<p><strong>ಬೆಂಗಳೂರು</strong>: ‘ಅಂಗವನ್ನು ತೆಗೆಯದೇ ಸುಧಾರಿತ ಚಿಕಿತ್ಸೆ ಮೂಲಕ ಮೂಳೆ ಕ್ಯಾನ್ಸರ್ ಗುಣಪಡಿಸಲು ಸಾಧ್ಯ. ಕಳೆದ ಏಳು ವರ್ಷಗಳಲ್ಲಿ ಒಂದು ಸಾವಿರಕ್ಕೂ ಅಧಿಕ ರೋಗಿಗಳಿಗೆ ಈ ಚಿಕಿತ್ಸೆಯ ಮೂಲಕ ಮೂಳೆ ಕ್ಯಾನ್ಸರ್ ಗುಣಪಡಿಸಲಾಗಿದೆ’ ಎಂದು ನಾರಾಯಣ ಹೆಲ್ತ್ ಸಿಟಿಯ ಆರ್ಥೊ - ಆಂಕಾಲಜಿ ವಿಭಾಗದ ಮುಖ್ಯಸ್ಥ ಡಾ. ಸುಮನ್ ಬೈರೇಗೌಡ ತಿಳಿಸಿದರು.<br><br> ಬುಧವಾರ ಸುದ್ದಿಗೋಷ್ಟಿಯಲ್ಲಿ ಚಿಕಿತ್ಸೆ ಕುರಿತು ಮಾಹಿತಿ ಹಂಚಿಕೊಂಡ ಅವರು, ‘ಮೂಳೆ ಕ್ಯಾನ್ಸರ್ ಬಂದರೆ ಅಂಗವನ್ನೇ ತೆಗೆದು ಹಾಕುವ ಪರಿಸ್ಥಿತಿ ಇತ್ತು. ಈಗ ನಮ್ಮ ತಜ್ಞ ವೈದ್ಯರ ತಂಡ ಸುಧಾರಿತ ಚಿಕಿತ್ಸೆಯೊಂದಿಗೆ ಅಂಗವನ್ನು ಉಳಿಸಿಕೊಂಡು ಕ್ಯಾನ್ಸರ್ ರೋಗವನ್ನು ಗುಣಪಡಿಸುತ್ತಿದೆ’ ಎಂದರು.</p>.<p>‘ಕಿಮೊ, ರೇಡಿಯೊ ಥೆರಪಿಗಳ ಮೂಲಕ ಕ್ಯಾನ್ಸರ್ ತಗುಲಿರುವ ಭಾಗಕ್ಕೆ ಚಿಕಿತ್ಸೆ ನೀಡಲಾಗುತ್ತದೆ. ಕೆಲವೊಮ್ಮೆ ಆ ಭಾಗವನ್ನೇ ಶಸ್ತ್ರಚಿಕಿತ್ಸೆಯಿಂದ ಹೊರ ತೆಗೆದು ಚಿಕಿತ್ಸೆ ನೀಡಿ ಗುಣಪಡಿಸಿ ಮರು ಜೋಡಿಸಲಾಗುತ್ತದೆ. ಇನ್ನೂ ಕೆಲವು ಪ್ರಕರಣಗಳಲ್ಲಿ (ಜಾಯಿಂಟ್ಗಳಿಗೆ) ಲೋಹದ ಪ್ಲೇಟ್ಗಳ ಜೋಡಣೆ ಮೂಲಕ ಚಿಕಿತ್ಸೆ ನೀಡಲಾಗಿದೆ. ಹೀಗೆ ಚಿಕಿತ್ಸೆ ಪಡೆದಿರುವವರು ಸಂಪೂರ್ಣ ಗುಣಮುಖರಾಗಿದ್ದಾರೆ’ ಎಂದು ಚಿಕಿತ್ಸಾ ವಿಧಾನವನ್ನು ವಿವರಿಸಿದರು. <br><br> ‘ನಾರಾಯಣ ಹೆಲ್ತ್ ಸಿಟಿಯಲ್ಲಿ 2017 ರಿಂದ ಈ ಚಿಕಿತ್ಸೆ ನೀಡುತ್ತಿದ್ದೇವೆ. ಭಾರತ, ಬಾಂಗ್ಲಾದೇಶ, ಆಫ್ರಿಕಾ ಖಂಡದ ದೇಶಗಳು, ಮಧ್ಯಪ್ರಾಚ್ಯ ರಾಷ್ಟ್ರಗಳ ಮೂಳೆ ಕ್ಯಾನ್ಸರ್ ಪೀಡಿತ ಮಕ್ಕಳಿಗೆ ಚಿಕಿತ್ಸೆ ನೀಡಿ ಗುಣಪಡಿಸಿದ್ದೇವೆ’ ಎಂದು ತಿಳಿಸಿದರು.</p>.<p>ಅಂಗ ರಕ್ಷಣಾ ಚಿಕಿತ್ಸೆ ಪಡೆದು ಮೂಳೆ ಕ್ಯಾನ್ಸರ್ನಿಂದ ಗುಣಮುಖರಾಗಿರುವ ಕೊಡಗಿನ ಪ್ರತೀಕ್ಷಾ, ಮೈಸೂರಿನ ಕೇತ್ ಅವರು ತಮ್ಮ ಅನುಭವ ಹಂಚಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಅಂಗವನ್ನು ತೆಗೆಯದೇ ಸುಧಾರಿತ ಚಿಕಿತ್ಸೆ ಮೂಲಕ ಮೂಳೆ ಕ್ಯಾನ್ಸರ್ ಗುಣಪಡಿಸಲು ಸಾಧ್ಯ. ಕಳೆದ ಏಳು ವರ್ಷಗಳಲ್ಲಿ ಒಂದು ಸಾವಿರಕ್ಕೂ ಅಧಿಕ ರೋಗಿಗಳಿಗೆ ಈ ಚಿಕಿತ್ಸೆಯ ಮೂಲಕ ಮೂಳೆ ಕ್ಯಾನ್ಸರ್ ಗುಣಪಡಿಸಲಾಗಿದೆ’ ಎಂದು ನಾರಾಯಣ ಹೆಲ್ತ್ ಸಿಟಿಯ ಆರ್ಥೊ - ಆಂಕಾಲಜಿ ವಿಭಾಗದ ಮುಖ್ಯಸ್ಥ ಡಾ. ಸುಮನ್ ಬೈರೇಗೌಡ ತಿಳಿಸಿದರು.<br><br> ಬುಧವಾರ ಸುದ್ದಿಗೋಷ್ಟಿಯಲ್ಲಿ ಚಿಕಿತ್ಸೆ ಕುರಿತು ಮಾಹಿತಿ ಹಂಚಿಕೊಂಡ ಅವರು, ‘ಮೂಳೆ ಕ್ಯಾನ್ಸರ್ ಬಂದರೆ ಅಂಗವನ್ನೇ ತೆಗೆದು ಹಾಕುವ ಪರಿಸ್ಥಿತಿ ಇತ್ತು. ಈಗ ನಮ್ಮ ತಜ್ಞ ವೈದ್ಯರ ತಂಡ ಸುಧಾರಿತ ಚಿಕಿತ್ಸೆಯೊಂದಿಗೆ ಅಂಗವನ್ನು ಉಳಿಸಿಕೊಂಡು ಕ್ಯಾನ್ಸರ್ ರೋಗವನ್ನು ಗುಣಪಡಿಸುತ್ತಿದೆ’ ಎಂದರು.</p>.<p>‘ಕಿಮೊ, ರೇಡಿಯೊ ಥೆರಪಿಗಳ ಮೂಲಕ ಕ್ಯಾನ್ಸರ್ ತಗುಲಿರುವ ಭಾಗಕ್ಕೆ ಚಿಕಿತ್ಸೆ ನೀಡಲಾಗುತ್ತದೆ. ಕೆಲವೊಮ್ಮೆ ಆ ಭಾಗವನ್ನೇ ಶಸ್ತ್ರಚಿಕಿತ್ಸೆಯಿಂದ ಹೊರ ತೆಗೆದು ಚಿಕಿತ್ಸೆ ನೀಡಿ ಗುಣಪಡಿಸಿ ಮರು ಜೋಡಿಸಲಾಗುತ್ತದೆ. ಇನ್ನೂ ಕೆಲವು ಪ್ರಕರಣಗಳಲ್ಲಿ (ಜಾಯಿಂಟ್ಗಳಿಗೆ) ಲೋಹದ ಪ್ಲೇಟ್ಗಳ ಜೋಡಣೆ ಮೂಲಕ ಚಿಕಿತ್ಸೆ ನೀಡಲಾಗಿದೆ. ಹೀಗೆ ಚಿಕಿತ್ಸೆ ಪಡೆದಿರುವವರು ಸಂಪೂರ್ಣ ಗುಣಮುಖರಾಗಿದ್ದಾರೆ’ ಎಂದು ಚಿಕಿತ್ಸಾ ವಿಧಾನವನ್ನು ವಿವರಿಸಿದರು. <br><br> ‘ನಾರಾಯಣ ಹೆಲ್ತ್ ಸಿಟಿಯಲ್ಲಿ 2017 ರಿಂದ ಈ ಚಿಕಿತ್ಸೆ ನೀಡುತ್ತಿದ್ದೇವೆ. ಭಾರತ, ಬಾಂಗ್ಲಾದೇಶ, ಆಫ್ರಿಕಾ ಖಂಡದ ದೇಶಗಳು, ಮಧ್ಯಪ್ರಾಚ್ಯ ರಾಷ್ಟ್ರಗಳ ಮೂಳೆ ಕ್ಯಾನ್ಸರ್ ಪೀಡಿತ ಮಕ್ಕಳಿಗೆ ಚಿಕಿತ್ಸೆ ನೀಡಿ ಗುಣಪಡಿಸಿದ್ದೇವೆ’ ಎಂದು ತಿಳಿಸಿದರು.</p>.<p>ಅಂಗ ರಕ್ಷಣಾ ಚಿಕಿತ್ಸೆ ಪಡೆದು ಮೂಳೆ ಕ್ಯಾನ್ಸರ್ನಿಂದ ಗುಣಮುಖರಾಗಿರುವ ಕೊಡಗಿನ ಪ್ರತೀಕ್ಷಾ, ಮೈಸೂರಿನ ಕೇತ್ ಅವರು ತಮ್ಮ ಅನುಭವ ಹಂಚಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>