<p><strong>ಬೆಂಗಳೂರು:</strong> ಬೆಂಗಳೂರಿನ ಪೆರಿಫೆರಲ್ ರಿಂಗ್ ರಸ್ತೆಯನ್ನು ‘ಎಕನಾಮಿಕ್ ಕಾರಿಡಾರ್’ ಮಾದರಿಯಲ್ಲಿ ಮಾರ್ಪಾಡು ಮಾಡಿ, ಯೋಜನೆಯನ್ನು ಕಾರ್ಯಗತ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.</p>.<p>ವಿಧಾನಸಭೆಯಲ್ಲಿ ಬಿಜೆಪಿಯ ಶೈಲೇಂದ್ರ ಬೆಲ್ದಾಳೆ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಶಿವಕುಮಾರ್, ಯೋಜನೆ ಸಂಬಂಧ ಫೆ. 29 ಟೆಂಡರ್ ಸಲ್ಲಿಕೆಗೆ ಕೊನೆಯ ದಿನವಾಗಿದೆ ಎಂದು ತಿಳಿಸಿದರು.</p>.<p>‘ಈ ಯೋಜನೆ ಕಾರ್ಯಗತ ಮಾಡಲು ನಿರ್ಧರಿಸಿ 15 ವರ್ಷಗಳಾಗಿವೆ. ಈ ಹಿಂದಿನ ಸರ್ಕಾರಗಳು ಏನೂ ಮಾಡಿಲ್ಲ ಎಂದು ಹೇಳುವುದಿಲ್ಲ. ಯೋಜನೆ ಆರಂಭಿಸಲು ಪ್ರಯತ್ನಪಟ್ಟಿದ್ದವು. ಆದರೆ, ಟೆಂಡರ್ನಲ್ಲಿ ಬಿಡ್ ಮಾಡಲು ಯಾರೂ ಮುಂದೆ ಬಾರದ ಕಾರಣ ಅವು ವಿಫಲವಾದವು. ಹೀಗಾಗಿ ಈಗ ಈ ಯೋಜನೆಗೆ ಹೊಸ ರೂಪ ನೀಡಿ ಪಿಪಿಪಿ ಮಾದರಿಯಲ್ಲಿ ಕಾರ್ಯಗತಗೊಳಿಸಲಾಗುತ್ತಿದೆ’ ಎಂದು ಹೇಳಿದರು.</p>.<p>ಈ ಯೋಜನೆಗೆ 2,596 ಎಕರೆ ಜಮೀನು ಬೇಕಾಗಿದೆ. ಇದರಲ್ಲಿ 220 ಎಕರೆ ಮಾತ್ರ ಸರ್ಕಾರಿ ಜಮೀನು, ಉಳಿದದ್ದು ಖಾಸಗಿ ಜಮೀನು ಎಂದು ತಿಳಿಸಿದರು.</p>.<p>‘ಈ ಜಮೀನಿಗೆ ಪರಿಹಾರ ನೀಡುವ ಬಗ್ಗೆ ನ್ಯಾಯಾಲಯದ ಆದೇಶ ಇದ್ದರೂ, ಈ ವಿಚಾರವನ್ನು ಸಚಿವ ಸಂಪುಟದಲ್ಲಿ ಚರ್ಚೆ ಮಾಡಿ ರೈತರಿಗೆ ಸಹಾಯ ಮಾಡಲು ನಿರ್ಧರಿಸಿದ್ದೇವೆ. ಯೋಜನೆ ಜಾರಿ ಮಾಡುತ್ತೇವೆಯೇ ಹೊರತು ಈ ಜಾಗವನ್ನು ಡಿನೋಟಿಫೈ ಮಾಡುವುದಿಲ್ಲ. ಯೋಜನೆಗೆ ₹24 ಸಾವಿರ ಕೋಟಿ ಬೇಕಾಗಬಹುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೆಂಗಳೂರಿನ ಪೆರಿಫೆರಲ್ ರಿಂಗ್ ರಸ್ತೆಯನ್ನು ‘ಎಕನಾಮಿಕ್ ಕಾರಿಡಾರ್’ ಮಾದರಿಯಲ್ಲಿ ಮಾರ್ಪಾಡು ಮಾಡಿ, ಯೋಜನೆಯನ್ನು ಕಾರ್ಯಗತ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.</p>.<p>ವಿಧಾನಸಭೆಯಲ್ಲಿ ಬಿಜೆಪಿಯ ಶೈಲೇಂದ್ರ ಬೆಲ್ದಾಳೆ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಶಿವಕುಮಾರ್, ಯೋಜನೆ ಸಂಬಂಧ ಫೆ. 29 ಟೆಂಡರ್ ಸಲ್ಲಿಕೆಗೆ ಕೊನೆಯ ದಿನವಾಗಿದೆ ಎಂದು ತಿಳಿಸಿದರು.</p>.<p>‘ಈ ಯೋಜನೆ ಕಾರ್ಯಗತ ಮಾಡಲು ನಿರ್ಧರಿಸಿ 15 ವರ್ಷಗಳಾಗಿವೆ. ಈ ಹಿಂದಿನ ಸರ್ಕಾರಗಳು ಏನೂ ಮಾಡಿಲ್ಲ ಎಂದು ಹೇಳುವುದಿಲ್ಲ. ಯೋಜನೆ ಆರಂಭಿಸಲು ಪ್ರಯತ್ನಪಟ್ಟಿದ್ದವು. ಆದರೆ, ಟೆಂಡರ್ನಲ್ಲಿ ಬಿಡ್ ಮಾಡಲು ಯಾರೂ ಮುಂದೆ ಬಾರದ ಕಾರಣ ಅವು ವಿಫಲವಾದವು. ಹೀಗಾಗಿ ಈಗ ಈ ಯೋಜನೆಗೆ ಹೊಸ ರೂಪ ನೀಡಿ ಪಿಪಿಪಿ ಮಾದರಿಯಲ್ಲಿ ಕಾರ್ಯಗತಗೊಳಿಸಲಾಗುತ್ತಿದೆ’ ಎಂದು ಹೇಳಿದರು.</p>.<p>ಈ ಯೋಜನೆಗೆ 2,596 ಎಕರೆ ಜಮೀನು ಬೇಕಾಗಿದೆ. ಇದರಲ್ಲಿ 220 ಎಕರೆ ಮಾತ್ರ ಸರ್ಕಾರಿ ಜಮೀನು, ಉಳಿದದ್ದು ಖಾಸಗಿ ಜಮೀನು ಎಂದು ತಿಳಿಸಿದರು.</p>.<p>‘ಈ ಜಮೀನಿಗೆ ಪರಿಹಾರ ನೀಡುವ ಬಗ್ಗೆ ನ್ಯಾಯಾಲಯದ ಆದೇಶ ಇದ್ದರೂ, ಈ ವಿಚಾರವನ್ನು ಸಚಿವ ಸಂಪುಟದಲ್ಲಿ ಚರ್ಚೆ ಮಾಡಿ ರೈತರಿಗೆ ಸಹಾಯ ಮಾಡಲು ನಿರ್ಧರಿಸಿದ್ದೇವೆ. ಯೋಜನೆ ಜಾರಿ ಮಾಡುತ್ತೇವೆಯೇ ಹೊರತು ಈ ಜಾಗವನ್ನು ಡಿನೋಟಿಫೈ ಮಾಡುವುದಿಲ್ಲ. ಯೋಜನೆಗೆ ₹24 ಸಾವಿರ ಕೋಟಿ ಬೇಕಾಗಬಹುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>