಕ್ಕೆ ₹50 ಸಾವಿರ ಬಹುಮಾನ ಘೋಷಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ನಗರದ ಹಲವೆಡೆ ಮನೆಗಳಿಗೆ ನುಗ್ಗಿ ಚಿನ್ನಾಭರಣ ಕಳವು ಮಾಡಿ ಆ ಆಭರಣಗಳನ್ನು ಹೊರ ರಾಜ್ಯಗಳ ಚಿನ್ನಾಭರಣ ಅಂಗಡಿಗಳಿಗೆ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಕೋಣನಕೊಂಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ಕೋಣನಕುಂಟೆಯ ಇಮ್ರಾನ್ ಅಲಿಯಾಸ್ ‘ಚೋರ್’ ಇಮ್ರಾನ್ ಬಂಧಿತ.</p>.<p>ಆತನಿಂದ ₹1 ಕೋಟಿ ಮೌಲ್ಯದ ಚಿನ್ನಾಭರಣ, ಬೆಳ್ಳಿ ಸಾಮಗ್ರಿ ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.</p>.<p>ಬಂಧನದಿಂದ ಒಟ್ಟು 26 ಕಳವು ಪ್ರಕರಣಗಳು ಪತ್ತೆಯಾಗಿವೆ. ಆರೋಪಿಯು ವೃತ್ತಿಪರ ಕಳ್ಳನಾಗಿದ್ದು, ನಗರದ ವಿವಿಧೆಡೆ ಸುತ್ತಾಡಿ ಮನೆಗಳ್ಳತನ ಮಾಡುತ್ತಿದ್ದ. ನಂತರ, ಕದ್ದ ಚಿನ್ನಾಭರಣಗಳನ್ನು ಮೈಸೂರು ಸೇರಿದಂತೆ ಹೊರ ರಾಜ್ಯದಲ್ಲಿ ಮಾರಾಟ ಮಾಡುತ್ತಿದ್ದ. ಕೆಲವು ಆಭರಣಗಳನ್ನು ಗಿರವಿ ಇಡುತ್ತಿದ್ದ ಎಂದು ಪೊಲೀಸರು ಹೇಳಿದರು.</p>.<p>ಚುಂಚಘಟ್ಟದಲ್ಲಿ ವಾಸವಿರುವ ವ್ಯಕ್ತಿಯೊಬ್ಬರು ಮನೆಗೆ ಬೀಗ ಹಾಕಿಕೊಂಡು ಅಂಗಡಿಗೆ ಹೋಗಿದ್ದರು. ವಾಪಸ್ ರಾತ್ರಿ ಮನೆಗೆ ಬಂದು ನೋಡಿದಾಗ ಮನೆಯ ಮುಂಭಾಗದ ಬಾಗಿಲನ್ನು ಒಡೆದು ಒಳನುಗ್ಗಿದ್ದ ಆರೋಪಿ ಬೀರುವಿನಲ್ಲಿಟ್ಟಿದ್ದ 300 ಗ್ರಾಂ ಚಿನ್ನಾಭರಣ ಹಾಗೂ ₹1.70 ಲಕ್ಷ ನಗದು ಕಳವು ಮಾಡಿಕೊಂಡು ಹೋಗಿದ್ದು ಗೊತ್ತಾಗಿತ್ತು. ಮನೆ ಮಾಲೀಕರು ನೀಡಿದ ದೂರು ಆಧರಿಸಿ ಕಳ್ಳನನ್ನು ಪತ್ತೆಹಚ್ಚಿ ಬಂಧಿಸಲಾಯಿತು ಎಂದು ಪೊಲೀಸರು ಹೇಳಿದರು.</p>.<p>ಕೃತ್ಯ ನಡೆಸಿದ್ದ ಸ್ಥಳದಲ್ಲಿ ಅಳವಡಿಸಿದ್ದ ಸಿ.ಸಿ.ಟಿ.ವಿ. ಕ್ಯಾಮೆರಾದಲ್ಲಿ ಸೆರೆಯಾದ ದೃಶ್ಯಾವಳಿ ಪರಿಶೀಲನೆ ನಡೆಸಿ ಆರೋಪಿಯನ್ನು ಪತ್ತೆ ಮಾಡಲಾಯಿತು ಎಂದು ಪೊಲೀಸರು ತಿಳಿಸಿದರು.</p>.<p>ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಇಮ್ರಾನ್ ಮನೆ ಕಳ್ಳತನ ಮಾಡುತ್ತಿದ್ದ. 120ಕ್ಕೂ ಹೆಚ್ಚು ಕಳ್ಳತನ ಮಾಡಿದ್ದ ಎನ್ನಲಾಗಿದೆ. ಹೀಗಾಗಿ ಈತನನ್ನು ‘ಸೆಂಚುರಿ ಕಳ್ಳ’ ಎಂದೂ ಕರೆಯುತ್ತಿದ್ದರು. ಬೀಗ ಹಾಕಿದ್ದ ಮನೆಗಳನ್ನು ಗುರುತಿಸಿ ಒಬ್ಬನೇ ಬಂದು ಕಳ್ಳತನ ಮಾಡುವುದು ಈತನ ಅಪರಾಧ ಶೈಲಿ. ದೊಡ್ಡ ಮನೆಗಳಿಗೆ ಕನ್ನ ಹಾಕುವಂತಹ ಕೆಲವು ಕಳ್ಳತನ ಪ್ರಕರಣಗಳಲ್ಲಿ ಮಾತ್ರ ಸಹಾಯಕರನ್ನು ಕರೆದುಕೊಂಡು ಹೋಗುತ್ತಿದ್ದ ಎಂದು ಪೊಲೀಸರು ಹೇಳಿದರು.</p>.<p>₹50 ಸಾವಿರ ಬಹುಮಾನ ಘೋಷಣೆ:<br>ಚೋರ್ ಇಮ್ರಾನ್ ಕದ್ದ ಆಭರಣಗಳನ್ನು ಮುಂಬೈ, ಹೈದರಾಬಾದ್, ಮೈಸೂರು, ಬೆಂಗಳೂರು ಸೇರಿದಂತೆ ವಿವಿಧ ಸ್ಥಳಗಳಲ್ಲಿ ಜುವೆಲ್ಲರಿ ಅಂಗಡಿಗಳಲ್ಲಿ ಮಾರಾಟ ಮಾಡುತ್ತಿದ್ದ. ಇದರಿಂದ ಬಂದ ಹಣ ತೆಗೆದುಕೊಂಡು ಗೋವಾ ಹಾಗೂ ಮುಂಬೈಗಳಲ್ಲಿ ಉಳಿದುಕೊಂಡು ಮೋಜು ಮಾಡುತ್ತಿದ್ದ. ಹಣ ಖಾಲಿಯಾದ ಬಳಿಕ ಮತ್ತೆ ನಗರಕ್ಕೆ ಬಂದು ಬೀಗ ಹಾಕಿದ ಮನೆಗಳನ್ನು ಗುರುತಿಸಿ ಕಳವು ಮಾಡುತ್ತಿದ್ದ ಎಂಬುದು ವಿಚಾರಣೆಯಿಂದ ಗೊತ್ತಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.</p>.<p>ಪೊಲೀಸರ ಕಾರ್ಯಾಚರಣೆಗೆ ಪ್ರಶಂಸೆ ವ್ಯಕ್ತಪಡಿಸಿರುವ ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ಅವರು ಆರೋಪಿಯನ್ನು ಬಂಧಿಸಿದ ತಂಡಕ್ಕೆ ₹50 ಸಾವಿರ ಬಹುಮಾನ ಘೋಷಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>