ಅವಮಾನ ಮಾಡಲು ಇಷ್ಟವಿಲ್ಲ: ‘ನಾನು ಬೇರೆ ರಾಜ್ಯಗಳಿಗೆಲ್ಲಾ ಭೇಟಿ ನೀಡಿದ್ದೇನೆ. ಅಲ್ಲಿನ ರಸ್ತೆಯ ವಿಡಿಯೊಗಳನ್ನು ಹಾಕಿದರೆ ಆ ರಾಜ್ಯಗಳಿಗೆ ಅವಮಾನವಾಗುತ್ತದೆ. ಅದಕ್ಕಿಂತ ಉತ್ತಮವಾಗಿ ನಮ್ಮವರು ಇಲ್ಲಿನ ರಸ್ತೆಗಳ ಪರಿವರ್ತಿಸಬೇಕು ಎಂದು ಕೆಲಸ ಮಾಡಿದ್ದಾರೆ. ಅದರಲ್ಲಿ ನಾವು ಯಶಸ್ವಿಯಾಗುತ್ತಿದ್ದೇವೆ’ ಎಂದರು.
ಸಂಚು ಕೇಳಿ ದಿಗ್ಬ್ರಮೆ: ‘ಶಾಸಕ ಮುನಿರತ್ನ ಪ್ರಕರಣಗಳ ತನಿಖೆಗೆ ಎಸ್ಐಟಿ ರಚಿಸುವ ಬಗ್ಗೆ ಮುಖ್ಯಮಂತ್ರಿ ಜೊತೆ ಚರ್ಚೆ ನಡೆಸಿದ್ದೀರಾ’ ಎಂದು ಕೇಳಿದಾಗ ‘ನನಗೆ ಮುಖ್ಯಮಂತ್ರಿ ಭೇಟಿ ಸಾಧ್ಯವಾಗಿಲ್ಲ. ಆದರೆ, ಆರ್. ಅಶೋಕ ಮೇಲೆ ಮಾಡಿದ್ದ ಸಂಚು ಕೇಳಿ ದಿಗ್ಬ್ರಮೆಯಾಗಿದ್ದೇನೆ. ಈ ರೀತಿಯ ಸಂಚನ್ನು ನಾನು ಕೇಳಿಲ್ಲ’ ಎಂದರು.
‘ಮುನಿರತ್ನ ವಿಚಾರವಾಗಿ ಅಶೋಕ ಅವರು ಮೊದಲು ಮಾತನಾಡಿದ್ದನ್ನು ಕೇಳಿದ್ದೆ. ಈಗ ಮಾತನಾಡಿದ್ದನ್ನು ನಾನು ನೋಡಿಲ್ಲ. ಅಶೋಕಣ್ಣ, ಸಿ.ಟಿ. ರವಿಯಣ್ಣ, ವಿಜಯೇಂದ್ರಣ್ಣ ಅವರುಗಳು ಮಾತನಾಡಬೇಕು. ಈ ವಿಚಾರದಲ್ಲಿ ಸತ್ಯ ಏನಿದೆ ಎಂದು ತಮ್ಮ ಅಭಿಪ್ರಾಯಗಳನ್ನು ಹೇಳಬೇಕು. ಮುಖ್ಯವಾಗಿ ಕುಮಾರಣ್ಣ, ಡಾ. ಮಂಜುನಾಥ್ ಅವರು ಮಾತನಾಡಬೇಕು. ಯಾರು, ಯಾರಿಗೆ ಏನಾಗಿದೆ ಎಂದು ನಾನು ತಿಳಿದುಕೊಳ್ಳಲು ಆಗಿಲ್ಲ’ ಎಂದರು.