<p>ಯಲಹಂಕ: ಭಾನುವಾರ ಸುರಿದ ಆಲಿಕಲ್ಲು ಮಳೆ ಹಾಗೂ ಬಿರುಗಾಳಿಗೆ ರಾಜಾನುಕುಂಟೆಯ ಅದ್ದೆ ವಿಶ್ವನಾಥಪುರ ಗ್ರಾಮದಲ್ಲಿ ಕೊಯ್ಲಿಗೆ ಬಂದಿದ್ದ ಮಾವಿನ ಕಾಯಿಗಳು ನೆಲಕಚ್ಚಿವೆ.</p>.<p>ಹೆಸರಘಟ್ಟ ಹೋಬಳಿಯ ಅದ್ದೆ ವಿಶ್ವನಾಥಪುರ ಗ್ರಾಮದ ರೈತರಾದ ಸಂಪಂಗಿರಾಮಯ್ಯ ಮತ್ತು ರಾಮಯ್ಯ ಅವರ 9 ಎಕರೆ ತೋಟದಲ್ಲಿ ಬೆಳೆದಿದ್ದ ಮಾವಿನ ಬೆಳೆಗೆ ಹಾನಿಯಾಗಿ ಕಾಯಿಗಳು ಉದುರಿದ್ದು, ಅಪಾರ ನಷ್ಟವಾಗಿದೆ. ಅರಕೆರೆ ಗ್ರಾಮದ ಮಂಜುನಾಥ್ ಎಂಬುವರು ಮೂರು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಬಾಳೆ ಬೆಳೆಗೂ ಸಹ ಹಾನಿಯಾಗಿದೆ.</p>.<p>ಸೊಣ್ಣೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚನ್ನಸಂದ್ರ ಗ್ರಾಮದಲ್ಲಿ ಗೋಪಾಲ್ ಎಂಬುವರಿಗೆ ಸೇರಿದ ಪಾಲಿಹೌಸ್ ಬಿರುಗಾಳಿಗೆ ಹಾರಿಹೋಗಿದೆ. ಹನಿಯೂರಿನ ಕೆಲ ಮನೆಗಳ ಶೀಟ್ಗಳು ಹಾರಿಹೋಗಿವೆ.</p>.<p>ಸೋಮವಾರ ತಾಲ್ಲೂಕು ಸಹಾಯಕ ತೋಟಗಾರಿಕಾ ಅಧಿಕಾರಿ ಶಿವಣ್ಣ, ರೈತರ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಮಳೆಯಿಂದ ಹಾನಿಯಾಗಿರುವ ಬಗ್ಗೆ ಸರ್ಕಾರಕ್ಕೆ ವರದಿ ನೀಡಿ ಪರಿಹಾರ ನೀಡುವುದಾಗಿ ಭರವಸೆ ನೀಡಿದರು.</p>.<p>‘ಕಳೆದ ಮೂರ್ನಾಲ್ಕು ವರ್ಷಗಳಿಂದ ಫಸಲ್ ಭಿಮಾ ಯೋಜನೆಯಡಿ, ಬೆಳೆವಿಮೆ ಪಾವತಿ ಮಾಡುತ್ತಿದೆ. ಆದರೆ, 2-3 ವರ್ಷಗಳಿಂದ ಬೆಳೆ ಹಾನಿಯಾದರೂ ಪರಿಹಾರ ಬಂದಿರಲಿಲ್ಲ. ಆದ್ದರಿಂದ, ಈ ಬಾರಿ ವಿಮೆ ಹಣ ಪಾವತಿಸಿರಲಿಲ್ಲ’ ಎಂದು ರೈತ ಸಂಪಂಗಿರಾಮಯ್ಯ ಬೇಸರ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಯಲಹಂಕ: ಭಾನುವಾರ ಸುರಿದ ಆಲಿಕಲ್ಲು ಮಳೆ ಹಾಗೂ ಬಿರುಗಾಳಿಗೆ ರಾಜಾನುಕುಂಟೆಯ ಅದ್ದೆ ವಿಶ್ವನಾಥಪುರ ಗ್ರಾಮದಲ್ಲಿ ಕೊಯ್ಲಿಗೆ ಬಂದಿದ್ದ ಮಾವಿನ ಕಾಯಿಗಳು ನೆಲಕಚ್ಚಿವೆ.</p>.<p>ಹೆಸರಘಟ್ಟ ಹೋಬಳಿಯ ಅದ್ದೆ ವಿಶ್ವನಾಥಪುರ ಗ್ರಾಮದ ರೈತರಾದ ಸಂಪಂಗಿರಾಮಯ್ಯ ಮತ್ತು ರಾಮಯ್ಯ ಅವರ 9 ಎಕರೆ ತೋಟದಲ್ಲಿ ಬೆಳೆದಿದ್ದ ಮಾವಿನ ಬೆಳೆಗೆ ಹಾನಿಯಾಗಿ ಕಾಯಿಗಳು ಉದುರಿದ್ದು, ಅಪಾರ ನಷ್ಟವಾಗಿದೆ. ಅರಕೆರೆ ಗ್ರಾಮದ ಮಂಜುನಾಥ್ ಎಂಬುವರು ಮೂರು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಬಾಳೆ ಬೆಳೆಗೂ ಸಹ ಹಾನಿಯಾಗಿದೆ.</p>.<p>ಸೊಣ್ಣೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚನ್ನಸಂದ್ರ ಗ್ರಾಮದಲ್ಲಿ ಗೋಪಾಲ್ ಎಂಬುವರಿಗೆ ಸೇರಿದ ಪಾಲಿಹೌಸ್ ಬಿರುಗಾಳಿಗೆ ಹಾರಿಹೋಗಿದೆ. ಹನಿಯೂರಿನ ಕೆಲ ಮನೆಗಳ ಶೀಟ್ಗಳು ಹಾರಿಹೋಗಿವೆ.</p>.<p>ಸೋಮವಾರ ತಾಲ್ಲೂಕು ಸಹಾಯಕ ತೋಟಗಾರಿಕಾ ಅಧಿಕಾರಿ ಶಿವಣ್ಣ, ರೈತರ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಮಳೆಯಿಂದ ಹಾನಿಯಾಗಿರುವ ಬಗ್ಗೆ ಸರ್ಕಾರಕ್ಕೆ ವರದಿ ನೀಡಿ ಪರಿಹಾರ ನೀಡುವುದಾಗಿ ಭರವಸೆ ನೀಡಿದರು.</p>.<p>‘ಕಳೆದ ಮೂರ್ನಾಲ್ಕು ವರ್ಷಗಳಿಂದ ಫಸಲ್ ಭಿಮಾ ಯೋಜನೆಯಡಿ, ಬೆಳೆವಿಮೆ ಪಾವತಿ ಮಾಡುತ್ತಿದೆ. ಆದರೆ, 2-3 ವರ್ಷಗಳಿಂದ ಬೆಳೆ ಹಾನಿಯಾದರೂ ಪರಿಹಾರ ಬಂದಿರಲಿಲ್ಲ. ಆದ್ದರಿಂದ, ಈ ಬಾರಿ ವಿಮೆ ಹಣ ಪಾವತಿಸಿರಲಿಲ್ಲ’ ಎಂದು ರೈತ ಸಂಪಂಗಿರಾಮಯ್ಯ ಬೇಸರ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>