<p><strong>ಬೆಂಗಳೂರು</strong>: ರಾಜ್ಯಮಟ್ಟದ ಗಣರಾಜ್ಯೋತ್ಸವ ದಿನಾಚರಣೆಗಾಗಿ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಅಗತ್ಯ ಸಿದ್ದತೆ ಮಾಡಿಕೊಳ್ಳಲು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ಸೂಚಿಸಿದರು.</p>.<p>2024ನೇ ಸಾಲಿನ ಗಣರಾಜ್ಯೋತ್ಸವ ದಿನಾಚರಣೆ ಸಂಬಂಧ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಅತಿ ಗಣ್ಯರು, ಗಣ್ಯರು, ಅಧಿಕಾರಿಗಳು ಹಾಗೂ ಸಾರ್ವಜನಿಕರು ನಿಗದಿಪಡಿಸಿದ ದ್ವಾರದಲ್ಲಿ ಬರಬೇಕು. ವಾಹನಗಳ ಪಾರ್ಕಿಂಗ್ ಸ್ಥಳ ವಿಚಾರವಾಗಿ ಯಾವುದೇ ಲೋಪಗಳಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.</p>.<p>ಕವಾಯತು ಪ್ರದರ್ಶನಕ್ಕೆ ಅಗತ್ಯ ಏರ್ಪಾಡು ಮಾಡಿಕೊಂಡು ಪೋಲೀಸ್ ಇಲಾಖೆಯ ಶಿಷ್ಟಾಚಾರದಂತೆ ಕ್ರಮಗಳನ್ನು ಕೈಗೊಳ್ಳಬೇಕು. ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಸೂಚಿಸಿದರು.</p>.<p>ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ.ದಯಾನಂದ್, ವಲಯ ಆಯುಕ್ತೆ ಸ್ನೇಹಲ್, ಉಪ ಆಯುಕ್ತ ಮಂಜುನಾಥಸ್ವಾಮಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಜ್ಯಮಟ್ಟದ ಗಣರಾಜ್ಯೋತ್ಸವ ದಿನಾಚರಣೆಗಾಗಿ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಅಗತ್ಯ ಸಿದ್ದತೆ ಮಾಡಿಕೊಳ್ಳಲು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ಸೂಚಿಸಿದರು.</p>.<p>2024ನೇ ಸಾಲಿನ ಗಣರಾಜ್ಯೋತ್ಸವ ದಿನಾಚರಣೆ ಸಂಬಂಧ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಅತಿ ಗಣ್ಯರು, ಗಣ್ಯರು, ಅಧಿಕಾರಿಗಳು ಹಾಗೂ ಸಾರ್ವಜನಿಕರು ನಿಗದಿಪಡಿಸಿದ ದ್ವಾರದಲ್ಲಿ ಬರಬೇಕು. ವಾಹನಗಳ ಪಾರ್ಕಿಂಗ್ ಸ್ಥಳ ವಿಚಾರವಾಗಿ ಯಾವುದೇ ಲೋಪಗಳಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.</p>.<p>ಕವಾಯತು ಪ್ರದರ್ಶನಕ್ಕೆ ಅಗತ್ಯ ಏರ್ಪಾಡು ಮಾಡಿಕೊಂಡು ಪೋಲೀಸ್ ಇಲಾಖೆಯ ಶಿಷ್ಟಾಚಾರದಂತೆ ಕ್ರಮಗಳನ್ನು ಕೈಗೊಳ್ಳಬೇಕು. ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಸೂಚಿಸಿದರು.</p>.<p>ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ.ದಯಾನಂದ್, ವಲಯ ಆಯುಕ್ತೆ ಸ್ನೇಹಲ್, ಉಪ ಆಯುಕ್ತ ಮಂಜುನಾಥಸ್ವಾಮಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>