<p><strong>ಬೆಂಗಳೂರು</strong>: ವಾಕ್ ಮತ್ತು ಶ್ರವಣದೋಷವುಳ್ಳವರ ಕುರಿತು ಕೀಳಾಗಿ ಮಾತನಾಡಿದ್ದ ಆರೋಪದಡಿ ರೇಡಿಯೊ ಜಾಕಿ ಸೇರಿದಂತೆ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.</p>.<p>ರೋಹನ್ ಕಾರ್ಯಪ್ಪ ಮತ್ತು ಶರವಣ ಭಟ್ಟಾಚಾರ್ಯ ಬಂಧಿತರು.</p>.<p>ರೋಹನ್ ಕಾರ್ಯಪ್ಪ ಅವರು ಎಫ್ಎಂ ರೇಡಿಯೊದಲ್ಲಿ ಜಾಕಿಯಾಗಿ ಕೆಲಸ ಮಾಡುತ್ತಿದ್ದರೆ, ಶರವಣ ಅವರು ಮನೆಯಲ್ಲೇ ಇದ್ದರು. ಯುವ ರಾಜಕಾರಣಿಗಳನ್ನು ಅಣಕಿಸುವ ಭರದಲ್ಲಿ ವಾಕ್ ಮತ್ತು ಶ್ರವಣದೋಷವುಳ್ಳವರ ಕುರಿತು ಅವಹೇಳನಕಾರಿಯಾಗಿ ರೀಲ್ಸ್ ಮಾಡಿದ್ದರು ಎನ್ನಲಾಗಿದೆ.</p>.<p>ರೋಹನ್ ಅವರು ಹಿಂದಿ ಭಾಷೆಯಲ್ಲಿ ರಾಜಕೀಯದ ಕುರಿತು ಮಾತನಾಡಿದ್ದರೆ, ಶರವಣ ಅದನ್ನು ಸನ್ನೆಯಲ್ಲಿ ಮಾಡಿ ಅವಹೇಳನ ಆಗುವಂತೆ ತೋರಿಸಿದ್ದರು ಎಂಬ ಆರೋಪವಿದೆ. ಆ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದರು. ಈ ವಿಡಿಯೊಗೆ ಆಕ್ಷೇಪ ವ್ಯಕ್ತವಾದ ಮೇಲೆ ಡಿಲೀಟ್ ಮಾಡಿ ಕ್ಷಮೆ ಕೋರಿದ್ದರು ಎಂದು ಮೂಲಗಳು ತಿಳಿಸಿವೆ.</p>.<p>ಆರೋಪಿಗಳನ್ನು ಬಂಧಿಸುವಂತೆ ವ್ಯಕ್ತಿಯೊಬ್ಬರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ದೂರು ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ವಾಕ್ ಮತ್ತು ಶ್ರವಣದೋಷವುಳ್ಳವರ ಕುರಿತು ಕೀಳಾಗಿ ಮಾತನಾಡಿದ್ದ ಆರೋಪದಡಿ ರೇಡಿಯೊ ಜಾಕಿ ಸೇರಿದಂತೆ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.</p>.<p>ರೋಹನ್ ಕಾರ್ಯಪ್ಪ ಮತ್ತು ಶರವಣ ಭಟ್ಟಾಚಾರ್ಯ ಬಂಧಿತರು.</p>.<p>ರೋಹನ್ ಕಾರ್ಯಪ್ಪ ಅವರು ಎಫ್ಎಂ ರೇಡಿಯೊದಲ್ಲಿ ಜಾಕಿಯಾಗಿ ಕೆಲಸ ಮಾಡುತ್ತಿದ್ದರೆ, ಶರವಣ ಅವರು ಮನೆಯಲ್ಲೇ ಇದ್ದರು. ಯುವ ರಾಜಕಾರಣಿಗಳನ್ನು ಅಣಕಿಸುವ ಭರದಲ್ಲಿ ವಾಕ್ ಮತ್ತು ಶ್ರವಣದೋಷವುಳ್ಳವರ ಕುರಿತು ಅವಹೇಳನಕಾರಿಯಾಗಿ ರೀಲ್ಸ್ ಮಾಡಿದ್ದರು ಎನ್ನಲಾಗಿದೆ.</p>.<p>ರೋಹನ್ ಅವರು ಹಿಂದಿ ಭಾಷೆಯಲ್ಲಿ ರಾಜಕೀಯದ ಕುರಿತು ಮಾತನಾಡಿದ್ದರೆ, ಶರವಣ ಅದನ್ನು ಸನ್ನೆಯಲ್ಲಿ ಮಾಡಿ ಅವಹೇಳನ ಆಗುವಂತೆ ತೋರಿಸಿದ್ದರು ಎಂಬ ಆರೋಪವಿದೆ. ಆ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದರು. ಈ ವಿಡಿಯೊಗೆ ಆಕ್ಷೇಪ ವ್ಯಕ್ತವಾದ ಮೇಲೆ ಡಿಲೀಟ್ ಮಾಡಿ ಕ್ಷಮೆ ಕೋರಿದ್ದರು ಎಂದು ಮೂಲಗಳು ತಿಳಿಸಿವೆ.</p>.<p>ಆರೋಪಿಗಳನ್ನು ಬಂಧಿಸುವಂತೆ ವ್ಯಕ್ತಿಯೊಬ್ಬರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ದೂರು ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>