<p><strong>ಬೆಂಗಳೂರು</strong>: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಭ್ರಷ್ಟಾಚಾರ ಖಂಡಿಸಿ ಅಖಿಲ ಕರ್ನಾಟಕ ನಾಯಕ ಮಹಾಸಭಾದಿಂದ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಯಿತು.</p>.<p>ಮುಖ್ಯಮಂತ್ರಿ ಸೇರಿದಂತೆ ಸಚಿವರ ಮನೆಗೆ ಮುತ್ತಿಗೆ ಹಾಕಲು ಮುಂದಾದ ಪ್ರತಿಭಟನಕಾರರನ್ನು ಪೊಲೀಸರು ವಶಕ್ಕೆ ಪಡೆದು ಬಿಡುಗಡೆ ಮಾಡಿದರು. </p>.<p>‘ಈ ಭ್ರಷ್ಟಾಚಾರವು ತಳ ಸಮುದಾಯದವರ ಆಶಾಕಿರಣವನ್ನೇ ಕಸಿದುಕೊಂಡಿದೆ. ಪ್ರಾಮಾಣಿಕ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಳ್ಳದೇ ಇದ್ದರೆ, ಹಗರಣ ಗೊತ್ತಾಗುತ್ತಿರಲಿಲ್ಲ. ಹಣಕಾಸು ಇಲಾಖೆಯ ಗಮನಕ್ಕೆ ಬಾರದೇ ಅಕ್ರಮ ನಡೆಯಲು ಹೇಗೆ ಸಾಧ್ಯ? ಹಣಕಾಸು ಖಾತೆ ಮುಖ್ಯಮಂತ್ರಿ ಬಳಿಯಿದೆ. ಅವರೇ ನೈತಿಕಹೊಣೆ ಹೊರಬೇಕು’ ಎಂದು ಪ್ರತಿಭಟನಕಾರರು ಹೇಳಿದರು.</p>.<p>ಪ್ರತಿಭಟನೆಯಲ್ಲಿ ವೇದಿಕೆಯ ರಾಜಣ್ಣ, ಲಕ್ಷ್ಮಿಸಾಗರ, ಪಿ.ಪ್ರಕಾಶ್, ಕೆ.ಸಿ.ನಾಗರಾಜು, ಆರ್.ತಿಮ್ಮರಾಜು, ಗಣೇಶ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಭ್ರಷ್ಟಾಚಾರ ಖಂಡಿಸಿ ಅಖಿಲ ಕರ್ನಾಟಕ ನಾಯಕ ಮಹಾಸಭಾದಿಂದ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಯಿತು.</p>.<p>ಮುಖ್ಯಮಂತ್ರಿ ಸೇರಿದಂತೆ ಸಚಿವರ ಮನೆಗೆ ಮುತ್ತಿಗೆ ಹಾಕಲು ಮುಂದಾದ ಪ್ರತಿಭಟನಕಾರರನ್ನು ಪೊಲೀಸರು ವಶಕ್ಕೆ ಪಡೆದು ಬಿಡುಗಡೆ ಮಾಡಿದರು. </p>.<p>‘ಈ ಭ್ರಷ್ಟಾಚಾರವು ತಳ ಸಮುದಾಯದವರ ಆಶಾಕಿರಣವನ್ನೇ ಕಸಿದುಕೊಂಡಿದೆ. ಪ್ರಾಮಾಣಿಕ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಳ್ಳದೇ ಇದ್ದರೆ, ಹಗರಣ ಗೊತ್ತಾಗುತ್ತಿರಲಿಲ್ಲ. ಹಣಕಾಸು ಇಲಾಖೆಯ ಗಮನಕ್ಕೆ ಬಾರದೇ ಅಕ್ರಮ ನಡೆಯಲು ಹೇಗೆ ಸಾಧ್ಯ? ಹಣಕಾಸು ಖಾತೆ ಮುಖ್ಯಮಂತ್ರಿ ಬಳಿಯಿದೆ. ಅವರೇ ನೈತಿಕಹೊಣೆ ಹೊರಬೇಕು’ ಎಂದು ಪ್ರತಿಭಟನಕಾರರು ಹೇಳಿದರು.</p>.<p>ಪ್ರತಿಭಟನೆಯಲ್ಲಿ ವೇದಿಕೆಯ ರಾಜಣ್ಣ, ಲಕ್ಷ್ಮಿಸಾಗರ, ಪಿ.ಪ್ರಕಾಶ್, ಕೆ.ಸಿ.ನಾಗರಾಜು, ಆರ್.ತಿಮ್ಮರಾಜು, ಗಣೇಶ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>