<p><strong>ಬೆಂಗಳೂರು</strong>: ಉದ್ಯಮ ವಲಯಕ್ಕೆ ಹೊಸ ಚೈತನ್ಯ ತುಂಬುವ ನಿಟ್ಟಿನಲ್ಲಿಜಾಗತಿಕ ಹೂಡಿಕೆದಾರರ ಸಮಾವೇಶ ನ.2ರಿಂದ 4ರವರೆಗೆ ಮೂರು ದಿನಗಳ ಕಾಲ ನಗರದ ಅರಮನೆ ಮೈದಾನದಲ್ಲಿ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್ ವ್ಯವಸ್ಥೆ ಮೂಲಕ ಸಮಾವೇಶದಲ್ಲಿ ಭಾಷಣ ಮಾಡಲಿದ್ದಾರೆ.</p>.<p>‘ಬಿಲ್ಡ್ ಫಾರ್ ದ ವರ್ಲ್ಡ್’ ಪರಿಕಲ್ಪನೆಯೊಂದಿಗೆ ಸಮಾವೇಶ ನಡೆಯಲಿದ್ದು, ₹5 ಲಕ್ಷ ಕೋಟಿ ಹೂಡಿಕೆಯಾಗುವ ನಿರೀಕ್ಷೆ ಇದೆ.</p>.<p>‘2012ರಲ್ಲಿ ನಡೆದ ಹೂಡಿಕೆದಾರರ ಸಮಾವೇಶದಲ್ಲಿ ಮಾಡಿಕೊಳ್ಳಲಾದ ಒಪ್ಪಂದಗಳಲ್ಲಿ ಶೇ 27ರಷ್ಟು ಯೋಜನೆ ಗಳು ಮಾತ್ರ ಅನುಷ್ಠಾನಗೊಂಡಿದ್ದವು. ಆದರೆ, ಈ ಬಾರಿ ಶೇ 75ಕ್ಕೂ ಹೆಚ್ಚು ಯೋಜನೆಗಳು ಅನುಷ್ಠಾನಗೊಳ್ಳಲಿವೆ. ಕೇವಲ ಒಪ್ಪಂದಕ್ಕೆ ಮಾತ್ರ ಯೋಜನೆಗಳು ಸೀಮಿತವಾಗಿರುವುದಿಲ್ಲ’ ಎಂದುಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಮುರುಗೇಶ ನಿರಾಣಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p>‘ಈ ಬಾರಿಯ ಸಮಾವೇಶದಲ್ಲಿ ಹಸಿರು ಇಂಧನಕ್ಕೆ ಆದ್ಯತೆ ನೀಡಲಾಗಿದೆ. ಸೌರಶಕ್ತಿ, ಪವನ ವಿದ್ಯುತ್ ಮತ್ತು ಹೈಡ್ರೊಜನ್ ಇಂಧನದ ವಲಯಗಳಲ್ಲಿ ಹೆಚ್ಚಿನ ಹೂಡಿಕೆಯಾಗುವ ನಿರೀಕ್ಷೆ ಇದೆ. ಈ ವಲಯಗಳಲ್ಲೇ ₹2 ಲಕ್ಷ ಕೋಟಿಯಷ್ಟು ಹೂಡಿಕೆಯಾಗಲಿದೆ. ಉದ್ಯಮಿ ಸಜ್ಜನ್ ಜಿಂದಾಲ್ ಅವರು ತಮ್ಮ ಜೆಎಸ್ಡಬ್ಲ್ಯೂ ಕಂಪನಿಗೆ ಸೇರಿದ ಜಮೀನಿನಲ್ಲೇ ₹42 ಸಾವಿರ ಕೋಟಿ ಹೂಡಿಕೆ ಮಾಡಲಿದ್ದಾರೆ’ ಎಂದು ವಿವರಿಸಿದರು. ‘ನೂತನ ಕೈಗಾರಿಕಾ ನೀತಿಯಿಂದಾಗಿ ರಾಜ್ಯ ಉದ್ಯಮ ಸ್ನೇಹಿ ರಾಜ್ಯಗಳ ಪಟ್ಟಿಯಲ್ಲಿ ಅತ್ಯಂತ ಪ್ರಮುಖ ಸ್ಥಾನ ಪಡೆದುಕೊಂಡಿದೆ. 2021ರ ಏಪ್ರಿಲ್ 21ರಿಂದ 2022ರ ಮಾರ್ಚ್ ಅವಧಿಯಲ್ಲಿ ₹1.76 ಲಕ್ಷ ಕೋಟಿ ವಿದೇಶಿ ನೇರ ಹೂಡಿಕೆ ಆಕರ್ಷಿಸುವಲ್ಲಿ ಸಫಲವಾಗಿದೆ’ ಎಂದರು.</p>.<p>‘ಬೆಳಿಗ್ಗೆ 10.30ಕ್ಕೆ ಪ್ರಧಾನಿ ಮೋದಿ ವರ್ಚುವಲ್ ಮೂಲಕ ಭಾಷಣ ಮಾಡಲಿದ್ದಾರೆ. ಇದೇ 4ರಂದು ಸಂಜೆ 4 ಗಂಟೆಗೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಸಚಿವ ಸಚಿವ ನಿತಿನ್ ಗಡ್ಕರಿ ಪಾಲ್ಗೊಳ್ಳಲಿದ್ದಾರೆ.</p>.<p>‘ಸಮಾವೇಶದಲ್ಲಿ ಸಜ್ಜನ್ ಜಿಂದಾಲ್, ಕುಮಾರಮಂಗಳಂ ಬಿರ್ಲಾ ಸೇರಿದಂತೆ ಹಲವು ಖ್ಯಾತ ಉದ್ಯಮಿಗಳು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಉದ್ಯಮ ವಲಯಕ್ಕೆ ಹೊಸ ಚೈತನ್ಯ ತುಂಬುವ ನಿಟ್ಟಿನಲ್ಲಿಜಾಗತಿಕ ಹೂಡಿಕೆದಾರರ ಸಮಾವೇಶ ನ.2ರಿಂದ 4ರವರೆಗೆ ಮೂರು ದಿನಗಳ ಕಾಲ ನಗರದ ಅರಮನೆ ಮೈದಾನದಲ್ಲಿ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್ ವ್ಯವಸ್ಥೆ ಮೂಲಕ ಸಮಾವೇಶದಲ್ಲಿ ಭಾಷಣ ಮಾಡಲಿದ್ದಾರೆ.</p>.<p>‘ಬಿಲ್ಡ್ ಫಾರ್ ದ ವರ್ಲ್ಡ್’ ಪರಿಕಲ್ಪನೆಯೊಂದಿಗೆ ಸಮಾವೇಶ ನಡೆಯಲಿದ್ದು, ₹5 ಲಕ್ಷ ಕೋಟಿ ಹೂಡಿಕೆಯಾಗುವ ನಿರೀಕ್ಷೆ ಇದೆ.</p>.<p>‘2012ರಲ್ಲಿ ನಡೆದ ಹೂಡಿಕೆದಾರರ ಸಮಾವೇಶದಲ್ಲಿ ಮಾಡಿಕೊಳ್ಳಲಾದ ಒಪ್ಪಂದಗಳಲ್ಲಿ ಶೇ 27ರಷ್ಟು ಯೋಜನೆ ಗಳು ಮಾತ್ರ ಅನುಷ್ಠಾನಗೊಂಡಿದ್ದವು. ಆದರೆ, ಈ ಬಾರಿ ಶೇ 75ಕ್ಕೂ ಹೆಚ್ಚು ಯೋಜನೆಗಳು ಅನುಷ್ಠಾನಗೊಳ್ಳಲಿವೆ. ಕೇವಲ ಒಪ್ಪಂದಕ್ಕೆ ಮಾತ್ರ ಯೋಜನೆಗಳು ಸೀಮಿತವಾಗಿರುವುದಿಲ್ಲ’ ಎಂದುಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಮುರುಗೇಶ ನಿರಾಣಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p>‘ಈ ಬಾರಿಯ ಸಮಾವೇಶದಲ್ಲಿ ಹಸಿರು ಇಂಧನಕ್ಕೆ ಆದ್ಯತೆ ನೀಡಲಾಗಿದೆ. ಸೌರಶಕ್ತಿ, ಪವನ ವಿದ್ಯುತ್ ಮತ್ತು ಹೈಡ್ರೊಜನ್ ಇಂಧನದ ವಲಯಗಳಲ್ಲಿ ಹೆಚ್ಚಿನ ಹೂಡಿಕೆಯಾಗುವ ನಿರೀಕ್ಷೆ ಇದೆ. ಈ ವಲಯಗಳಲ್ಲೇ ₹2 ಲಕ್ಷ ಕೋಟಿಯಷ್ಟು ಹೂಡಿಕೆಯಾಗಲಿದೆ. ಉದ್ಯಮಿ ಸಜ್ಜನ್ ಜಿಂದಾಲ್ ಅವರು ತಮ್ಮ ಜೆಎಸ್ಡಬ್ಲ್ಯೂ ಕಂಪನಿಗೆ ಸೇರಿದ ಜಮೀನಿನಲ್ಲೇ ₹42 ಸಾವಿರ ಕೋಟಿ ಹೂಡಿಕೆ ಮಾಡಲಿದ್ದಾರೆ’ ಎಂದು ವಿವರಿಸಿದರು. ‘ನೂತನ ಕೈಗಾರಿಕಾ ನೀತಿಯಿಂದಾಗಿ ರಾಜ್ಯ ಉದ್ಯಮ ಸ್ನೇಹಿ ರಾಜ್ಯಗಳ ಪಟ್ಟಿಯಲ್ಲಿ ಅತ್ಯಂತ ಪ್ರಮುಖ ಸ್ಥಾನ ಪಡೆದುಕೊಂಡಿದೆ. 2021ರ ಏಪ್ರಿಲ್ 21ರಿಂದ 2022ರ ಮಾರ್ಚ್ ಅವಧಿಯಲ್ಲಿ ₹1.76 ಲಕ್ಷ ಕೋಟಿ ವಿದೇಶಿ ನೇರ ಹೂಡಿಕೆ ಆಕರ್ಷಿಸುವಲ್ಲಿ ಸಫಲವಾಗಿದೆ’ ಎಂದರು.</p>.<p>‘ಬೆಳಿಗ್ಗೆ 10.30ಕ್ಕೆ ಪ್ರಧಾನಿ ಮೋದಿ ವರ್ಚುವಲ್ ಮೂಲಕ ಭಾಷಣ ಮಾಡಲಿದ್ದಾರೆ. ಇದೇ 4ರಂದು ಸಂಜೆ 4 ಗಂಟೆಗೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಸಚಿವ ಸಚಿವ ನಿತಿನ್ ಗಡ್ಕರಿ ಪಾಲ್ಗೊಳ್ಳಲಿದ್ದಾರೆ.</p>.<p>‘ಸಮಾವೇಶದಲ್ಲಿ ಸಜ್ಜನ್ ಜಿಂದಾಲ್, ಕುಮಾರಮಂಗಳಂ ಬಿರ್ಲಾ ಸೇರಿದಂತೆ ಹಲವು ಖ್ಯಾತ ಉದ್ಯಮಿಗಳು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>