‘ಕೃತ್ಯ ನಡೆದಿದೆ ಎನ್ನಲಾದ ಸ್ಥಳದಲ್ಲಿ ನೈಲಾನ್ ಹಗ್ಗದ ತುಂಡು , ಮರದ ಕೊಂಬೆ, ಸ್ಟೋನಿ ಬ್ರೂಕ್ ಪಬ್ ಹೆಸರಿನ ನೀರಿನ ಬಾಟಲಿಯನ್ನು ವಶಕ್ಕೆ ಪಡೆದಿರುವುದಾಗಿ ಪೊಲೀಸರು ದೋಷಾರೋಪಪಟ್ಟಿಯಲ್ಲಿ ಉಲ್ಲೇಖಿಸಿದ್ದಾರೆ. ಕೃತ್ಯದ ಸ್ಥಳದಲ್ಲಿ ಸಿಕ್ಕಿದ ಎಲ್ಲ ವಸ್ತುಗಳನ್ನು ಸಾಕ್ಷಿಯಾಗಿ ಜೂನ್ 12ರಂದೇ ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಉಲ್ಲೇಖಿಸಲಾಗಿದೆ. ಆದರೆ, ವಾಸ್ತವದಲ್ಲಿ ಜೂನ್ 9ರಂದೇ ಈ ಎಲ್ಲ ವಸ್ತುಗಳು ಪೊಲೀಸರ ಬಳಿಯಿದ್ದವು. ಟಾರ್ಚ್ ಬೆಳಕಿನಲ್ಲಿ ಪಂಚನಾಮೆ ನಡೆಸಲಾಗಿದೆ. ಹೀಗಾಗಿ, ತನಿಖಾಧಿಕಾರಿಗಳು ಉಲ್ಲೇಖಿಸಿರುವ ಅಂಶಗಳನ್ನು ನಂಬುವಂತಿಲ್ಲ’ ಎಂದು ನಾಗೇಶ್ ಹೇಳಿದರು.