<p><strong>ಬೆಂಗಳೂರು</strong>: ‘ನಗರದಲ್ಲಿ ಹೊಸ ಇಂದಿರಾ ಕ್ಯಾಂಟೀನ್ ತೆರೆಯಲು ಹಾಗೂ ಹೊಸ ಮೆನು ಆರಂಭಿಸಲು ಟೆಂಡರ್ ಅಂತಿಮಗೊಳಿಸುವ ವಿಚಾರ ಸಚಿವ ಸಂಪುಟ ಮುಂದಿದೆ’ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು.</p><p>‘ಲೋಕಸಭಾ ಚುನಾವಣೆ ನೀತಿ ಸಂಹಿತೆ ಇರುವುದರಿಂದ ಸಚಿವ ಸಂಪುಟ ಸಭೆ ನಡೆದಿಲ್ಲ. ಮುಂದಿನ ದಿನಗಳಲ್ಲಿ ಅಲ್ಲಿ ನಿರ್ಧಾರವಾದಂತೆ ನಾವು ಕ್ರಮ ಕೈಗೊಳ್ಳುತ್ತೇವೆ’ ಎಂದು ಸುದ್ದಿಗಾರರಿಗೆ ಬುಧವಾರ ಮಾಹಿತಿ ನೀಡಿದರು.</p><p>ಈಗಾಗಲೇ ನಗರದಲ್ಲಿ ಸುಮಾರು 700 ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ. ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಎಲ್ಲ ಗುಂಡಿಗಳನ್ನೂ ದುರಸ್ತಿ ಮಾಡಲಾಗುತ್ತದೆ. ಅತ್ಯಾಧುನಿಕ ಕ್ಯಾಮೆರಾಗಳಿರುವ 15 ವಾಹನಗಳು ಮುಖ್ಯ ಹಾಗೂ ಉಪ ಮುಖ್ಯರಸ್ತೆಗಳಲ್ಲಿ ಸಂಚರಿಸಲಿವೆ. ದಿನವೊಂದಕ್ಕೆ ನಾಲ್ಕರಿಂದ ಐದು ತಾಸು, ಗಂಟೆಗೆ ಸುಮಾರು 5 ಕಿ.ಮೀ ವೇಗದಲ್ಲಿ ಸಂಚರಿಸುವ ವಾಹನ, ಗುಂಡಿಗಳು ಹಾಗೂ ರಸ್ತೆಯ ಸ್ಥಿತಿಯ ಮಾಹಿತಿ ನೀಡಲಿದೆ. ಇದರಿಂದ ರಸ್ತೆಗಳ ನಿರ್ವಹಣೆ ಉತ್ತಮವಾಗಲಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ನಗರದಲ್ಲಿ ಹೊಸ ಇಂದಿರಾ ಕ್ಯಾಂಟೀನ್ ತೆರೆಯಲು ಹಾಗೂ ಹೊಸ ಮೆನು ಆರಂಭಿಸಲು ಟೆಂಡರ್ ಅಂತಿಮಗೊಳಿಸುವ ವಿಚಾರ ಸಚಿವ ಸಂಪುಟ ಮುಂದಿದೆ’ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು.</p><p>‘ಲೋಕಸಭಾ ಚುನಾವಣೆ ನೀತಿ ಸಂಹಿತೆ ಇರುವುದರಿಂದ ಸಚಿವ ಸಂಪುಟ ಸಭೆ ನಡೆದಿಲ್ಲ. ಮುಂದಿನ ದಿನಗಳಲ್ಲಿ ಅಲ್ಲಿ ನಿರ್ಧಾರವಾದಂತೆ ನಾವು ಕ್ರಮ ಕೈಗೊಳ್ಳುತ್ತೇವೆ’ ಎಂದು ಸುದ್ದಿಗಾರರಿಗೆ ಬುಧವಾರ ಮಾಹಿತಿ ನೀಡಿದರು.</p><p>ಈಗಾಗಲೇ ನಗರದಲ್ಲಿ ಸುಮಾರು 700 ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ. ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಎಲ್ಲ ಗುಂಡಿಗಳನ್ನೂ ದುರಸ್ತಿ ಮಾಡಲಾಗುತ್ತದೆ. ಅತ್ಯಾಧುನಿಕ ಕ್ಯಾಮೆರಾಗಳಿರುವ 15 ವಾಹನಗಳು ಮುಖ್ಯ ಹಾಗೂ ಉಪ ಮುಖ್ಯರಸ್ತೆಗಳಲ್ಲಿ ಸಂಚರಿಸಲಿವೆ. ದಿನವೊಂದಕ್ಕೆ ನಾಲ್ಕರಿಂದ ಐದು ತಾಸು, ಗಂಟೆಗೆ ಸುಮಾರು 5 ಕಿ.ಮೀ ವೇಗದಲ್ಲಿ ಸಂಚರಿಸುವ ವಾಹನ, ಗುಂಡಿಗಳು ಹಾಗೂ ರಸ್ತೆಯ ಸ್ಥಿತಿಯ ಮಾಹಿತಿ ನೀಡಲಿದೆ. ಇದರಿಂದ ರಸ್ತೆಗಳ ನಿರ್ವಹಣೆ ಉತ್ತಮವಾಗಲಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>