<p><strong>ಬೆಂಗಳೂರು:</strong> ‘ಕೋವಿಡ್ ಜೆ.ಎನ್.1 ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಮಹಾನಗರದಲ್ಲಿನ ಕೆಲವು ಪ್ರದೇಶಗಳಲ್ಲಿ ಹೊಸ ವರ್ಷಾಚರಣೆ ನಿರ್ಬಂಧಿಸಬೇಕು’ ಎಂದು ಕೋರಿದ್ದ ಮನವಿಗೆ ಸ್ಪಂದಿಸಲು ಹೈಕೋರ್ಟ್ ನಿರಾಕರಿಸಿದೆ.</p>.<p>ಈ ಕುರಿತಂತೆ ಹೈಕೋರ್ಟ್ ವಕೀಲ ಎನ್.ಪಿ.ಅಮೃತೇಶ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ನ್ಯಾಯಮೂರ್ತಿ ಆರ್.ನಟರಾಜ್ ನೇತೃತ್ವದ ರಜಾಕಾಲದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.</p>.<p>ವಿಚಾರಣೆ ವೇಳೆ ಎನ್.ಪಿ. ಅಮೃತೇಶ್, ‘ಬೆಂಗಳೂರಿನ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಕಮರ್ಶಿಯಲ್ ಸ್ರ್ಟೀಟ್ ಹಾಗೂ ಇತರೆಡೆ ಹೊಸ ವರ್ಷಾಚರಣೆಗೆ ಹೆಚ್ಚಿನ ಜನ ಸೇರುವುದನ್ನು ತಡೆಯಬೇಕಿದೆ. ಮುಂಜಾಗ್ರತಾ ಕ್ರಮವಾಗಿ ಹೊಸ ವರ್ಷಾಚರಣೆ ನಿರ್ಬಂಧಿಸುವಂತೆ ನಿರ್ದೇಶಿಸಬೇಕು’ ಎಂದು ಕೋರಿದರು.</p>.<p>ಇದಕ್ಕೆ ಉತ್ತರಿಸಿದ ಸರ್ಕಾರದ ಪರ ವಕೀಲರು, ‘ಸರ್ಕಾರ ಈ ನಿಟ್ಟಿನಲ್ಲಿ ಈಗಾಗಲೇ ಸರಣಿ ಸಭೆ ನಡೆಸಿದೆ. ಇನ್ನೂ ಆಖೈರು ತೀರ್ಮಾನ ಕೈಗೊಂಡಿಲ್ಲ. ಸಿಸಿಟಿವಿ ಕ್ಯಾಮೆರಾ ಅಳವಡಿಕೆ, ಕಾನೂನು ಶಾಂತಿ ಪಾಲನೆಗಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲು ಸಿದ್ಧವಿದೆ’ ಎಂದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಒಂದು ವೇಳೆ ಬೆಂಗಳೂರಿನಲ್ಲಿ ನಿರ್ಬಂಧಿಸಿದರೆ ಸಂಭ್ರಮಿಸುವ ಜನರು ಹೊರ ಪ್ರದೇಶಗಳಿಗೆ ತೆರಳುತ್ತಾರೆ. ಸರ್ಕಾರ ಈ ಬಗ್ಗೆ ಯಾವುದೇ ನಿಯಂತ್ರಣಗಳನ್ನು ವಿಧಿಸಿಲ್ಲ. ಆದಾಗ್ಯೂ, ಸದ್ಯಕ್ಕೆ ಕೋವಿಡ್ ಗೆ ಹೆದರಬೇಕಾದ ಪ್ರಮೇಯ ಕಾಣುತ್ತಿಲ್ಲ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಕೋವಿಡ್ ಜೆ.ಎನ್.1 ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಮಹಾನಗರದಲ್ಲಿನ ಕೆಲವು ಪ್ರದೇಶಗಳಲ್ಲಿ ಹೊಸ ವರ್ಷಾಚರಣೆ ನಿರ್ಬಂಧಿಸಬೇಕು’ ಎಂದು ಕೋರಿದ್ದ ಮನವಿಗೆ ಸ್ಪಂದಿಸಲು ಹೈಕೋರ್ಟ್ ನಿರಾಕರಿಸಿದೆ.</p>.<p>ಈ ಕುರಿತಂತೆ ಹೈಕೋರ್ಟ್ ವಕೀಲ ಎನ್.ಪಿ.ಅಮೃತೇಶ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ನ್ಯಾಯಮೂರ್ತಿ ಆರ್.ನಟರಾಜ್ ನೇತೃತ್ವದ ರಜಾಕಾಲದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.</p>.<p>ವಿಚಾರಣೆ ವೇಳೆ ಎನ್.ಪಿ. ಅಮೃತೇಶ್, ‘ಬೆಂಗಳೂರಿನ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಕಮರ್ಶಿಯಲ್ ಸ್ರ್ಟೀಟ್ ಹಾಗೂ ಇತರೆಡೆ ಹೊಸ ವರ್ಷಾಚರಣೆಗೆ ಹೆಚ್ಚಿನ ಜನ ಸೇರುವುದನ್ನು ತಡೆಯಬೇಕಿದೆ. ಮುಂಜಾಗ್ರತಾ ಕ್ರಮವಾಗಿ ಹೊಸ ವರ್ಷಾಚರಣೆ ನಿರ್ಬಂಧಿಸುವಂತೆ ನಿರ್ದೇಶಿಸಬೇಕು’ ಎಂದು ಕೋರಿದರು.</p>.<p>ಇದಕ್ಕೆ ಉತ್ತರಿಸಿದ ಸರ್ಕಾರದ ಪರ ವಕೀಲರು, ‘ಸರ್ಕಾರ ಈ ನಿಟ್ಟಿನಲ್ಲಿ ಈಗಾಗಲೇ ಸರಣಿ ಸಭೆ ನಡೆಸಿದೆ. ಇನ್ನೂ ಆಖೈರು ತೀರ್ಮಾನ ಕೈಗೊಂಡಿಲ್ಲ. ಸಿಸಿಟಿವಿ ಕ್ಯಾಮೆರಾ ಅಳವಡಿಕೆ, ಕಾನೂನು ಶಾಂತಿ ಪಾಲನೆಗಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲು ಸಿದ್ಧವಿದೆ’ ಎಂದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಒಂದು ವೇಳೆ ಬೆಂಗಳೂರಿನಲ್ಲಿ ನಿರ್ಬಂಧಿಸಿದರೆ ಸಂಭ್ರಮಿಸುವ ಜನರು ಹೊರ ಪ್ರದೇಶಗಳಿಗೆ ತೆರಳುತ್ತಾರೆ. ಸರ್ಕಾರ ಈ ಬಗ್ಗೆ ಯಾವುದೇ ನಿಯಂತ್ರಣಗಳನ್ನು ವಿಧಿಸಿಲ್ಲ. ಆದಾಗ್ಯೂ, ಸದ್ಯಕ್ಕೆ ಕೋವಿಡ್ ಗೆ ಹೆದರಬೇಕಾದ ಪ್ರಮೇಯ ಕಾಣುತ್ತಿಲ್ಲ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>