<p>ಬೆಂಗಳೂರು: ಬಿಬಿಎಂಪಿ ನಿರ್ಮಿಸಿರುವ ಹಾಗೂ ನಿರ್ಮಾಣ ಮಾಡಲಿರುವ ಕಟ್ಟಡಗಳಲ್ಲಿ ಮಳೆ ನೀರು ಸಂಗ್ರಹ ಪದ್ಧತಿಯನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು ಎಂದು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಆದೇಶ ಹೊರಡಿಸಿದ್ದಾರೆ.</p><p>ಬಿಬಿಎಂಪಿಯಿಂದ ಆಸ್ಪತ್ರೆ, ಶಾಲಾ ಕಟ್ಟಡಗಳು ಸೇರಿದಂತೆ ಹಲವಾರು ಹೊಸ ಕಟ್ಟಡಗಳ ನಿರ್ಮಾಣದ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಹೊಸ ಕಟ್ಟಡದ ಜೊತೆಗೆ ಹಾಲಿ ಕಟ್ಟಡಗಳ ನವೀಕರಣ ಹಾಗೂ ದುರಸ್ತಿ ಕಾಮಗಾರಿಗಳನ್ನು ಸಹ ನಿರ್ವಹಿಸಲಾಗುತ್ತಿದೆ. ಈ ಕಟ್ಟಡಗಳೂ ಸೇರಿದಂತೆ ಆಟದ ಮೈದಾನಗಳು/ಉದ್ಯಾನಗಳ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವಾಗ ಮಳೆ ನೀರು ಸಂಗ್ರಹ ವ್ಯವಸ್ಥೆ ಕಲ್ಪಿಸಬೇಕು ಎಂದಿದ್ದಾರೆ.</p><p>ಕಟ್ಟಡಗಳ ಚಾವಣಿ ಸೇರಿದಂತೆ ಆವರಣಗಳಿಂದ ಮಳೆ ನೀರನ್ನು ಸಂಗ್ರ<br>ಹಿಸಿ ಶೌಚಾಲಯ ಹಾಗೂ ಇತರೆ ಉದ್ದೇಶಗಳಿಗೆ ಮರು ಬಳಕೆ ಮಾಡಬೇಕು. ಮಳೆ ನೀರು ಸಂಗ್ರಹಣೆ ಸಾಧ್ಯವಿಲ್ಲದ ಸಂದರ್ಭದಲ್ಲಿ ಕಟ್ಟಡಗಳ ಆವರಣದಲ್ಲಿ ಮಳೆ ನೀರು ಇಂಗಿಸುವ ವ್ಯವಸ್ಥೆಯನ್ನು<br>ಅಳವಡಿಸಿಕೊಂಡು ಮಳೆ ನೀರು ಪೋಲಾಗದಂತೆ ತಡೆಯಲು ಅಗತ್ಯ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಎಲ್ಲ ಅಧಿಕಾರಿಗಳಿಗೂ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಬಿಬಿಎಂಪಿ ನಿರ್ಮಿಸಿರುವ ಹಾಗೂ ನಿರ್ಮಾಣ ಮಾಡಲಿರುವ ಕಟ್ಟಡಗಳಲ್ಲಿ ಮಳೆ ನೀರು ಸಂಗ್ರಹ ಪದ್ಧತಿಯನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು ಎಂದು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಆದೇಶ ಹೊರಡಿಸಿದ್ದಾರೆ.</p><p>ಬಿಬಿಎಂಪಿಯಿಂದ ಆಸ್ಪತ್ರೆ, ಶಾಲಾ ಕಟ್ಟಡಗಳು ಸೇರಿದಂತೆ ಹಲವಾರು ಹೊಸ ಕಟ್ಟಡಗಳ ನಿರ್ಮಾಣದ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಹೊಸ ಕಟ್ಟಡದ ಜೊತೆಗೆ ಹಾಲಿ ಕಟ್ಟಡಗಳ ನವೀಕರಣ ಹಾಗೂ ದುರಸ್ತಿ ಕಾಮಗಾರಿಗಳನ್ನು ಸಹ ನಿರ್ವಹಿಸಲಾಗುತ್ತಿದೆ. ಈ ಕಟ್ಟಡಗಳೂ ಸೇರಿದಂತೆ ಆಟದ ಮೈದಾನಗಳು/ಉದ್ಯಾನಗಳ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವಾಗ ಮಳೆ ನೀರು ಸಂಗ್ರಹ ವ್ಯವಸ್ಥೆ ಕಲ್ಪಿಸಬೇಕು ಎಂದಿದ್ದಾರೆ.</p><p>ಕಟ್ಟಡಗಳ ಚಾವಣಿ ಸೇರಿದಂತೆ ಆವರಣಗಳಿಂದ ಮಳೆ ನೀರನ್ನು ಸಂಗ್ರ<br>ಹಿಸಿ ಶೌಚಾಲಯ ಹಾಗೂ ಇತರೆ ಉದ್ದೇಶಗಳಿಗೆ ಮರು ಬಳಕೆ ಮಾಡಬೇಕು. ಮಳೆ ನೀರು ಸಂಗ್ರಹಣೆ ಸಾಧ್ಯವಿಲ್ಲದ ಸಂದರ್ಭದಲ್ಲಿ ಕಟ್ಟಡಗಳ ಆವರಣದಲ್ಲಿ ಮಳೆ ನೀರು ಇಂಗಿಸುವ ವ್ಯವಸ್ಥೆಯನ್ನು<br>ಅಳವಡಿಸಿಕೊಂಡು ಮಳೆ ನೀರು ಪೋಲಾಗದಂತೆ ತಡೆಯಲು ಅಗತ್ಯ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಎಲ್ಲ ಅಧಿಕಾರಿಗಳಿಗೂ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>