<p><strong>ಬೆಂಗಳೂರು</strong>: ರೈತರ ಸಂಪೂರ್ಣ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ, ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರಾಜ್ಯದ ಹಲವು ಜಿಲ್ಲೆಗಳ ರೈತರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.</p>.<p>‘ಕೇಂದ್ರ ಸರ್ಕಾರವು ಮೂರು ಕೃಷಿ ಕಾಯ್ದೆಗಳನ್ನು ಈಗಾಗಲೇ ವಾಪಸ್ ಪಡೆದಿದೆ. ಆದರೆ, ರಾಜ್ಯ ಸರ್ಕಾರದಿಂದ ಯಾವುದೇ ಕ್ರಮ ಆಗಿಲ್ಲ. ಕೃಷಿಗೆ ಸಂಬಂಧಿಸಿದ ಮೂರೂ ಕಾಯ್ದೆಗಳನ್ನು ವಾಪಸ್ ಪಡೆಯುವ ಆದೇಶವನ್ನು ತಕ್ಷಣವೇ ಹೊರಡಿಸಬೇಕು’ ಎಂದು ರೈತರು ಆಗ್ರಹಿಸಿದರು.</p>.<p>ರೈತರು ಬೆಳೆದ ಬೆಳೆಗಳಿಗೆ ಕಾನೂನಾತ್ಮಕ ದರ ನಿಗದಿಪಡಿಸಬೇಕು ಹಾಗೂ ಸ್ವಾಮಿನಾಥನ್ ವರದಿ ಜಾರಿಗೆ ತರಬೇಕು ಎಂದೂ ಕೋರಿದರು.</p>.<p>ಆಲಮಟ್ಟಿ ಜಲಾಶಯದ ಎತ್ತರವನ್ನು 519 ಮೀಟರ್ನಿಂದ 524 ಮೀಟರ್ಗೆ ಏರಿಸಬೇಕು. ಮಹದಾಯಿ ಯೋಜನೆ ಜಾರಿ, ನವುಲಿ ಬಳಿ ಸಮಾನಾಂತರ ಜಲಾಶಯ ನಿರ್ಮಾಣ, ಬೆಣ್ಣೆಹಳ್ಳ ಯೋಜನೆ ಹಾಗೂ ಮೇಕೆದಾಟು ಯೋಜನೆಯನ್ನು ಶೀಘ್ರವೇ ಜಾರಿಗೆ ತೆರಬೇಕು ಎಂದು ಕೋರಿದರು.</p>.<p>ಬಗರ್ಹುಕುಂ ಸಾಗುವಳಿದಾರರಿಗೆ ಶೀಘ್ರದಲ್ಲೇ ಪಟ್ಟಾ ವಿತರಣೆ ಮಾಡಬೇಕು. ಇದುವರೆಗೂ ಆಡಳಿತ ನಡೆಸಿದ್ದ ಸರ್ಕಾರಗಳು ರೈತರ ಪಂಪ್ಸೆಟ್ಗಳಿಗೆ ಉಚಿತವಾಗಿ ಪರಿಕರಗಳನ್ನು ವಿತರಣೆ ಮಾಡುತ್ತಿದ್ದವು. ಆ ಯೋಜನೆಯನ್ನು ಈ ಸರ್ಕಾರವೂ ಮುಂದುವರಿಸಬೇಕು. ಹಿಂದಿನ ಸರ್ಕಾರವು ವಿದ್ಯುತ್ ಪರಿವರ್ತಕಗಳಿಗೆ ₹25 ಸಾವಿರ ದರ ನಿಗದಿ ಮಾಡಿತ್ತು. ಈಗಿನ ಸರ್ಕಾರ ₹2.50 ಲಕ್ಷ ನಿಗದಿ ಪಡಿಸಿದ್ದು, ಆ ಆದೇಶವನ್ನು ವಾಪಸ್ ಪಡೆಯಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.</p>.<p>ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಗಣಿಗಾರಿಕೆ ಮಿತಿಮೀರಿದ್ದು, ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು. ಸಂಘದ ರಾಜ್ಯ ಅಧ್ಯಕ್ಷ ವಾಸುದೇವ ಮೇಟಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.</p>.<p>ಪ್ರತಿಭಟನಾ ಸ್ಥಳಕ್ಕೆ ಬಂದ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಮನವಿ ಸ್ವೀಕರಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರೈತರ ಸಂಪೂರ್ಣ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ, ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರಾಜ್ಯದ ಹಲವು ಜಿಲ್ಲೆಗಳ ರೈತರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.</p>.<p>‘ಕೇಂದ್ರ ಸರ್ಕಾರವು ಮೂರು ಕೃಷಿ ಕಾಯ್ದೆಗಳನ್ನು ಈಗಾಗಲೇ ವಾಪಸ್ ಪಡೆದಿದೆ. ಆದರೆ, ರಾಜ್ಯ ಸರ್ಕಾರದಿಂದ ಯಾವುದೇ ಕ್ರಮ ಆಗಿಲ್ಲ. ಕೃಷಿಗೆ ಸಂಬಂಧಿಸಿದ ಮೂರೂ ಕಾಯ್ದೆಗಳನ್ನು ವಾಪಸ್ ಪಡೆಯುವ ಆದೇಶವನ್ನು ತಕ್ಷಣವೇ ಹೊರಡಿಸಬೇಕು’ ಎಂದು ರೈತರು ಆಗ್ರಹಿಸಿದರು.</p>.<p>ರೈತರು ಬೆಳೆದ ಬೆಳೆಗಳಿಗೆ ಕಾನೂನಾತ್ಮಕ ದರ ನಿಗದಿಪಡಿಸಬೇಕು ಹಾಗೂ ಸ್ವಾಮಿನಾಥನ್ ವರದಿ ಜಾರಿಗೆ ತರಬೇಕು ಎಂದೂ ಕೋರಿದರು.</p>.<p>ಆಲಮಟ್ಟಿ ಜಲಾಶಯದ ಎತ್ತರವನ್ನು 519 ಮೀಟರ್ನಿಂದ 524 ಮೀಟರ್ಗೆ ಏರಿಸಬೇಕು. ಮಹದಾಯಿ ಯೋಜನೆ ಜಾರಿ, ನವುಲಿ ಬಳಿ ಸಮಾನಾಂತರ ಜಲಾಶಯ ನಿರ್ಮಾಣ, ಬೆಣ್ಣೆಹಳ್ಳ ಯೋಜನೆ ಹಾಗೂ ಮೇಕೆದಾಟು ಯೋಜನೆಯನ್ನು ಶೀಘ್ರವೇ ಜಾರಿಗೆ ತೆರಬೇಕು ಎಂದು ಕೋರಿದರು.</p>.<p>ಬಗರ್ಹುಕುಂ ಸಾಗುವಳಿದಾರರಿಗೆ ಶೀಘ್ರದಲ್ಲೇ ಪಟ್ಟಾ ವಿತರಣೆ ಮಾಡಬೇಕು. ಇದುವರೆಗೂ ಆಡಳಿತ ನಡೆಸಿದ್ದ ಸರ್ಕಾರಗಳು ರೈತರ ಪಂಪ್ಸೆಟ್ಗಳಿಗೆ ಉಚಿತವಾಗಿ ಪರಿಕರಗಳನ್ನು ವಿತರಣೆ ಮಾಡುತ್ತಿದ್ದವು. ಆ ಯೋಜನೆಯನ್ನು ಈ ಸರ್ಕಾರವೂ ಮುಂದುವರಿಸಬೇಕು. ಹಿಂದಿನ ಸರ್ಕಾರವು ವಿದ್ಯುತ್ ಪರಿವರ್ತಕಗಳಿಗೆ ₹25 ಸಾವಿರ ದರ ನಿಗದಿ ಮಾಡಿತ್ತು. ಈಗಿನ ಸರ್ಕಾರ ₹2.50 ಲಕ್ಷ ನಿಗದಿ ಪಡಿಸಿದ್ದು, ಆ ಆದೇಶವನ್ನು ವಾಪಸ್ ಪಡೆಯಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.</p>.<p>ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಗಣಿಗಾರಿಕೆ ಮಿತಿಮೀರಿದ್ದು, ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು. ಸಂಘದ ರಾಜ್ಯ ಅಧ್ಯಕ್ಷ ವಾಸುದೇವ ಮೇಟಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.</p>.<p>ಪ್ರತಿಭಟನಾ ಸ್ಥಳಕ್ಕೆ ಬಂದ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಮನವಿ ಸ್ವೀಕರಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>