<p><strong>ಬೆಂಗಳೂರು:</strong> ಪುಲಿಕೇಶಿನಗರ ಠಾಣಾ ವ್ಯಾಪ್ತಿಯಲ್ಲಿರುವ ಮುತ್ತೂಟ್ ಫೈನಾನ್ಸ್ ಕಚೇರಿಯಿಂದ ಡಿ. 22ರಂದು ರಾತ್ರಿ ₹ 16 ಕೋಟಿ ಮೌಲ್ಯದ 70 ಕೆ.ಜಿ ಚಿನ್ನಾಭರಣ ದೋಚಿದ ಪ್ರಕರಣವನ್ನು ಭೇದಿಸಿರುವ ಪೂರ್ವ ವಿಭಾಗದ ಪೊಲೀಸರು, ನಾಲ್ವರನ್ನು ಬಂಧಿಸಿದ್ದಾರೆ.</p>.<p>ನೇಪಾಳ ಮತ್ತು ಬಿಹಾರ ಸೆಕ್ಯೂರಿಟಿ ಗ್ಯಾಂಗ್ ಈ ಕೃತ್ಯ ಎಸಗಿರುವ ಬಗ್ಗೆ ಮಾಹಿತಿ ಸಂಗ್ರಹಿಸಿದ ವಿಶೇಷ ತನಿಖಾ ತಂಡ, ಆರೋಪಿಗಳ ಪತ್ತೆಗೆ ನೇಪಾಳಕ್ಕೆ ತೆರಳಿತ್ತು. ಈ ತಂಡ ನಾಲ್ವರನ್ನು ವಶಕ್ಕೆ ಪಡೆದು, 8.6 ಕೆ.ಜಿ ಚಿನ್ನಾಭರಣ ಜಪ್ತಿ ಮಾಡಿದೆ.</p>.<p>ಬಿಹಾರದ ಕಳ್ಳರ ತಂಡದ ನಾಯಕನೊಬ್ಬ ಪುಲಕೇಶಿನಗರ ಠಾಣಾ ವ್ಯಾಪ್ತಿಯಲ್ಲಿರುವ ಮುತ್ತೂಟ್ ಫೈನಾನ್ಸ್ಗೆ ಕನ್ನ ಹಾಕಲು ಯೋಜನೆ ರೂಪಿಸಿದ್ದ. ಅದಕ್ಕೆ ನೇಪಾಳದ ಸೆಕ್ಯೂರಿಟಿ ಗಾರ್ಡ್ಗಳ ಸಹಾಯ ಪಡೆದಿದ್ದು, ಒಟ್ಟು 12 ಮಂದಿ ಈ ಕೃತ್ಯ ನಡೆಸಿದ್ದಾರೆ ಎನ್ನಲಾಗಿದೆ.</p>.<p>ಕಳವು ನಡೆಸಿದ ಬಳಿಕ ಎರಡು ತಂಡಗಳಾಗಿ ಪ್ರತ್ಯೇಕವಾದ ತಂಡ, ಕದ್ದ ಚಿನ್ನವನ್ನು ಹಂಚಿಕೊಂಡಿದೆ. ಈ ಪೈಕಿ, ಒಂದು ತಂಡ ನೇಪಾಳಕ್ಕೆ ತೆರಳಿದರೆ, ಮತ್ತೊಂದು ತಂಡ ದೆಹಲಿಗೆ ಹೋಗಿರುವ ಮಾಹಿತಿಯೂ ಪೊಲೀಸರಿಗೆ ಸಿಕ್ಕಿತ್ತು. ನೇಪಾಳದಲ್ಲಿರುವ ನಾಲ್ವರನ್ನು ವಶಕ್ಕೆ ಪಡೆಯಲಾಗಿದ್ದು, ತಂಡದ ನಾಯಕ ಮತ್ತು ಇತರ ಆರೋಪಿಗಳಿಗೆ ಶೋಧ ಕಾರ್ಯಾಚರಣೆ ಮುಂದುವರಿದಿದೆ.</p>.<p>ಲಿಂಗರಾಜಪುರ ಮೇಲ್ಸೇತುವೆಗೆ ಹೊಂದಿಕೊಂಡಿರುವಎಸ್ಸಾರ್ ಕಾಂಪ್ಲೆಕ್ಸ್ನ ಮೊದಲ ಮಹಡಿಯಲ್ಲಿ ಮುತ್ತೂಟ್ ಫೈನಾನ್ಸ್ ಕಚೇರಿ ಇದೆ. ಕಚೇರಿಯ ಶೌಚಾಲಯದ ಗೋಡೆ ಕೊರೆದು ಕೃತ್ಯ ಎಸಗಿ ಕಳ್ಳರು ಪರಾರಿಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪುಲಿಕೇಶಿನಗರ ಠಾಣಾ ವ್ಯಾಪ್ತಿಯಲ್ಲಿರುವ ಮುತ್ತೂಟ್ ಫೈನಾನ್ಸ್ ಕಚೇರಿಯಿಂದ ಡಿ. 22ರಂದು ರಾತ್ರಿ ₹ 16 ಕೋಟಿ ಮೌಲ್ಯದ 70 ಕೆ.ಜಿ ಚಿನ್ನಾಭರಣ ದೋಚಿದ ಪ್ರಕರಣವನ್ನು ಭೇದಿಸಿರುವ ಪೂರ್ವ ವಿಭಾಗದ ಪೊಲೀಸರು, ನಾಲ್ವರನ್ನು ಬಂಧಿಸಿದ್ದಾರೆ.</p>.<p>ನೇಪಾಳ ಮತ್ತು ಬಿಹಾರ ಸೆಕ್ಯೂರಿಟಿ ಗ್ಯಾಂಗ್ ಈ ಕೃತ್ಯ ಎಸಗಿರುವ ಬಗ್ಗೆ ಮಾಹಿತಿ ಸಂಗ್ರಹಿಸಿದ ವಿಶೇಷ ತನಿಖಾ ತಂಡ, ಆರೋಪಿಗಳ ಪತ್ತೆಗೆ ನೇಪಾಳಕ್ಕೆ ತೆರಳಿತ್ತು. ಈ ತಂಡ ನಾಲ್ವರನ್ನು ವಶಕ್ಕೆ ಪಡೆದು, 8.6 ಕೆ.ಜಿ ಚಿನ್ನಾಭರಣ ಜಪ್ತಿ ಮಾಡಿದೆ.</p>.<p>ಬಿಹಾರದ ಕಳ್ಳರ ತಂಡದ ನಾಯಕನೊಬ್ಬ ಪುಲಕೇಶಿನಗರ ಠಾಣಾ ವ್ಯಾಪ್ತಿಯಲ್ಲಿರುವ ಮುತ್ತೂಟ್ ಫೈನಾನ್ಸ್ಗೆ ಕನ್ನ ಹಾಕಲು ಯೋಜನೆ ರೂಪಿಸಿದ್ದ. ಅದಕ್ಕೆ ನೇಪಾಳದ ಸೆಕ್ಯೂರಿಟಿ ಗಾರ್ಡ್ಗಳ ಸಹಾಯ ಪಡೆದಿದ್ದು, ಒಟ್ಟು 12 ಮಂದಿ ಈ ಕೃತ್ಯ ನಡೆಸಿದ್ದಾರೆ ಎನ್ನಲಾಗಿದೆ.</p>.<p>ಕಳವು ನಡೆಸಿದ ಬಳಿಕ ಎರಡು ತಂಡಗಳಾಗಿ ಪ್ರತ್ಯೇಕವಾದ ತಂಡ, ಕದ್ದ ಚಿನ್ನವನ್ನು ಹಂಚಿಕೊಂಡಿದೆ. ಈ ಪೈಕಿ, ಒಂದು ತಂಡ ನೇಪಾಳಕ್ಕೆ ತೆರಳಿದರೆ, ಮತ್ತೊಂದು ತಂಡ ದೆಹಲಿಗೆ ಹೋಗಿರುವ ಮಾಹಿತಿಯೂ ಪೊಲೀಸರಿಗೆ ಸಿಕ್ಕಿತ್ತು. ನೇಪಾಳದಲ್ಲಿರುವ ನಾಲ್ವರನ್ನು ವಶಕ್ಕೆ ಪಡೆಯಲಾಗಿದ್ದು, ತಂಡದ ನಾಯಕ ಮತ್ತು ಇತರ ಆರೋಪಿಗಳಿಗೆ ಶೋಧ ಕಾರ್ಯಾಚರಣೆ ಮುಂದುವರಿದಿದೆ.</p>.<p>ಲಿಂಗರಾಜಪುರ ಮೇಲ್ಸೇತುವೆಗೆ ಹೊಂದಿಕೊಂಡಿರುವಎಸ್ಸಾರ್ ಕಾಂಪ್ಲೆಕ್ಸ್ನ ಮೊದಲ ಮಹಡಿಯಲ್ಲಿ ಮುತ್ತೂಟ್ ಫೈನಾನ್ಸ್ ಕಚೇರಿ ಇದೆ. ಕಚೇರಿಯ ಶೌಚಾಲಯದ ಗೋಡೆ ಕೊರೆದು ಕೃತ್ಯ ಎಸಗಿ ಕಳ್ಳರು ಪರಾರಿಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>