<p><strong>ಬೆಂಗಳೂರು</strong>: ವಿಲ್ಸ್ನ್ಗಾರ್ಡನ್ ಠಾಣಾ ವ್ಯಾಪ್ತಿಯಲ್ಲಿ 2004ರಲ್ಲಿ ನಡೆದಿದ್ದ ಕೊಲೆ ಪ್ರಕರಣದ ಆರೋಪಿಯನ್ನು 20 ವರ್ಷಗಳ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.</p>.<p>ನಿರ್ದೇಶಕ ಗಜೇಂದ್ರ ಅಲಿಯಾಸ್ ಗಜಾ (46) ವರ್ಷ ಬಂಧಿತ ಆರೋಪಿ.</p>.<p>2004ರಲ್ಲಿ ನಡೆದಿದ್ದ ಗಲಾಟೆಯಲ್ಲಿ ಕೊತ್ತ ರವಿ ಎಂಬುವವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಈ ಸಂಬಂಧ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಂತರ, ಪ್ರಕರಣವನ್ನು ಸಿಸಿಬಿ ವರ್ಗಾವಣೆ ಮಾಡಲಾಗಿತ್ತು. ಸಿಸಿಬಿ ಪೊಲೀಸರು ತನಿಖೆ ನಡೆಸಿ, ಪ್ರಕರಣದ ಕೆಲವು ಆರೋಪಿಗಳನ್ನು ಬಂಧಿಸಿದ್ದರು. ಆದರೆ, ಗಜೇಂದ್ರ ತಲೆಮರೆಸಿಕೊಂಡಿದ್ದರು.</p>.<p>ಕೃತ್ಯ ಎಸಗಿದ ಬಳಿಕ ಗಜೇಂದ್ರ ಅವರು ತಮಿಳುನಾಡಿನ ವೆಲ್ಲೂರಿಗೆ ತೆರಳಿ ತಲೆಮರೆಸಿಕೊಂಡಿದ್ದರು. ಸುಮಾರು ಮೂರುವರೆ ವರ್ಷಗಳ ವೆಲ್ಲೂರಿನಲ್ಲಿದ್ದ ಆರೋಪಿ, ನಗರಕ್ಕೆ ಬಂದು ಸದ್ದಗುಂಟೆಪಾಳ್ಯದಲ್ಲಿ ಬಾಡಿಗೆ ಮನೆ ಪಡೆದು ನೆಲೆಸಿದ್ದರು.</p>.<p>ಮನೆ ಮಾಲೀಕರಿಗೆ ಸಿನಿಮಾ ನಿರ್ದೇಶನ ಮಾಡುತ್ತಿರುವುದಾಗಿ ಮಾಹಿತಿ ನೀಡಿದ್ದರು. ಪೊಲೀಸರು ಪ್ರಕರಣವನ್ನು ಮರೆತಿರಬಹುದು ಎಂದು ಭಾವಿಸಿದ್ದ ಆರೋಪಿ ನಗರದಲ್ಲಿ ಓಡಾಟ ನಡೆಸುತ್ತಿದ್ದರು. ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಯಿತು ಎಂದು ಪೊಲೀಸರು ಹೇಳಿದರು.</p>.<p><strong>ರೌಡಿಶೀಟರ್ ಕೊತ್ತ ರವಿ:</strong></p>.<p>ರೌಡಿಶೀಟರ್ ಕೊತ್ತ ರವಿ ಕೊಲೆ ಪ್ರಕರಣದಲ್ಲಿ ಗಜೇಂದ್ರ 18ನೇ ಆರೋಪಿ. ಎರಡು ಗುಂಪುಗಳ ನಡುವೆ ನಡೆದ ಗಲಾಟೆಯಲ್ಲಿ ರವಿಯನ್ನು ಕೊಲೆ ಮಾಡಲಾಗಿತ್ತು. </p>.<p>‘ಆರೋಪಿಗೆ ಸಾಕಷ್ಟು ಬಾರಿ ಹುಡುಕಾಟ ನಡೆಸಲಾಗಿತ್ತು. ಮನೆಗೂ ತೆರಳಿ ನೋಟಿಸ್ ನೀಡಲಾಗಿತ್ತು. ಗಜೇಂದ್ರ ಅವರು ಪುಟಾಣಿ ಪವರ್ ಸೇರಿದಂತೆ ಕನ್ನಡದಲ್ಲಿ ಕೆಲವು ಚಿತ್ರಗಳ ನಿರ್ದೇಶನ ಮಾಡಿದ್ದರು. ತಮಿಳು ಭಾಷೆಯ ಚಿತ್ರಗಳಲ್ಲೂ ಇವರು ಕೆಲಸ ಮಾಡಿದ್ದರು’ ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ವಿಲ್ಸ್ನ್ಗಾರ್ಡನ್ ಠಾಣಾ ವ್ಯಾಪ್ತಿಯಲ್ಲಿ 2004ರಲ್ಲಿ ನಡೆದಿದ್ದ ಕೊಲೆ ಪ್ರಕರಣದ ಆರೋಪಿಯನ್ನು 20 ವರ್ಷಗಳ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.</p>.<p>ನಿರ್ದೇಶಕ ಗಜೇಂದ್ರ ಅಲಿಯಾಸ್ ಗಜಾ (46) ವರ್ಷ ಬಂಧಿತ ಆರೋಪಿ.</p>.<p>2004ರಲ್ಲಿ ನಡೆದಿದ್ದ ಗಲಾಟೆಯಲ್ಲಿ ಕೊತ್ತ ರವಿ ಎಂಬುವವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಈ ಸಂಬಂಧ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಂತರ, ಪ್ರಕರಣವನ್ನು ಸಿಸಿಬಿ ವರ್ಗಾವಣೆ ಮಾಡಲಾಗಿತ್ತು. ಸಿಸಿಬಿ ಪೊಲೀಸರು ತನಿಖೆ ನಡೆಸಿ, ಪ್ರಕರಣದ ಕೆಲವು ಆರೋಪಿಗಳನ್ನು ಬಂಧಿಸಿದ್ದರು. ಆದರೆ, ಗಜೇಂದ್ರ ತಲೆಮರೆಸಿಕೊಂಡಿದ್ದರು.</p>.<p>ಕೃತ್ಯ ಎಸಗಿದ ಬಳಿಕ ಗಜೇಂದ್ರ ಅವರು ತಮಿಳುನಾಡಿನ ವೆಲ್ಲೂರಿಗೆ ತೆರಳಿ ತಲೆಮರೆಸಿಕೊಂಡಿದ್ದರು. ಸುಮಾರು ಮೂರುವರೆ ವರ್ಷಗಳ ವೆಲ್ಲೂರಿನಲ್ಲಿದ್ದ ಆರೋಪಿ, ನಗರಕ್ಕೆ ಬಂದು ಸದ್ದಗುಂಟೆಪಾಳ್ಯದಲ್ಲಿ ಬಾಡಿಗೆ ಮನೆ ಪಡೆದು ನೆಲೆಸಿದ್ದರು.</p>.<p>ಮನೆ ಮಾಲೀಕರಿಗೆ ಸಿನಿಮಾ ನಿರ್ದೇಶನ ಮಾಡುತ್ತಿರುವುದಾಗಿ ಮಾಹಿತಿ ನೀಡಿದ್ದರು. ಪೊಲೀಸರು ಪ್ರಕರಣವನ್ನು ಮರೆತಿರಬಹುದು ಎಂದು ಭಾವಿಸಿದ್ದ ಆರೋಪಿ ನಗರದಲ್ಲಿ ಓಡಾಟ ನಡೆಸುತ್ತಿದ್ದರು. ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಯಿತು ಎಂದು ಪೊಲೀಸರು ಹೇಳಿದರು.</p>.<p><strong>ರೌಡಿಶೀಟರ್ ಕೊತ್ತ ರವಿ:</strong></p>.<p>ರೌಡಿಶೀಟರ್ ಕೊತ್ತ ರವಿ ಕೊಲೆ ಪ್ರಕರಣದಲ್ಲಿ ಗಜೇಂದ್ರ 18ನೇ ಆರೋಪಿ. ಎರಡು ಗುಂಪುಗಳ ನಡುವೆ ನಡೆದ ಗಲಾಟೆಯಲ್ಲಿ ರವಿಯನ್ನು ಕೊಲೆ ಮಾಡಲಾಗಿತ್ತು. </p>.<p>‘ಆರೋಪಿಗೆ ಸಾಕಷ್ಟು ಬಾರಿ ಹುಡುಕಾಟ ನಡೆಸಲಾಗಿತ್ತು. ಮನೆಗೂ ತೆರಳಿ ನೋಟಿಸ್ ನೀಡಲಾಗಿತ್ತು. ಗಜೇಂದ್ರ ಅವರು ಪುಟಾಣಿ ಪವರ್ ಸೇರಿದಂತೆ ಕನ್ನಡದಲ್ಲಿ ಕೆಲವು ಚಿತ್ರಗಳ ನಿರ್ದೇಶನ ಮಾಡಿದ್ದರು. ತಮಿಳು ಭಾಷೆಯ ಚಿತ್ರಗಳಲ್ಲೂ ಇವರು ಕೆಲಸ ಮಾಡಿದ್ದರು’ ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>