<p><strong>ಬೆಂಗಳೂರು:</strong> ಪಿಎಂ ಸ್ವನಿಧಿ ಯೋಜನೆಯ ‘ಹಣಕಾಸು ಸೇರ್ಪಡೆ ಮತ್ತು ಬೀದಿ ವ್ಯಾಪಾರಿಗಳ ಸಬಲೀಕರಣ ಪ್ರವೇಶಕ್ಕಾಗಿ ಕಾರ್ಯಕ್ಷಮತೆ ಗುರುತಿಸುವಿಕೆ’ ಕಾರ್ಯಕ್ರಮದಲ್ಲಿ ದೇಶದ ‘ಮೆಗಾ ಮತ್ತು ಮಿಲಿಯನ್ ಪ್ಲಸ್ ನಗರಗಳಡಿ’ ಬಿಬಿಎಂಪಿ ಎರಡನೇ ರ್ಯಾಂಕ್ ಗಳಿಸಿದೆ.</p>.<p>ದೆಹಲಿಯ ‘ಇಂಡಿಯಾ ಹ್ಯಾಬಿಟೇಟ್ ಸೆಂಟರ್’ನಲ್ಲಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಮನೋಹರ್ ಲಾಲ್ ಅವರು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.</p>.<p>ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ, ದೀನ್ ದಯಾಳ್ ಅಂತ್ಯೋದಯ ಯೋಜನೆ – ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ವತಿಯಿಂದ ಪ್ರಧಾನ ಮಂತ್ರಿ ಬೀದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿ(ಪಿಎಂ ಸ್ವನಿಧಿ) ಯೋಜನೆಯನ್ನು ಜಾರಿಗೆ ತರಲಾಗಿದೆ. ಅದರಡಿ ಬೀದಿ ಬದಿ ವ್ಯಾಪಾರಿಗಳು ಸ್ವಾವಲಂಭಿ ಬದುಕು ಕಟ್ಟಿಕೊಳ್ಳಲು ನೆರವಾಗುವ ಉದ್ದೇಶದಿಂದ ಕಿರು ಸಾಲಗಳನ್ನು ನೀಡಲಾಗುತ್ತಿದೆ.</p>.<p>ಬಿಬಿಎಂಪಿ ವ್ಯಾಪ್ತಿಯಲ್ಲಿ2,04,173 ಅರ್ಹ ಅರ್ಜಿಗಳು ಬಂದಿದ್ದು, 1,64,276 ಅರ್ಜಿಗಳು ಮಂಜೂರಾಗಿವೆ. 1,28,844 ಫಲಾನುಭವಿಗಳು ಸಾಲ ಪಡೆದಿದ್ದಾರೆ. ಸಾಲ ₹ 199.94 ಕೋಟಿ ಮಂಜೂರಾಗಿದ್ದು, ₹ 184.36 ಕೋಟಿ ವಿತರಣೆಯಾಗಿದೆ. ಈ ಕ್ರಮಗಳಿಗಾಗಿ ಬಿಬಿಎಂಪಿ ಪ್ರಶಸ್ತಿ ಪಡೆಯಿತು.</p>.<p>ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ರಾಜ್ಯ ಸಚಿವ ತೋಹಾನ್ ಸಾಹು, ಬಿಬಿಎಂಪಿ ಕಲ್ಯಾಣ ವಿಭಾಗದ ವಿಶೇಷ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್, ಪಿಎಂ ಸ್ವನಿಧಿಯ ಸಮುದಾಯ ಸಂಘಟಕ ಜನಾರ್ದನ ಚಾರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪಿಎಂ ಸ್ವನಿಧಿ ಯೋಜನೆಯ ‘ಹಣಕಾಸು ಸೇರ್ಪಡೆ ಮತ್ತು ಬೀದಿ ವ್ಯಾಪಾರಿಗಳ ಸಬಲೀಕರಣ ಪ್ರವೇಶಕ್ಕಾಗಿ ಕಾರ್ಯಕ್ಷಮತೆ ಗುರುತಿಸುವಿಕೆ’ ಕಾರ್ಯಕ್ರಮದಲ್ಲಿ ದೇಶದ ‘ಮೆಗಾ ಮತ್ತು ಮಿಲಿಯನ್ ಪ್ಲಸ್ ನಗರಗಳಡಿ’ ಬಿಬಿಎಂಪಿ ಎರಡನೇ ರ್ಯಾಂಕ್ ಗಳಿಸಿದೆ.</p>.<p>ದೆಹಲಿಯ ‘ಇಂಡಿಯಾ ಹ್ಯಾಬಿಟೇಟ್ ಸೆಂಟರ್’ನಲ್ಲಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಮನೋಹರ್ ಲಾಲ್ ಅವರು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.</p>.<p>ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ, ದೀನ್ ದಯಾಳ್ ಅಂತ್ಯೋದಯ ಯೋಜನೆ – ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ವತಿಯಿಂದ ಪ್ರಧಾನ ಮಂತ್ರಿ ಬೀದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿ(ಪಿಎಂ ಸ್ವನಿಧಿ) ಯೋಜನೆಯನ್ನು ಜಾರಿಗೆ ತರಲಾಗಿದೆ. ಅದರಡಿ ಬೀದಿ ಬದಿ ವ್ಯಾಪಾರಿಗಳು ಸ್ವಾವಲಂಭಿ ಬದುಕು ಕಟ್ಟಿಕೊಳ್ಳಲು ನೆರವಾಗುವ ಉದ್ದೇಶದಿಂದ ಕಿರು ಸಾಲಗಳನ್ನು ನೀಡಲಾಗುತ್ತಿದೆ.</p>.<p>ಬಿಬಿಎಂಪಿ ವ್ಯಾಪ್ತಿಯಲ್ಲಿ2,04,173 ಅರ್ಹ ಅರ್ಜಿಗಳು ಬಂದಿದ್ದು, 1,64,276 ಅರ್ಜಿಗಳು ಮಂಜೂರಾಗಿವೆ. 1,28,844 ಫಲಾನುಭವಿಗಳು ಸಾಲ ಪಡೆದಿದ್ದಾರೆ. ಸಾಲ ₹ 199.94 ಕೋಟಿ ಮಂಜೂರಾಗಿದ್ದು, ₹ 184.36 ಕೋಟಿ ವಿತರಣೆಯಾಗಿದೆ. ಈ ಕ್ರಮಗಳಿಗಾಗಿ ಬಿಬಿಎಂಪಿ ಪ್ರಶಸ್ತಿ ಪಡೆಯಿತು.</p>.<p>ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ರಾಜ್ಯ ಸಚಿವ ತೋಹಾನ್ ಸಾಹು, ಬಿಬಿಎಂಪಿ ಕಲ್ಯಾಣ ವಿಭಾಗದ ವಿಶೇಷ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್, ಪಿಎಂ ಸ್ವನಿಧಿಯ ಸಮುದಾಯ ಸಂಘಟಕ ಜನಾರ್ದನ ಚಾರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>