<p><strong>ಬೆಂಗಳೂರು</strong>: ಕೇರಳದ ಮಲಪ್ಪುರಂ ಜಿಲ್ಲೆಯು ನಿಫಾ ಸೋಂಕಿನಿಂದ ಸುರಕ್ಷಿತವೆಂದು ಘೋಷಿಸುವವರೆಗೆ ಆ ಪ್ರದೇಶಕ್ಕೆ ಪ್ರಯಾಣ ಮಾಡದಿರುವುದು ಒಳಿತು ಎಂದು ಆರೋಗ್ಯ ಇಲಾಖೆ ಸಲಹೆ ನೀಡಿದೆ.</p>.<p>ಮಲಪ್ಪುರಂನಲ್ಲಿ ಜುಲೈ 21ರಂದು ನಿಫಾ ಪ್ರಕರಣ ದೃಢಪಟ್ಟಿದೆ. 14 ವರ್ಷದ ಬಾಲಕ ಈ ಸೋಂಕಿನಿಂದ ಮೃತಪಟ್ಟಿದ್ದಾನೆ. ರಾಜ್ಯದಲ್ಲಿ ಈವರೆಗೆ ಯಾವುದೇ ನಿಫಾ ಪ್ರಕರಣ ವರದಿಯಾಗಿಲ್ಲ. ಕೇರಳದಲ್ಲಿ ನಿಫಾ ಪ್ರಕರಣ ವರದಿಯಾದಾಗಲೆಲ್ಲ ಗಡಿಯಾಚೆಗೆ ಸೋಂಕು ಹರಡುವುದನ್ನು ತಡೆಯಲು ರಾಜ್ಯದಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಇಲಾಖೆಯ ಸಮಗ್ರ ರೋಗ ಕಣ್ಗಾವಲು ಕಾರ್ಯಕ್ರಮದ (ಐಡಿಎಸ್ಪಿ) ಯೋಜನಾ ನಿರ್ದೇಶಕರು ಹೇಳಿದ್ದಾರೆ.</p>.<p>ಮಲಪ್ಪುರಂನಲ್ಲಿ ವರದಿಯಾದ ಪ್ರಕರಣದಲ್ಲಿ ಸಂಪರ್ಕಿತರಿಗೆ ಪರೀಕ್ಷೆ ನಡೆಸಲಾಗಿದ್ದು, ಅವರಲ್ಲಿ ಸೋಂಕು ದೃಢಪಟ್ಟಿಲ್ಲ. ಆದ್ದರಿಂದ ಈ ಸೋಂಕು ಮನುಷ್ಯರಿಂದ ಮನುಷ್ಯರಿಗೆ ಹರಡುವ ಸಾಧ್ಯತೆ ತುಂಬಾ ಕಡಿಮೆಯಿದ್ದು, ಭಯಪಡಬೇಕಾದ ಅಗತ್ಯವಿಲ್ಲ. ಮುನ್ನೆಚ್ಚರಿಕೆ ಕ್ರಮವಾಗಿ ಅತ್ಯವಶ್ಯವಾಗಿರದಿದ್ದಲ್ಲಿ ಅಲ್ಲಿಗೆ ಪ್ರಯಾಣ ತಪ್ಪಿಸುವುದು ಉತ್ತಮ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕೇರಳದ ಮಲಪ್ಪುರಂ ಜಿಲ್ಲೆಯು ನಿಫಾ ಸೋಂಕಿನಿಂದ ಸುರಕ್ಷಿತವೆಂದು ಘೋಷಿಸುವವರೆಗೆ ಆ ಪ್ರದೇಶಕ್ಕೆ ಪ್ರಯಾಣ ಮಾಡದಿರುವುದು ಒಳಿತು ಎಂದು ಆರೋಗ್ಯ ಇಲಾಖೆ ಸಲಹೆ ನೀಡಿದೆ.</p>.<p>ಮಲಪ್ಪುರಂನಲ್ಲಿ ಜುಲೈ 21ರಂದು ನಿಫಾ ಪ್ರಕರಣ ದೃಢಪಟ್ಟಿದೆ. 14 ವರ್ಷದ ಬಾಲಕ ಈ ಸೋಂಕಿನಿಂದ ಮೃತಪಟ್ಟಿದ್ದಾನೆ. ರಾಜ್ಯದಲ್ಲಿ ಈವರೆಗೆ ಯಾವುದೇ ನಿಫಾ ಪ್ರಕರಣ ವರದಿಯಾಗಿಲ್ಲ. ಕೇರಳದಲ್ಲಿ ನಿಫಾ ಪ್ರಕರಣ ವರದಿಯಾದಾಗಲೆಲ್ಲ ಗಡಿಯಾಚೆಗೆ ಸೋಂಕು ಹರಡುವುದನ್ನು ತಡೆಯಲು ರಾಜ್ಯದಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಇಲಾಖೆಯ ಸಮಗ್ರ ರೋಗ ಕಣ್ಗಾವಲು ಕಾರ್ಯಕ್ರಮದ (ಐಡಿಎಸ್ಪಿ) ಯೋಜನಾ ನಿರ್ದೇಶಕರು ಹೇಳಿದ್ದಾರೆ.</p>.<p>ಮಲಪ್ಪುರಂನಲ್ಲಿ ವರದಿಯಾದ ಪ್ರಕರಣದಲ್ಲಿ ಸಂಪರ್ಕಿತರಿಗೆ ಪರೀಕ್ಷೆ ನಡೆಸಲಾಗಿದ್ದು, ಅವರಲ್ಲಿ ಸೋಂಕು ದೃಢಪಟ್ಟಿಲ್ಲ. ಆದ್ದರಿಂದ ಈ ಸೋಂಕು ಮನುಷ್ಯರಿಂದ ಮನುಷ್ಯರಿಗೆ ಹರಡುವ ಸಾಧ್ಯತೆ ತುಂಬಾ ಕಡಿಮೆಯಿದ್ದು, ಭಯಪಡಬೇಕಾದ ಅಗತ್ಯವಿಲ್ಲ. ಮುನ್ನೆಚ್ಚರಿಕೆ ಕ್ರಮವಾಗಿ ಅತ್ಯವಶ್ಯವಾಗಿರದಿದ್ದಲ್ಲಿ ಅಲ್ಲಿಗೆ ಪ್ರಯಾಣ ತಪ್ಪಿಸುವುದು ಉತ್ತಮ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>