<p><strong>ಬೆಂಗಳೂರು</strong>: ‘ಬಿಬಿಎಂಪಿ ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಜೊತೆಗೆ ಪೋಷಕರ ಪಾತ್ರವನ್ನೂ ನಿರ್ವಹಿಸಬೇಕು’ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದರು.</p>.<p>ಬಿಬಿಎಂಪಿ ಶಿಕ್ಷಣ ಇಲಾಖೆ ಗುರುವಾರ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಪಾಲಿಕೆ ಶಾಲೆಗಳಲ್ಲಿ ಉತ್ತಮ ಶಿಕ್ಷಣ ಸಿಗುತ್ತದೆ ಎಂದು ಪೋಷಕರು ಮಕ್ಕಳನ್ನು ಕಳುಹಿಸುತ್ತಾರೆ. ಹೆಚ್ಚಿನ ಶಿಕ್ಷಣ ಪಡೆಯದ ಪೋಷಕರೂ ಇದ್ದಾರೆ. ಹೀಗಾಗಿ ಶಿಕ್ಷಕರು ಬೋಧನೆ ಹಾಗೂ ಪೋಷಣೆಯ ಎರಡೂ ಜವಾಬ್ದಾರಿ ಹೊರಬೇಕು’ ಎಂದರು.</p>.<p>‘ಪೋಷಕರಂತೆ ಶಿಕ್ಷಕರಲ್ಲೂ ಭಾವನೆ ಇರಬೇಕು. ಸಣ್ಣಪುಟ್ಟ ತಪ್ಪುಗಳನ್ನು ಕ್ಷಮಿಸಬೇಕು. ಆದರೆ, ಶಿಸ್ತು ಪಾಲನೆಯಲ್ಲಿ ಯಾವುದೇ ರೀತಿಯ ಹೊಂದಾಣಿಕೆ ಇರಬಾರದು. ಮಕ್ಕಳಿಗೆ ಕಿವಿಮಾತು ಹೇಳಿ ಅವರನ್ನು ಸರಿದಾರಿಯಲ್ಲಿ ನಡೆಸಬೇಕು’ ಎಂದು ಹೇಳಿದರು.</p>.<p>ಪಾಲಿಕೆಯ ಶಾಲೆ– ಕಾಲೇಜುಗಳಲ್ಲಿ ಈ ವರ್ಷ 23,322 ಮಕ್ಕಳು ಪ್ರವೇಶ ಪಡೆದುಕೊಂಡಿದ್ದಾರೆ. ಕಳೆದ ಎಲ್ಲ ವರ್ಷಗಳಿಗೆ ಹೋಲಿಸಿದರೆ ಇದು ಹೆಚ್ಚಾಗಿದೆ ಎಂದು ಬಿಬಿಎಂಪಿ ಶಿಕ್ಷಣ ಇಲಾಖೆಯ ವಿಶೇಷ ಆಯುಕ್ತೆ ಪ್ರೀತಿ ಗೆಹ್ಲೋಟ್ ತಿಳಿಸಿದರು.</p>.<p>2023–24ನೇ ಸಾಲಿನಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಎಸ್ಸೆಸ್ಸೆಲ್ಸಿಯ 73 ವಿದ್ಯಾರ್ಥಿಗಳಿಗೆ ತಲಾ ₹25 ಸಾವಿರ, ದ್ವಿತೀಯ ಪಿಯುಸಿಯ 227 ವಿದ್ಯಾರ್ಥಿಗಳಿಗೆ ತಲಾ ₹35 ಸಾವಿರ ಹಾಗೂ ಪದವಿಯ ಆರು ವಿದ್ಯಾರ್ಥಿಗಳಿಗೆ ತಲಾ ₹50 ಸಾವಿರ ಪ್ರೋತ್ಸಾಹಧನ ನೀಡಲಾಯಿತು.</p>.<p><strong>ವೇತನ ಹೆಚ್ಚಳದ ಭರವಸೆ:</strong> ‘ವ್ಯವಸ್ಥೆ ಬೇರೆ ಆಗಿರುವುದರಿಂದ ವೇತನ ನೀಡುವುದರಲ್ಲಿ ಸಮಸ್ಯೆ ಆಗಿದೆ. ವೇತನ ಹೆಚ್ಚಳದ ಬಗ್ಗೆಯೂ ಕೆಲವು ಪ್ರಕ್ರಿಯೆಗಳನ್ನು ನಡೆಸಬೇಕಿದೆ. ವರ್ಷಕ್ಕೆ ಒಂದುಬಾರಿ ವೇತನ ಹೆಚ್ಚಿಸಲೂ ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ತುಷಾರ್ ಗಿರಿನಾಥ್ ಭರವಸೆ ನೀಡಿದರು.</p>.<p>ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ನಡೆದ ಪುರಭವನದ ಮುಂದೆ ‘ವೇತನ ಬಿಡುಗಡೆ ಹಾಗೂ ಹೆಚ್ಚಳದಲ್ಲಿ ಸಮಸ್ಯೆಯಾಗಿದೆ’ ಎಂದು ಆರೋಪಿಸಿ ಶಿಕ್ಷಕರು ಕಪ್ಪು ಬಟ್ಟೆ ಧರಿಸಿ ಪ್ರತಿಭಟಿಸಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ತುಷಾರ್ ಗಿರಿನಾಥ್, ‘ಬಿಬಿಎಂಪಿ ಇದೀಗ ಎಸ್ಡಿಎಂಸಿ ಮೂಲಕ ಶಿಕ್ಷಕರನ್ನು ನೇಮಿಸಿಕೊಳ್ಳುವ ಪ್ರಕ್ರಿಯೆ ಆರಂಭಿಸಿದೆ. ಕೆಲವು ತೊಂದರೆಗಳಿದ್ದು, ಅವುಗಳನ್ನು ಶೀಘ್ರ ಪರಿಹರಿಸಲಾಗುತ್ತದೆ’ ಎಂದು ಸುದ್ದಿಗಾರರಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಬಿಬಿಎಂಪಿ ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಜೊತೆಗೆ ಪೋಷಕರ ಪಾತ್ರವನ್ನೂ ನಿರ್ವಹಿಸಬೇಕು’ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದರು.</p>.<p>ಬಿಬಿಎಂಪಿ ಶಿಕ್ಷಣ ಇಲಾಖೆ ಗುರುವಾರ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಪಾಲಿಕೆ ಶಾಲೆಗಳಲ್ಲಿ ಉತ್ತಮ ಶಿಕ್ಷಣ ಸಿಗುತ್ತದೆ ಎಂದು ಪೋಷಕರು ಮಕ್ಕಳನ್ನು ಕಳುಹಿಸುತ್ತಾರೆ. ಹೆಚ್ಚಿನ ಶಿಕ್ಷಣ ಪಡೆಯದ ಪೋಷಕರೂ ಇದ್ದಾರೆ. ಹೀಗಾಗಿ ಶಿಕ್ಷಕರು ಬೋಧನೆ ಹಾಗೂ ಪೋಷಣೆಯ ಎರಡೂ ಜವಾಬ್ದಾರಿ ಹೊರಬೇಕು’ ಎಂದರು.</p>.<p>‘ಪೋಷಕರಂತೆ ಶಿಕ್ಷಕರಲ್ಲೂ ಭಾವನೆ ಇರಬೇಕು. ಸಣ್ಣಪುಟ್ಟ ತಪ್ಪುಗಳನ್ನು ಕ್ಷಮಿಸಬೇಕು. ಆದರೆ, ಶಿಸ್ತು ಪಾಲನೆಯಲ್ಲಿ ಯಾವುದೇ ರೀತಿಯ ಹೊಂದಾಣಿಕೆ ಇರಬಾರದು. ಮಕ್ಕಳಿಗೆ ಕಿವಿಮಾತು ಹೇಳಿ ಅವರನ್ನು ಸರಿದಾರಿಯಲ್ಲಿ ನಡೆಸಬೇಕು’ ಎಂದು ಹೇಳಿದರು.</p>.<p>ಪಾಲಿಕೆಯ ಶಾಲೆ– ಕಾಲೇಜುಗಳಲ್ಲಿ ಈ ವರ್ಷ 23,322 ಮಕ್ಕಳು ಪ್ರವೇಶ ಪಡೆದುಕೊಂಡಿದ್ದಾರೆ. ಕಳೆದ ಎಲ್ಲ ವರ್ಷಗಳಿಗೆ ಹೋಲಿಸಿದರೆ ಇದು ಹೆಚ್ಚಾಗಿದೆ ಎಂದು ಬಿಬಿಎಂಪಿ ಶಿಕ್ಷಣ ಇಲಾಖೆಯ ವಿಶೇಷ ಆಯುಕ್ತೆ ಪ್ರೀತಿ ಗೆಹ್ಲೋಟ್ ತಿಳಿಸಿದರು.</p>.<p>2023–24ನೇ ಸಾಲಿನಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಎಸ್ಸೆಸ್ಸೆಲ್ಸಿಯ 73 ವಿದ್ಯಾರ್ಥಿಗಳಿಗೆ ತಲಾ ₹25 ಸಾವಿರ, ದ್ವಿತೀಯ ಪಿಯುಸಿಯ 227 ವಿದ್ಯಾರ್ಥಿಗಳಿಗೆ ತಲಾ ₹35 ಸಾವಿರ ಹಾಗೂ ಪದವಿಯ ಆರು ವಿದ್ಯಾರ್ಥಿಗಳಿಗೆ ತಲಾ ₹50 ಸಾವಿರ ಪ್ರೋತ್ಸಾಹಧನ ನೀಡಲಾಯಿತು.</p>.<p><strong>ವೇತನ ಹೆಚ್ಚಳದ ಭರವಸೆ:</strong> ‘ವ್ಯವಸ್ಥೆ ಬೇರೆ ಆಗಿರುವುದರಿಂದ ವೇತನ ನೀಡುವುದರಲ್ಲಿ ಸಮಸ್ಯೆ ಆಗಿದೆ. ವೇತನ ಹೆಚ್ಚಳದ ಬಗ್ಗೆಯೂ ಕೆಲವು ಪ್ರಕ್ರಿಯೆಗಳನ್ನು ನಡೆಸಬೇಕಿದೆ. ವರ್ಷಕ್ಕೆ ಒಂದುಬಾರಿ ವೇತನ ಹೆಚ್ಚಿಸಲೂ ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ತುಷಾರ್ ಗಿರಿನಾಥ್ ಭರವಸೆ ನೀಡಿದರು.</p>.<p>ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ನಡೆದ ಪುರಭವನದ ಮುಂದೆ ‘ವೇತನ ಬಿಡುಗಡೆ ಹಾಗೂ ಹೆಚ್ಚಳದಲ್ಲಿ ಸಮಸ್ಯೆಯಾಗಿದೆ’ ಎಂದು ಆರೋಪಿಸಿ ಶಿಕ್ಷಕರು ಕಪ್ಪು ಬಟ್ಟೆ ಧರಿಸಿ ಪ್ರತಿಭಟಿಸಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ತುಷಾರ್ ಗಿರಿನಾಥ್, ‘ಬಿಬಿಎಂಪಿ ಇದೀಗ ಎಸ್ಡಿಎಂಸಿ ಮೂಲಕ ಶಿಕ್ಷಕರನ್ನು ನೇಮಿಸಿಕೊಳ್ಳುವ ಪ್ರಕ್ರಿಯೆ ಆರಂಭಿಸಿದೆ. ಕೆಲವು ತೊಂದರೆಗಳಿದ್ದು, ಅವುಗಳನ್ನು ಶೀಘ್ರ ಪರಿಹರಿಸಲಾಗುತ್ತದೆ’ ಎಂದು ಸುದ್ದಿಗಾರರಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>