<p><strong>ಬೆಂಗಳೂರು:</strong> ರಾಜ್ಯದ ಎಲ್ಲ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ (ಜಾತಿವಾರು ಜನಗಣತಿ) ವರದಿಯನ್ನು ತ್ವರಿತವಾಗಿ ಸರ್ಕಾರಕ್ಕೆ ಸಲ್ಲಿಸುವಂತೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನು ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ನಿಯೋಗ ಒತ್ತಾಯಿಸಿದೆ.</p>.<p>ಒಕ್ಕೂಟದ ಅಧ್ಯಕ್ಷ ಕೆ.ಎಂ. ರಾಮಚಂದ್ರಪ್ಪ ನೇತೃತ್ವದ ನಿಯೋಗವು ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಅವರನ್ನು ಭೇಟಿಮಾಡಿ, ಜಾತಿವಾರು ಜನಗಣತಿ ವರದಿಯನ್ನು ಸರ್ಕಾರಕ್ಕೆ ನೀಡುವಂತೆ ಮನವಿ ಸಲ್ಲಿಸಿತು.</p>.<p> ‘ಎಚ್. ಕಾಂತರಾಜ ನೇತೃತ್ವದ ಆಯೋಗವು ಸಮೀಕ್ಷೆಯನ್ನು ಪೂರ್ಣಗೊಳಿಸಿತ್ತು. ಈವರೆಗೂ ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಿಲ್ಲ. ಈ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದರೆ ಸಾಮಾಜಿಕ ನ್ಯಾಯದ ಹಂಚಿಕೆಯಲ್ಲಿ ಆಗುವ ಲೋಪಗಳನ್ನು ಸರಿಪಡಿಸಲು ಅನುಕೂಲ ಆಗುತ್ತದೆ. ಹಿಂದುಳಿದ ವರ್ಗಗಳ ಪಟ್ಟಿಯ ಪರಿಷ್ಕರಣೆಗೂ ಪೂರಕವಾಗುತ್ತದೆ. ಆದ್ದರಿಂದ ವಿಳಂಬ ಮಾಡದೇ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕು’ ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.</p>.<p>ಮನವಿ ಸಲ್ಲಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ರಾಮಚಂದ್ರಪ್ಪ, ‘ವರದಿಯನ್ನು ಅಂಗೀಕರಿಸಿ ಎಂದು ಸರ್ಕಾರದ ಎದುರು ನಾವು ಬೇಡಿಕೆ ಇಡುತ್ತಿಲ್ಲ. ಆಯೋಗವು ವರದಿ ಸಲ್ಲಿಸಲಿ. ಬಳಿಕ ಅದನ್ನು ಸಾರ್ವಜನಿಕ ಚರ್ಚೆಗೆ ಬಿಡುಗಡೆ ಮಾಡಲಿ’ ಎಂದರು.</p>.<p>‘ಮನೆಯಲ್ಲಿ ಕುಳಿತು ವರದಿ ಸಿದ್ಧಪಡಿಸಲಾಗಿದೆ ಎಂಬ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಆರೋಪದಲ್ಲಿ ಸತ್ಯಾಂಶವಿಲ್ಲ. ಲಕ್ಷಾಂತರ ಶಿಕ್ಷಕರು ಮನೆ, ಮನೆಗೆ ಹೋಗಿ ಗಣತಿ ಮಾಡಿದ್ದಾರೆ. ಆಗ ಸಿದ್ದರಾಮಯ್ಯ ಸಂಪುಟದಲ್ಲಿ ಶಾಮನೂರು ಸಚಿವರಾಗಿದ್ದರು. ಗಣತಿ ಸರಿಯಾಗಿ ನಡೆಯದಿದ್ದರೆ ಆಗಲೇ ಪ್ರಶ್ನಿಸಬೇಕಿತ್ತು’ ಎಂದು ಹೇಳಿದರು.</p>.<p>ಗಾಣಿಗ ಗುರು ಪೀಠದ ಪೂರ್ಣಾನಂದ ಪುರಿ ಸ್ವಾಮೀಜಿ, ಒಕ್ಕೂಟದ ಸಂಚಾಲಕರಾದ ಮಾವಳ್ಳಿ ಶಂಕರ್, ಎಣ್ಣೆಗೆರೆ ಅರ್. ವೆಂಕಟರಾಮಯ್ಯ, ಸಂಚಾಲನಾ ಸಮಿತಿ ಸದಸ್ಯರಾದ ಎನ್.ವಿ. ನರಸಿಂಹಯ್ಯ, ಪ್ರೊ. ಜಾಫೆಟ್, ವಿ. ನಾಗರಾಜ್, ಬಿ.ಟಿ ಲಲಿತಾ ನಾಯಕ್ ಸೇರಿದಂತೆ ಹಲವರು ನಿಯೋಗದಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯದ ಎಲ್ಲ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ (ಜಾತಿವಾರು ಜನಗಣತಿ) ವರದಿಯನ್ನು ತ್ವರಿತವಾಗಿ ಸರ್ಕಾರಕ್ಕೆ ಸಲ್ಲಿಸುವಂತೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನು ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ನಿಯೋಗ ಒತ್ತಾಯಿಸಿದೆ.</p>.<p>ಒಕ್ಕೂಟದ ಅಧ್ಯಕ್ಷ ಕೆ.ಎಂ. ರಾಮಚಂದ್ರಪ್ಪ ನೇತೃತ್ವದ ನಿಯೋಗವು ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಅವರನ್ನು ಭೇಟಿಮಾಡಿ, ಜಾತಿವಾರು ಜನಗಣತಿ ವರದಿಯನ್ನು ಸರ್ಕಾರಕ್ಕೆ ನೀಡುವಂತೆ ಮನವಿ ಸಲ್ಲಿಸಿತು.</p>.<p> ‘ಎಚ್. ಕಾಂತರಾಜ ನೇತೃತ್ವದ ಆಯೋಗವು ಸಮೀಕ್ಷೆಯನ್ನು ಪೂರ್ಣಗೊಳಿಸಿತ್ತು. ಈವರೆಗೂ ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಿಲ್ಲ. ಈ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದರೆ ಸಾಮಾಜಿಕ ನ್ಯಾಯದ ಹಂಚಿಕೆಯಲ್ಲಿ ಆಗುವ ಲೋಪಗಳನ್ನು ಸರಿಪಡಿಸಲು ಅನುಕೂಲ ಆಗುತ್ತದೆ. ಹಿಂದುಳಿದ ವರ್ಗಗಳ ಪಟ್ಟಿಯ ಪರಿಷ್ಕರಣೆಗೂ ಪೂರಕವಾಗುತ್ತದೆ. ಆದ್ದರಿಂದ ವಿಳಂಬ ಮಾಡದೇ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕು’ ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.</p>.<p>ಮನವಿ ಸಲ್ಲಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ರಾಮಚಂದ್ರಪ್ಪ, ‘ವರದಿಯನ್ನು ಅಂಗೀಕರಿಸಿ ಎಂದು ಸರ್ಕಾರದ ಎದುರು ನಾವು ಬೇಡಿಕೆ ಇಡುತ್ತಿಲ್ಲ. ಆಯೋಗವು ವರದಿ ಸಲ್ಲಿಸಲಿ. ಬಳಿಕ ಅದನ್ನು ಸಾರ್ವಜನಿಕ ಚರ್ಚೆಗೆ ಬಿಡುಗಡೆ ಮಾಡಲಿ’ ಎಂದರು.</p>.<p>‘ಮನೆಯಲ್ಲಿ ಕುಳಿತು ವರದಿ ಸಿದ್ಧಪಡಿಸಲಾಗಿದೆ ಎಂಬ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಆರೋಪದಲ್ಲಿ ಸತ್ಯಾಂಶವಿಲ್ಲ. ಲಕ್ಷಾಂತರ ಶಿಕ್ಷಕರು ಮನೆ, ಮನೆಗೆ ಹೋಗಿ ಗಣತಿ ಮಾಡಿದ್ದಾರೆ. ಆಗ ಸಿದ್ದರಾಮಯ್ಯ ಸಂಪುಟದಲ್ಲಿ ಶಾಮನೂರು ಸಚಿವರಾಗಿದ್ದರು. ಗಣತಿ ಸರಿಯಾಗಿ ನಡೆಯದಿದ್ದರೆ ಆಗಲೇ ಪ್ರಶ್ನಿಸಬೇಕಿತ್ತು’ ಎಂದು ಹೇಳಿದರು.</p>.<p>ಗಾಣಿಗ ಗುರು ಪೀಠದ ಪೂರ್ಣಾನಂದ ಪುರಿ ಸ್ವಾಮೀಜಿ, ಒಕ್ಕೂಟದ ಸಂಚಾಲಕರಾದ ಮಾವಳ್ಳಿ ಶಂಕರ್, ಎಣ್ಣೆಗೆರೆ ಅರ್. ವೆಂಕಟರಾಮಯ್ಯ, ಸಂಚಾಲನಾ ಸಮಿತಿ ಸದಸ್ಯರಾದ ಎನ್.ವಿ. ನರಸಿಂಹಯ್ಯ, ಪ್ರೊ. ಜಾಫೆಟ್, ವಿ. ನಾಗರಾಜ್, ಬಿ.ಟಿ ಲಲಿತಾ ನಾಯಕ್ ಸೇರಿದಂತೆ ಹಲವರು ನಿಯೋಗದಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>