<p><strong>ಬೆಂಗಳೂರು</strong>: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯರ ಚಿನ್ನದ ಸರಗಳನ್ನು ಕಿತ್ತೊಯ್ಯುತ್ತಿದ್ದ ಇಬ್ಬರು ಆರೋಪಿಗಳನ್ನು ಕಂಟೋನ್ಮೆಂಟ್ ರೈಲ್ವೆ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.</p>.<p>‘ಬಂಗಾರಪೇಟೆ ದೇಶಿಹಳ್ಳಿಯ ಎಸ್.ಕೆ. ಕಮಲನಾಥನ್ (42) ಹಾಗೂ ಕೆ. ಬಾಲಾಜಿ (24) ಬಂಧಿತರು. ಬಂಗಾರಪೇಟೆ ರೈಲು ನಿಲ್ದಾಣದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸುತ್ತಾಡುತ್ತಿದ್ದ ಇವರಿಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಕಳ್ಳತನ ಸಂಗತಿ ಪತ್ತೆಯಾಯಿತು’ ಎಂದು ರೈಲ್ವೆ ಪೊಲೀಸರು ಹೇಳಿದರು.</p>.<p>‘ಆರೋಪಿ ಕಮಲನಾಥ್, ಕೇಟರಿಂಗ್ ಕೆಲಸ ಮಾಡುತ್ತಿದ್ದ. ಜೀವನ ನಿರ್ವಹಣೆಗೆ ಸಂಬಳ ಸಾಲುತ್ತಿರಲಿಲ್ಲ. ಹಲವರ ಬಳಿ ಸಾಲ ಮಾಡಿದ್ದ. ನಿಗದಿತ ಅವಧಿಯೊಳಗೆ ಸಾಲ ತೀರಿಸಲು ಆಗಿರಲಿಲ್ಲ. ಸಾಲಗಾರರು ತಮ್ಮ ಹಣ ವಾಪಸು ನೀಡುವಂತೆ ಕಿರುಕುಳ ನೀಡಲಾರಂಭಿಸಿದ್ದರು’ ಎಂದರು.</p>.<p>‘ಸಾಲ ತೀರಿಸಲು ಅಗತ್ಯವಿರುವ ಹಣ ಹೊಂದಿಸಲೆಂದು ಕಮಲನಾಥ್ ಕಳ್ಳತನಕ್ಕೆ ಸಂಚು ರೂಪಿಸಿದ್ದ. ಈ ಬಗ್ಗೆ ಕೆ. ಬಾಲಾಜಿ ಸಹಾಯ ಕೋರಿದ್ದ. ಬಾಲಾಜಿಗೂ ಹಣದ ಅಗತ್ಯವಿತ್ತು. ಇಬ್ಬರೂ ಸೇರಿ ಕಳ್ಳತನಕ್ಕೆ ಸಿದ್ಧವಾಗಿದ್ದರು’ ಎಂದು ಪೊಲೀಸರು ತಿಳಿಸಿದರು.</p>.<p>ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪರಾರಿ: ‘ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಆರೋಪಿಗಳು, ಚಿನ್ನದ ಸರ ಧರಿಸಿರುತ್ತಿದ್ದ ಮಹಿಳೆಯರನ್ನು ಗುರುತಿಸುತ್ತಿದ್ದರು. ನಿಲ್ದಾಣದಲ್ಲಿ ರೈಲು ನಿಧಾನವಾಗುತ್ತಿದ್ದಂತೆ, ಮಹಿಳೆಯ ಸರವನ್ನು ಕಿತ್ತುಕೊಂಡು ರೈಲಿನಿಂದ ಜಿಗಿದು ಆರೋಪಿಗಳು ಪರಾರಿಯಾಗುತ್ತಿದ್ದರು’ ಎಂದು ಪೊಲೀಸರು ಹೇಳಿದರು.</p>.<p>‘ಕದ್ದ ಚಿನ್ನದ ಸರವನ್ನು ಮಾರಾಟ ಮಾಡಿ, ಬಂದ ಹಣವನ್ನು ಆರೋಪಿಗಳು ಹಂಚಿಕೊಳ್ಳುತ್ತಿದ್ದರು. ಜ. 18ರಂದು ಕುಪ್ಪಂ ನಿವಾಸಿಯಾದ ಮಹಿಳೆಯೊಬ್ಬರ ಚಿನ್ನದ ಮಾಂಗಲ್ಯ ಸರವನ್ನು ಆರೋಪಿಗಳು ಕಿತ್ತೊಯ್ದಿದ್ದರು. ಈ ಬಗ್ಗೆ ಪ್ರಕರಣವೂ ದಾಖಲಾಗಿತ್ತು. ಆರೋಪಿಗಳಿಂದ ₹ 4.34 ಲಕ್ಷ ಮೌಲ್ಯದ 79 ಗ್ರಾಂ ತೂಕದ ಚಿನ್ನದ ಸರಗಳನ್ನು ಜಪ್ತಿ ಮಾಡಲಾಗಿದೆ. ಆಂಧ್ರಪ್ರದೇಶದಲ್ಲೂ ಆರೋಪಿಗಳು ಕೃತ್ಯ ಎಸಗಿರುವ ಮಾಹಿತಿ ಇದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯರ ಚಿನ್ನದ ಸರಗಳನ್ನು ಕಿತ್ತೊಯ್ಯುತ್ತಿದ್ದ ಇಬ್ಬರು ಆರೋಪಿಗಳನ್ನು ಕಂಟೋನ್ಮೆಂಟ್ ರೈಲ್ವೆ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.</p>.<p>‘ಬಂಗಾರಪೇಟೆ ದೇಶಿಹಳ್ಳಿಯ ಎಸ್.ಕೆ. ಕಮಲನಾಥನ್ (42) ಹಾಗೂ ಕೆ. ಬಾಲಾಜಿ (24) ಬಂಧಿತರು. ಬಂಗಾರಪೇಟೆ ರೈಲು ನಿಲ್ದಾಣದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸುತ್ತಾಡುತ್ತಿದ್ದ ಇವರಿಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಕಳ್ಳತನ ಸಂಗತಿ ಪತ್ತೆಯಾಯಿತು’ ಎಂದು ರೈಲ್ವೆ ಪೊಲೀಸರು ಹೇಳಿದರು.</p>.<p>‘ಆರೋಪಿ ಕಮಲನಾಥ್, ಕೇಟರಿಂಗ್ ಕೆಲಸ ಮಾಡುತ್ತಿದ್ದ. ಜೀವನ ನಿರ್ವಹಣೆಗೆ ಸಂಬಳ ಸಾಲುತ್ತಿರಲಿಲ್ಲ. ಹಲವರ ಬಳಿ ಸಾಲ ಮಾಡಿದ್ದ. ನಿಗದಿತ ಅವಧಿಯೊಳಗೆ ಸಾಲ ತೀರಿಸಲು ಆಗಿರಲಿಲ್ಲ. ಸಾಲಗಾರರು ತಮ್ಮ ಹಣ ವಾಪಸು ನೀಡುವಂತೆ ಕಿರುಕುಳ ನೀಡಲಾರಂಭಿಸಿದ್ದರು’ ಎಂದರು.</p>.<p>‘ಸಾಲ ತೀರಿಸಲು ಅಗತ್ಯವಿರುವ ಹಣ ಹೊಂದಿಸಲೆಂದು ಕಮಲನಾಥ್ ಕಳ್ಳತನಕ್ಕೆ ಸಂಚು ರೂಪಿಸಿದ್ದ. ಈ ಬಗ್ಗೆ ಕೆ. ಬಾಲಾಜಿ ಸಹಾಯ ಕೋರಿದ್ದ. ಬಾಲಾಜಿಗೂ ಹಣದ ಅಗತ್ಯವಿತ್ತು. ಇಬ್ಬರೂ ಸೇರಿ ಕಳ್ಳತನಕ್ಕೆ ಸಿದ್ಧವಾಗಿದ್ದರು’ ಎಂದು ಪೊಲೀಸರು ತಿಳಿಸಿದರು.</p>.<p>ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪರಾರಿ: ‘ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಆರೋಪಿಗಳು, ಚಿನ್ನದ ಸರ ಧರಿಸಿರುತ್ತಿದ್ದ ಮಹಿಳೆಯರನ್ನು ಗುರುತಿಸುತ್ತಿದ್ದರು. ನಿಲ್ದಾಣದಲ್ಲಿ ರೈಲು ನಿಧಾನವಾಗುತ್ತಿದ್ದಂತೆ, ಮಹಿಳೆಯ ಸರವನ್ನು ಕಿತ್ತುಕೊಂಡು ರೈಲಿನಿಂದ ಜಿಗಿದು ಆರೋಪಿಗಳು ಪರಾರಿಯಾಗುತ್ತಿದ್ದರು’ ಎಂದು ಪೊಲೀಸರು ಹೇಳಿದರು.</p>.<p>‘ಕದ್ದ ಚಿನ್ನದ ಸರವನ್ನು ಮಾರಾಟ ಮಾಡಿ, ಬಂದ ಹಣವನ್ನು ಆರೋಪಿಗಳು ಹಂಚಿಕೊಳ್ಳುತ್ತಿದ್ದರು. ಜ. 18ರಂದು ಕುಪ್ಪಂ ನಿವಾಸಿಯಾದ ಮಹಿಳೆಯೊಬ್ಬರ ಚಿನ್ನದ ಮಾಂಗಲ್ಯ ಸರವನ್ನು ಆರೋಪಿಗಳು ಕಿತ್ತೊಯ್ದಿದ್ದರು. ಈ ಬಗ್ಗೆ ಪ್ರಕರಣವೂ ದಾಖಲಾಗಿತ್ತು. ಆರೋಪಿಗಳಿಂದ ₹ 4.34 ಲಕ್ಷ ಮೌಲ್ಯದ 79 ಗ್ರಾಂ ತೂಕದ ಚಿನ್ನದ ಸರಗಳನ್ನು ಜಪ್ತಿ ಮಾಡಲಾಗಿದೆ. ಆಂಧ್ರಪ್ರದೇಶದಲ್ಲೂ ಆರೋಪಿಗಳು ಕೃತ್ಯ ಎಸಗಿರುವ ಮಾಹಿತಿ ಇದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>