<p><strong>ಬೆಂಗಳೂರು:</strong> ‘ಸಾಮಾಜಿಕ ಶಾಂತಿ ಮತ್ತು ಸೌಹಾರ್ದಕ್ಕೆ ಶಾಸ್ತ್ರೀಯ ಸಂಗೀತದ ಕೊಡುಗೆ ಅನನ್ಯ’ ಎಂದು ಭಂಡಾರಕೇರಿ ಮಠದ ವಿದ್ಯೇಶತೀರ್ಥ ಸ್ವಾಮೀಜಿ ತಿಳಿಸಿದರು.</p>.<p>ಅನುಗ್ರಹ ಸಂಗೀತ ಮಹಾವಿದ್ಯಾಲಯ ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ತ್ಯಾಗರಾಜರ ಮತ್ತು ಪುರಂದರದಾಸರ ಆರಾಧನಾ ಸಂಗೀತೋತ್ಸವದಲ್ಲಿ ಹರಿದಾಸರ ಪ್ರಚಲಿತ ದೇವರನಾಮಗಳ ಪುಸ್ತಕ ‘ಭಕ್ತಿ ಸನ್ನುತಿ-ಭಾಗ 2’ ಬಿಡುಗಡೆಗೊಳಿಸಿ, ಮಾತನಾಡಿದರು. </p>.<p>‘ಯಾವ ದೇಶದಲ್ಲಿ ಸಂಗೀತ ಮತ್ತು ಸಾಹಿತ್ಯಗಳು ಸಮೃದ್ಧವಾಗಿರುತ್ತವೆಯೋ ಅಲ್ಲಿ ಸುಭಿಕ್ಷೆ ನೆಲೆಸಿರುತ್ತದೆ. ಈ ರಂಗದ ವಿದ್ವಾಂಸರನ್ನು, ತಜ್ಞರನ್ನು ಗೌರವಿಸುವುದು ಹಾಗೂ ಆದರಿಸುವುದು ಶ್ರೇಷ್ಠ ಕಾರ್ಯ’ ಎಂದು ಹೇಳಿದರು. </p>.<p>ಬೆಂಗಳೂರು ಗಾಯನ ಸಮಾಜದ ಅಧ್ಯಕ್ಷ ಎಂ.ಆರ್.ವಿ. ಪ್ರಸಾದ್, ‘ಜ್ಞಾನಿಗಳನ್ನು ಸನ್ಮಾನಿಸಿದರೆ ಸಮಾಜದಲ್ಲಿ ಇನ್ನಷ್ಟು ಶ್ರೇಷ್ಠ ಕೆಲಸಗಳಿಗೆ ಪ್ರೇರಣೆ ನೀಡಿದಂತಾಗುತ್ತದೆ’ ಎಂದರು.</p>.<p>ಆರಾಧನಾ ಮಹೋತ್ಸವದ ಅಂಗವಾಗಿ ಅನುಗ್ರಹ ಸಂಗೀತ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ಹರಿದಾಸರ ದೇವರನಾಮ ಗೋಷ್ಠಿ, ಶಾಸ್ತ್ರೀಯ ಸಂಗೀತ ಗಾಯನ ನಡೆಯಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಸಾಮಾಜಿಕ ಶಾಂತಿ ಮತ್ತು ಸೌಹಾರ್ದಕ್ಕೆ ಶಾಸ್ತ್ರೀಯ ಸಂಗೀತದ ಕೊಡುಗೆ ಅನನ್ಯ’ ಎಂದು ಭಂಡಾರಕೇರಿ ಮಠದ ವಿದ್ಯೇಶತೀರ್ಥ ಸ್ವಾಮೀಜಿ ತಿಳಿಸಿದರು.</p>.<p>ಅನುಗ್ರಹ ಸಂಗೀತ ಮಹಾವಿದ್ಯಾಲಯ ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ತ್ಯಾಗರಾಜರ ಮತ್ತು ಪುರಂದರದಾಸರ ಆರಾಧನಾ ಸಂಗೀತೋತ್ಸವದಲ್ಲಿ ಹರಿದಾಸರ ಪ್ರಚಲಿತ ದೇವರನಾಮಗಳ ಪುಸ್ತಕ ‘ಭಕ್ತಿ ಸನ್ನುತಿ-ಭಾಗ 2’ ಬಿಡುಗಡೆಗೊಳಿಸಿ, ಮಾತನಾಡಿದರು. </p>.<p>‘ಯಾವ ದೇಶದಲ್ಲಿ ಸಂಗೀತ ಮತ್ತು ಸಾಹಿತ್ಯಗಳು ಸಮೃದ್ಧವಾಗಿರುತ್ತವೆಯೋ ಅಲ್ಲಿ ಸುಭಿಕ್ಷೆ ನೆಲೆಸಿರುತ್ತದೆ. ಈ ರಂಗದ ವಿದ್ವಾಂಸರನ್ನು, ತಜ್ಞರನ್ನು ಗೌರವಿಸುವುದು ಹಾಗೂ ಆದರಿಸುವುದು ಶ್ರೇಷ್ಠ ಕಾರ್ಯ’ ಎಂದು ಹೇಳಿದರು. </p>.<p>ಬೆಂಗಳೂರು ಗಾಯನ ಸಮಾಜದ ಅಧ್ಯಕ್ಷ ಎಂ.ಆರ್.ವಿ. ಪ್ರಸಾದ್, ‘ಜ್ಞಾನಿಗಳನ್ನು ಸನ್ಮಾನಿಸಿದರೆ ಸಮಾಜದಲ್ಲಿ ಇನ್ನಷ್ಟು ಶ್ರೇಷ್ಠ ಕೆಲಸಗಳಿಗೆ ಪ್ರೇರಣೆ ನೀಡಿದಂತಾಗುತ್ತದೆ’ ಎಂದರು.</p>.<p>ಆರಾಧನಾ ಮಹೋತ್ಸವದ ಅಂಗವಾಗಿ ಅನುಗ್ರಹ ಸಂಗೀತ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ಹರಿದಾಸರ ದೇವರನಾಮ ಗೋಷ್ಠಿ, ಶಾಸ್ತ್ರೀಯ ಸಂಗೀತ ಗಾಯನ ನಡೆಯಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>