<p><strong>ಬೆಂಗಳೂರು:</strong> ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅನುಮೋದನೆಯಾಗದ ನಿವೇಶನಗಳು/ಖಾತೆಗಳ ನೋಂದಣಿ/ಖಾತಾ ವರ್ಗಾವಣೆಯನ್ನು ನಿಲ್ಲಿಸಿರುವುದರಿಂದ ಉಂಟಾಗಿರುವ ಸಮಸ್ಯೆ ನಿವಾರಿಸಲು ಕಾನೂನಿಗೆ ತಿದ್ದುಪಡಿ ತರಲು ತೀರ್ಮಾನಿಸಲಾಗಿದೆ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.</p>.<p>ವಿಧಾನಸಭೆಯಲ್ಲಿ ಮಂಗಳವಾರ ನಿಯಮ 69ರ ಅಡಿಯಲ್ಲಿ ಸದಸ್ಯರಾದ ಹರತಾಳು ಹಾಲಪ್ಪ, ಸಿದ್ದು ಸವದಿ, ಸುಭಾಷ್ ಗುತ್ತೇದಾರ್ ಹಾಗೂ ಕಳಕಪ್ಪ ಜಿ.ಬಂಡಿ ಅವರು ನಗರ ಪ್ರದೇಶದ</p>.<p>ನಿವೇಶನಗಳ ಖಾತಾ ದಾಖಲು/ವರ್ಗಾವಣೆ ಸ್ಥಗಿತದಿಂದ ಸಾರ್ವಜನಿಕರಿಗೆ ಆಗಿರುವ ತೊಂದರೆಗಳ ಬಗ್ಗೆ ಗಮನ ಸೆಳೆದರು.</p>.<p>ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್, ‘ಅನಧಿಕೃತ ಬಡಾವಣೆಗಳನ್ನು ಸಕ್ರಮಗೊಳಿಸುವ ಉದ್ದೇಶದಿಂದ ಕರ್ನಾಟಕ ನಗರ ಹಾಗೂ ಗ್ರಾಮಾಂತರ ಯೋಜನಾ ಕಾಯ್ದೆ 1961ಕ್ಕೆ ತಿದ್ದುಪಡಿ ಮಾಡಲಾಗಿದೆ. ಈ ನಿಯಮಗಳ ಅನ್ವಯ ಸ್ಥಳೀಯ ಯೋಜನಾ ಪ್ರದೇಶದಲ್ಲಿ ಬಂದಿರುವ ಅನಧಿಕೃತ ಬಡಾವಣೆಗಳನ್ನು ಆಯಾ ನಗರಾಭಿವೃದ್ಧಿ ಪ್ರಾಧಿಕಾರ ಮತ್ತು ಯೋಜನಾ ಪ್ರಾಧಿಕಾರ ಹಾಗೂ ಸ್ಥಳೀಯ ಸಂಸ್ಥೆಗಳು ಸಕ್ರಮಗೊಳಿಸಲು ಅವಕಾಶ ಕಲ್ಪಿಸಲಾಗಿದೆ. ಈ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಈ ಬಗ್ಗೆ ಮುಖ್ಯಮಂತ್ರಿ ನೇತೃತ್ವದ ಸಭೆಯಲ್ಲಿ ಚರ್ಚಿಸಲಾಗಿದ್ದು, ಅಡ್ವೊಕೇಟ್ ಜನರಲ್ ಜತೆಗೆ ಸಮಾಲೋಚನೆ ನಡೆಸಲಾಗಿದೆ’ ಎಂದರು.</p>.<p>ಹರತಾಳು ಹಾಲಪ್ಪ, ‘ಗೊಂದಲ ಸೃಷ್ಟಿಯಾಗಿದ್ದರಿಂದ ಆಸ್ತಿಗಳ ನೋಂದಣಿ ಆಗುತ್ತಿಲ್ಲ’ ಎಂದರು.</p>.<p>ಆರಗ ಜ್ಞಾನೇಂದ್ರ, ‘ಈ ಸಮಸ್ಯೆ ರಾಜ್ಯವ್ಯಾಪಿ ಇದೆ. ಇ–ಖಾತೆ ಆಗುತ್ತಿಲ್ಲ’ ಎಂದರು. ಉತ್ತರ ಕನ್ನಡ ಜಿಲ್ಲೆಯ ಆಸ್ತಿ ನೋಂದಣಿ ಬಗ್ಗೆ ದಿನಕರ ಶೆಟ್ಟಿ ಗಮನ ಸೆಳೆದರು.</p>.<p>ಮಾಗಡಿಯ ಮಂಜುನಾಥ್, ‘ರಾಮನಗರ ನಗರಸಭೆಯಲ್ಲಿ 1,909 ನಿಯಮಬಾಹಿರ ಖಾತೆಗಳ ನೋಂದಣಿ ಆಗಿದೆ. ಅಲ್ಲಿ ತಪ್ಪು ಎಸಗಿದವರ ವಿರುದ್ಧ ಕ್ರಮ ಕೈಗೊಳ್ಳಬೇಕಿತ್ತು. ಅದನ್ನು ಬಿಟ್ಟು ಎಲ್ಲರಿಗೂ ತೊಂದರೆ ಕೊಡುವುದು ಎಷ್ಟರ ಮಟ್ಟಿಗೆ ಸರಿ’ ಎಂದು ಪ್ರಶ್ನಿಸಿದರು.</p>.<p>ಬಿಜೆಪಿಯ ಜ್ಯೋತಿ ಗಣೇಶ್, ‘ತುಮಕೂರಿನಲ್ಲಿ 8 ಸಾವಿರ ಖಾತೆಗಳಿಗೆ ಎ ಖಾತೆ ನೀಡಲಾಗಿದೆ. ಆಯುಕ್ತರ ಹಂತದ ಅಧಿಕಾರಿಯೇ ಈ ಅಕ್ರಮ ನಡೆಸಿದ್ದಾರೆ. ಇದು ₹70 ಕೋಟಿಯ ಅವ್ಯವಹಾರ. ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅನುಮೋದನೆಯಾಗದ ನಿವೇಶನಗಳು/ಖಾತೆಗಳ ನೋಂದಣಿ/ಖಾತಾ ವರ್ಗಾವಣೆಯನ್ನು ನಿಲ್ಲಿಸಿರುವುದರಿಂದ ಉಂಟಾಗಿರುವ ಸಮಸ್ಯೆ ನಿವಾರಿಸಲು ಕಾನೂನಿಗೆ ತಿದ್ದುಪಡಿ ತರಲು ತೀರ್ಮಾನಿಸಲಾಗಿದೆ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.</p>.<p>ವಿಧಾನಸಭೆಯಲ್ಲಿ ಮಂಗಳವಾರ ನಿಯಮ 69ರ ಅಡಿಯಲ್ಲಿ ಸದಸ್ಯರಾದ ಹರತಾಳು ಹಾಲಪ್ಪ, ಸಿದ್ದು ಸವದಿ, ಸುಭಾಷ್ ಗುತ್ತೇದಾರ್ ಹಾಗೂ ಕಳಕಪ್ಪ ಜಿ.ಬಂಡಿ ಅವರು ನಗರ ಪ್ರದೇಶದ</p>.<p>ನಿವೇಶನಗಳ ಖಾತಾ ದಾಖಲು/ವರ್ಗಾವಣೆ ಸ್ಥಗಿತದಿಂದ ಸಾರ್ವಜನಿಕರಿಗೆ ಆಗಿರುವ ತೊಂದರೆಗಳ ಬಗ್ಗೆ ಗಮನ ಸೆಳೆದರು.</p>.<p>ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್, ‘ಅನಧಿಕೃತ ಬಡಾವಣೆಗಳನ್ನು ಸಕ್ರಮಗೊಳಿಸುವ ಉದ್ದೇಶದಿಂದ ಕರ್ನಾಟಕ ನಗರ ಹಾಗೂ ಗ್ರಾಮಾಂತರ ಯೋಜನಾ ಕಾಯ್ದೆ 1961ಕ್ಕೆ ತಿದ್ದುಪಡಿ ಮಾಡಲಾಗಿದೆ. ಈ ನಿಯಮಗಳ ಅನ್ವಯ ಸ್ಥಳೀಯ ಯೋಜನಾ ಪ್ರದೇಶದಲ್ಲಿ ಬಂದಿರುವ ಅನಧಿಕೃತ ಬಡಾವಣೆಗಳನ್ನು ಆಯಾ ನಗರಾಭಿವೃದ್ಧಿ ಪ್ರಾಧಿಕಾರ ಮತ್ತು ಯೋಜನಾ ಪ್ರಾಧಿಕಾರ ಹಾಗೂ ಸ್ಥಳೀಯ ಸಂಸ್ಥೆಗಳು ಸಕ್ರಮಗೊಳಿಸಲು ಅವಕಾಶ ಕಲ್ಪಿಸಲಾಗಿದೆ. ಈ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಈ ಬಗ್ಗೆ ಮುಖ್ಯಮಂತ್ರಿ ನೇತೃತ್ವದ ಸಭೆಯಲ್ಲಿ ಚರ್ಚಿಸಲಾಗಿದ್ದು, ಅಡ್ವೊಕೇಟ್ ಜನರಲ್ ಜತೆಗೆ ಸಮಾಲೋಚನೆ ನಡೆಸಲಾಗಿದೆ’ ಎಂದರು.</p>.<p>ಹರತಾಳು ಹಾಲಪ್ಪ, ‘ಗೊಂದಲ ಸೃಷ್ಟಿಯಾಗಿದ್ದರಿಂದ ಆಸ್ತಿಗಳ ನೋಂದಣಿ ಆಗುತ್ತಿಲ್ಲ’ ಎಂದರು.</p>.<p>ಆರಗ ಜ್ಞಾನೇಂದ್ರ, ‘ಈ ಸಮಸ್ಯೆ ರಾಜ್ಯವ್ಯಾಪಿ ಇದೆ. ಇ–ಖಾತೆ ಆಗುತ್ತಿಲ್ಲ’ ಎಂದರು. ಉತ್ತರ ಕನ್ನಡ ಜಿಲ್ಲೆಯ ಆಸ್ತಿ ನೋಂದಣಿ ಬಗ್ಗೆ ದಿನಕರ ಶೆಟ್ಟಿ ಗಮನ ಸೆಳೆದರು.</p>.<p>ಮಾಗಡಿಯ ಮಂಜುನಾಥ್, ‘ರಾಮನಗರ ನಗರಸಭೆಯಲ್ಲಿ 1,909 ನಿಯಮಬಾಹಿರ ಖಾತೆಗಳ ನೋಂದಣಿ ಆಗಿದೆ. ಅಲ್ಲಿ ತಪ್ಪು ಎಸಗಿದವರ ವಿರುದ್ಧ ಕ್ರಮ ಕೈಗೊಳ್ಳಬೇಕಿತ್ತು. ಅದನ್ನು ಬಿಟ್ಟು ಎಲ್ಲರಿಗೂ ತೊಂದರೆ ಕೊಡುವುದು ಎಷ್ಟರ ಮಟ್ಟಿಗೆ ಸರಿ’ ಎಂದು ಪ್ರಶ್ನಿಸಿದರು.</p>.<p>ಬಿಜೆಪಿಯ ಜ್ಯೋತಿ ಗಣೇಶ್, ‘ತುಮಕೂರಿನಲ್ಲಿ 8 ಸಾವಿರ ಖಾತೆಗಳಿಗೆ ಎ ಖಾತೆ ನೀಡಲಾಗಿದೆ. ಆಯುಕ್ತರ ಹಂತದ ಅಧಿಕಾರಿಯೇ ಈ ಅಕ್ರಮ ನಡೆಸಿದ್ದಾರೆ. ಇದು ₹70 ಕೋಟಿಯ ಅವ್ಯವಹಾರ. ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>