ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ನಾರಾಯಣಸ್ವಾಮಿ, ‘ಜೈಲಿನಲ್ಲಿ ವಿಚಾರಣಾಧೀನ ಕೈದಿಗಳು ಹೇಗೆ ಇರುತ್ತಾರೋ ಹಾಗೆಯೇ ಇವರೂ ಇದ್ದಾರೆ. ಅವರಿಗೆ ವಿಶೇಷ ಸೌಲಭ್ಯ
ಕಲ್ಪಿಸುತ್ತಿಲ್ಲ. ಜಾಮೀನು ಅರ್ಜಿ ಯಾವಾಗ ಹಾಕಿಕೊಳ್ಳಬೇಕು ಎನ್ನುವುದಕ್ಕೆ ಕಾಯುತ್ತಿದ್ದೇವೆ. ಅದರ ಬಗ್ಗೆಯೇ ಚರ್ಚೆ ನಡೆಸಲು ಭೇಟಿ ಮಾಡಿದ್ದೆ. ಜುಲೈ 4ರ ಬಳಿಕ ಜಾಮೀನು ಅರ್ಜಿ ಸಲ್ಲಿಸುವ ಬಗ್ಗೆ ಚಿಂತಿಸಲಾಗುವುದು’ ಎಂದು ಹೇಳಿದರು.