<p>ಬೆಂಗಳೂರು: ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು, ನ್ಯಾಯಾಲಯದ ಷರತ್ತಿಗೆ ಒಳಪಟ್ಟು ನೇಮಕಾತಿ ಆದೇಶ ನೀಡುವಂತೆ ಆಗ್ರಹಿಸಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಶುಕ್ರವಾರದಿಂದ<br>ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದರು. ಮಳೆಯಲ್ಲಿ ಕೊಡೆ ಹಿಡಿದು ಪ್ರತಿಭಟನೆ ನಡೆಸಿ, ಆಕ್ರೋಶ ಹೊರಹಾಕಿದರು.</p><p>ಲೋಕಸಭೆ ಚುನಾವಣೆ ನೀತಿ ಸಂಹಿತೆ ಕಾರಣದಿಂದ ಸ್ಥಳ ನಿಯುಕ್ತಿ ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ಇಲಾಖೆ ಮುಂದೂಡಿತ್ತು. ಲೋಕಸಭೆ ಚುನಾವಣೆ ಮುಕ್ತಾಯವಾಗಿ ಒಂದೂವರೆ ತಿಂಗಳು ಕಳೆದರೂ ಸ್ಥಳ ನಿಯುಕ್ತಿ ಕೌನ್ಸೆಲಿಂಗ್ ವೇಳಾಪಟ್ಟಿಯನ್ನು ಇಲಾಖೆ ಪ್ರಕಟಿಸಿಲ್ಲ. ನಾನಾ ಕಾರಣದಿಂದ ನೇಮಕಾತಿ ಆದೇಶ ನೀಡದೇ ದಿನಾಂಕ<br>ಮುಂದೂಡಲಾಗುತ್ತಿದೆ. ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಆಯ್ಕೆಯಾದವರ ಭವಿಷ್ಯ ಡೋಲಾಯಮಾನ ಆಗಿದೆ ಎಂದು ಅಭ್ಯರ್ಥಿಗಳು ಅಳಲು ತೋಡಿಕೊಂಡರು.</p><p>'ಕಲ್ಯಾಣ ಕರ್ನಾಟಕ ಮೀಸಲಾತಿ ವಿಚಾರವು ಹೈಕೋರ್ಟ್ನಲ್ಲಿದ್ದು, ಪ್ರಕರಣ ಮುಕ್ತಾಯವಾದ ಮೇಲೆ ನೇಮಕಾತಿ ಮುಂದುವರೆಸುತ್ತೇವೆ’<br>ಎಂದು ಉನ್ನತ ಶಿಕ್ಷಣ ಸಚಿವರು ಹಾಗೂ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. ಆದರೆ, ವಾಸ್ತವವಾಗಿ ಹೈಕೋರ್ಟ್ ಮಧ್ಯಂತರ ಆದೇಶದಲ್ಲಿ ಕೌನ್ಸೆಲಿಂಗ್ ನಡೆಸಲು ಅವಕಾಶ ನೀಡಿ ಆದೇಶ ನೀಡಿದೆ. ಆದರೂ, ಕೌನ್ಸೆಲಿಂಗ್ ನಡೆಸುತ್ತಿಲ್ಲ ಎಂದು ಅಳಲು ತೋಡಿಕೊಂಡರು.</p><p>‘ಕಲ್ಯಾಣ ಕರ್ನಾಟಕ ಮೀಸಲಾತಿ ವಿಚಾರವಾಗಿ ಹೈಕೋರ್ಟ್ನಲ್ಲಿ ಹಲವು ಪ್ರಕರಣಗಳು ವಿಚಾರಣೆ ಹಂತದಲ್ಲಿದ್ದರೂ ಇತರೆ ಇಲಾಖೆಗಳಲ್ಲಿ ನ್ಯಾಯಾಲಯದ ಷರತ್ತಿಗೆ ಒಳಪಟ್ಟು ಆದೇಶ ನೀಡಲಾಗಿದೆ. ಅದರಂತೆ ನಮಗೂ ಆದೇಶ ಪ್ರತಿ ನೀಡಿ’ ಎಂದು ಅಭ್ಯರ್ಥಿಗಳು ಆಗ್ರಹಿಸಿದರು.</p><p>2021ರಲ್ಲಿ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕರ 26 ವಿಷಯಗಳ 1,242 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿತ್ತು. 2023ರ ಮಾರ್ಚ್ 3ರಂದು 1,208 ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ. ಈ ಆಯ್ಕೆ ಪಟ್ಟಿಯಲ್ಲಿ ಒಟ್ಟು 1,208 ಅಭ್ಯರ್ಥಿಗಳು ಆಯ್ಕೆ ಆಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು, ನ್ಯಾಯಾಲಯದ ಷರತ್ತಿಗೆ ಒಳಪಟ್ಟು ನೇಮಕಾತಿ ಆದೇಶ ನೀಡುವಂತೆ ಆಗ್ರಹಿಸಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಶುಕ್ರವಾರದಿಂದ<br>ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದರು. ಮಳೆಯಲ್ಲಿ ಕೊಡೆ ಹಿಡಿದು ಪ್ರತಿಭಟನೆ ನಡೆಸಿ, ಆಕ್ರೋಶ ಹೊರಹಾಕಿದರು.</p><p>ಲೋಕಸಭೆ ಚುನಾವಣೆ ನೀತಿ ಸಂಹಿತೆ ಕಾರಣದಿಂದ ಸ್ಥಳ ನಿಯುಕ್ತಿ ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ಇಲಾಖೆ ಮುಂದೂಡಿತ್ತು. ಲೋಕಸಭೆ ಚುನಾವಣೆ ಮುಕ್ತಾಯವಾಗಿ ಒಂದೂವರೆ ತಿಂಗಳು ಕಳೆದರೂ ಸ್ಥಳ ನಿಯುಕ್ತಿ ಕೌನ್ಸೆಲಿಂಗ್ ವೇಳಾಪಟ್ಟಿಯನ್ನು ಇಲಾಖೆ ಪ್ರಕಟಿಸಿಲ್ಲ. ನಾನಾ ಕಾರಣದಿಂದ ನೇಮಕಾತಿ ಆದೇಶ ನೀಡದೇ ದಿನಾಂಕ<br>ಮುಂದೂಡಲಾಗುತ್ತಿದೆ. ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಆಯ್ಕೆಯಾದವರ ಭವಿಷ್ಯ ಡೋಲಾಯಮಾನ ಆಗಿದೆ ಎಂದು ಅಭ್ಯರ್ಥಿಗಳು ಅಳಲು ತೋಡಿಕೊಂಡರು.</p><p>'ಕಲ್ಯಾಣ ಕರ್ನಾಟಕ ಮೀಸಲಾತಿ ವಿಚಾರವು ಹೈಕೋರ್ಟ್ನಲ್ಲಿದ್ದು, ಪ್ರಕರಣ ಮುಕ್ತಾಯವಾದ ಮೇಲೆ ನೇಮಕಾತಿ ಮುಂದುವರೆಸುತ್ತೇವೆ’<br>ಎಂದು ಉನ್ನತ ಶಿಕ್ಷಣ ಸಚಿವರು ಹಾಗೂ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. ಆದರೆ, ವಾಸ್ತವವಾಗಿ ಹೈಕೋರ್ಟ್ ಮಧ್ಯಂತರ ಆದೇಶದಲ್ಲಿ ಕೌನ್ಸೆಲಿಂಗ್ ನಡೆಸಲು ಅವಕಾಶ ನೀಡಿ ಆದೇಶ ನೀಡಿದೆ. ಆದರೂ, ಕೌನ್ಸೆಲಿಂಗ್ ನಡೆಸುತ್ತಿಲ್ಲ ಎಂದು ಅಳಲು ತೋಡಿಕೊಂಡರು.</p><p>‘ಕಲ್ಯಾಣ ಕರ್ನಾಟಕ ಮೀಸಲಾತಿ ವಿಚಾರವಾಗಿ ಹೈಕೋರ್ಟ್ನಲ್ಲಿ ಹಲವು ಪ್ರಕರಣಗಳು ವಿಚಾರಣೆ ಹಂತದಲ್ಲಿದ್ದರೂ ಇತರೆ ಇಲಾಖೆಗಳಲ್ಲಿ ನ್ಯಾಯಾಲಯದ ಷರತ್ತಿಗೆ ಒಳಪಟ್ಟು ಆದೇಶ ನೀಡಲಾಗಿದೆ. ಅದರಂತೆ ನಮಗೂ ಆದೇಶ ಪ್ರತಿ ನೀಡಿ’ ಎಂದು ಅಭ್ಯರ್ಥಿಗಳು ಆಗ್ರಹಿಸಿದರು.</p><p>2021ರಲ್ಲಿ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕರ 26 ವಿಷಯಗಳ 1,242 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿತ್ತು. 2023ರ ಮಾರ್ಚ್ 3ರಂದು 1,208 ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ. ಈ ಆಯ್ಕೆ ಪಟ್ಟಿಯಲ್ಲಿ ಒಟ್ಟು 1,208 ಅಭ್ಯರ್ಥಿಗಳು ಆಯ್ಕೆ ಆಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>