ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಲೋಹಿಯ ಅನುಯಾಯಿಯಾಗಿ, ಸಮಾಜವಾದಿ ಸಿದ್ಧಾಂತದ ಚಿಂತನೆಗಳನ್ನು ಒಳಗೊಂಡಿರುವ ಸಿದ್ದರಾಮಯ್ಯ ಅವರು ಸಂವಿಧಾನದ ಆಶಯಗಳನ್ನು ಸಾಕಾರಗೊಳಿಸುವ ಬದ್ಧತೆಯನ್ನು ಹೊಂದಿರುವ ರಾಜಕಾರಣಿ. ಪೆರಿಯಾರ್, ಕುವೆಂಪು ಅವರಂತೆ ಮೌಢ್ಯಗಳನ್ನು ವಿರೋಧಿಸುವ ಗುಣವಿದೆ. ಜಾತ್ಯತೀತ ತತ್ವಗಳನ್ನು ಅಳವಡಿಸಿಕೊಂಡಿದ್ದಾರೆ. 2013ರಿಂದ 18ರವರೆಗೆ ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಅವರು ತಂದ ‘ಭಾಗ್ಯ’ಗಳು ಬಡವರು ನೆಮ್ಮದಿಯಿಂದ ಬದುಕುವಂತೆ ಮಾಡಿವೆ. ಅಂಥ ಸಿದ್ದರಾಮಯ್ಯ ಅವರನ್ನು ಪದವಿ ಬಿಟ್ಟುಕೊಡಿ ಎಂದು ಕೇಳುತ್ತಿರುವವರು ಆತ್ಮವಿಮರ್ಶೆ ಮಾಡಿಕೊಳ್ಳಬೇಕು’ ಎಂದು ಆಗ್ರಹಿಸಿದರು.