<p><strong>ಬೆಂಗಳೂರು:</strong> ‘ಅವಕಾಶವಂಚಿತ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಪ್ರಜ್ಞೆ ಮೂಡಿಸುವುದಕ್ಕೆ ದುಡಿದ ಶ್ರೇಯ ಪ್ರೊ.ಕೆ.ಸಿದ್ದಪ್ಪ’ ಅವರಿಗೆ ಸಲ್ಲುತ್ತದೆ ಎಂದು ಸಾಹಿತಿ ಗೊ.ರು.ಚನ್ನಬಸಪ್ಪ ಹೇಳಿದರು.</p>.<p>ವಿಜ್ಞಾನಿ ಮತ್ತು ಪ್ರಾಧ್ಯಾಪಕ ಕೆ.ಸಿದ್ದಪ್ಪ ಅವರ ಅಭಿನಂದನಾ ಕಾರ್ಯಕ್ರಮದಲ್ಲಿ, ಗೊ.ರು.ಚನ್ನಬಸಪ್ಪ ಅವರು ಅಭಿನಂದನಾ ನುಡಿಗಳನ್ನಾಡಿದರು.</p>.<p>‘ಸಿದ್ದಪ್ಪ ಅವರು ವಿದ್ಯಾರ್ಥಿಗಳಿಗೆ ಯಾವುದರ ಅಗತ್ಯವಿದೆ ಎಂಬುದನ್ನು ಮನಗಂಡು, ಕೆಲಸವನ್ನು ಮಾಡುತ್ತಿದ್ದರು. ಅವರು ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿಯಾಗಿದ್ದಾಗ ಸ್ನಾತಕೋತ್ತರ ಪದವಿ ಹಂತದಲ್ಲಿ ಮೊದಲ ಬಾರಿಗೆ ಕಂಪ್ಯೂಟರ್ ಅಪ್ಲಿಕೇಷನ್ ಕೋರ್ಸ್ ಆರಂಭಿಸಿದ್ದರು’ ಎಂದರು.</p>.<h2>ಎನ್ಇಪಿಗೆ ವಿರೋಧ ಅನಗತ್ಯವಾಗಿತ್ತು:</h2>.<p>‘ಭಾರತವು ಸ್ವಾತಂತ್ರ್ಯಗೊಂಡ ನಂತರ ಮಾಡಬೇಕಿದ್ದ ಮೊದಲ ಕೆಲಸವೇ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರೂಪಿಸುವುದು. ಆದರೆ ಅಂದಿನ ನಾಯಕರು ಶಿಕ್ಷಣ ಕ್ಷೇತ್ರದಲ್ಲಿ ಕೇವಲ ಭೌತಿಕ ನಿರ್ಮಾಣಗಳಿಗೆ ಒತ್ತು ನೀಡಿದರು. ಆದರೆ ಆ ಸವಲತ್ತುಗಳನ್ನು ಬಳಸಿಕೊಳ್ಳುವಂತಹ ಯುವ ಸಮುದಾಯವನ್ನು ರೂಪಿಸಲಿಲ್ಲ. ಅಂತಹ ಯತ್ನವನ್ನು ಸಿದ್ದಪ್ಪನವರು ಮಾಡಿದರು’ ಎಂದು ಅಭಿನಂದನಾ ಸಮಿತಿ ಅಧ್ಯಕ್ಷ ಮತ್ತು ಕೈಗಾರಿಕೋದ್ಯಮಿ ಎಸ್.ರುದ್ರೇಗೌಡ ಹೇಳಿದರು.</p>.<p>‘ಈಚಿನ ವರ್ಷಗಳಲ್ಲಿ ಕೇಂದ್ರ ಸರ್ಕಾರವು ಹೊಸ ಶಿಕ್ಷಣ ನೀತಿಯನ್ನು (ಎನ್ಇಪಿ) ತಂದಿತ್ತು. ಆದರೆ ಆ ಶಿಕ್ಷಣ ನೀತಿ ಕುರಿತಾಗಿ ಅನಗತ್ಯವಾದ ಭಿನ್ನಾಭಿಪ್ರಾಯಗಳನ್ನು ರೂಪಿಸಿ, ವಿರೋಧಿಸಲಾಯಿತು. ಅದು ವಿಷಾದನೀಯ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಅವಕಾಶವಂಚಿತ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಪ್ರಜ್ಞೆ ಮೂಡಿಸುವುದಕ್ಕೆ ದುಡಿದ ಶ್ರೇಯ ಪ್ರೊ.ಕೆ.ಸಿದ್ದಪ್ಪ’ ಅವರಿಗೆ ಸಲ್ಲುತ್ತದೆ ಎಂದು ಸಾಹಿತಿ ಗೊ.ರು.ಚನ್ನಬಸಪ್ಪ ಹೇಳಿದರು.</p>.<p>ವಿಜ್ಞಾನಿ ಮತ್ತು ಪ್ರಾಧ್ಯಾಪಕ ಕೆ.ಸಿದ್ದಪ್ಪ ಅವರ ಅಭಿನಂದನಾ ಕಾರ್ಯಕ್ರಮದಲ್ಲಿ, ಗೊ.ರು.ಚನ್ನಬಸಪ್ಪ ಅವರು ಅಭಿನಂದನಾ ನುಡಿಗಳನ್ನಾಡಿದರು.</p>.<p>‘ಸಿದ್ದಪ್ಪ ಅವರು ವಿದ್ಯಾರ್ಥಿಗಳಿಗೆ ಯಾವುದರ ಅಗತ್ಯವಿದೆ ಎಂಬುದನ್ನು ಮನಗಂಡು, ಕೆಲಸವನ್ನು ಮಾಡುತ್ತಿದ್ದರು. ಅವರು ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿಯಾಗಿದ್ದಾಗ ಸ್ನಾತಕೋತ್ತರ ಪದವಿ ಹಂತದಲ್ಲಿ ಮೊದಲ ಬಾರಿಗೆ ಕಂಪ್ಯೂಟರ್ ಅಪ್ಲಿಕೇಷನ್ ಕೋರ್ಸ್ ಆರಂಭಿಸಿದ್ದರು’ ಎಂದರು.</p>.<h2>ಎನ್ಇಪಿಗೆ ವಿರೋಧ ಅನಗತ್ಯವಾಗಿತ್ತು:</h2>.<p>‘ಭಾರತವು ಸ್ವಾತಂತ್ರ್ಯಗೊಂಡ ನಂತರ ಮಾಡಬೇಕಿದ್ದ ಮೊದಲ ಕೆಲಸವೇ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರೂಪಿಸುವುದು. ಆದರೆ ಅಂದಿನ ನಾಯಕರು ಶಿಕ್ಷಣ ಕ್ಷೇತ್ರದಲ್ಲಿ ಕೇವಲ ಭೌತಿಕ ನಿರ್ಮಾಣಗಳಿಗೆ ಒತ್ತು ನೀಡಿದರು. ಆದರೆ ಆ ಸವಲತ್ತುಗಳನ್ನು ಬಳಸಿಕೊಳ್ಳುವಂತಹ ಯುವ ಸಮುದಾಯವನ್ನು ರೂಪಿಸಲಿಲ್ಲ. ಅಂತಹ ಯತ್ನವನ್ನು ಸಿದ್ದಪ್ಪನವರು ಮಾಡಿದರು’ ಎಂದು ಅಭಿನಂದನಾ ಸಮಿತಿ ಅಧ್ಯಕ್ಷ ಮತ್ತು ಕೈಗಾರಿಕೋದ್ಯಮಿ ಎಸ್.ರುದ್ರೇಗೌಡ ಹೇಳಿದರು.</p>.<p>‘ಈಚಿನ ವರ್ಷಗಳಲ್ಲಿ ಕೇಂದ್ರ ಸರ್ಕಾರವು ಹೊಸ ಶಿಕ್ಷಣ ನೀತಿಯನ್ನು (ಎನ್ಇಪಿ) ತಂದಿತ್ತು. ಆದರೆ ಆ ಶಿಕ್ಷಣ ನೀತಿ ಕುರಿತಾಗಿ ಅನಗತ್ಯವಾದ ಭಿನ್ನಾಭಿಪ್ರಾಯಗಳನ್ನು ರೂಪಿಸಿ, ವಿರೋಧಿಸಲಾಯಿತು. ಅದು ವಿಷಾದನೀಯ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>