<p><strong>ಬೆಂಗಳೂರು</strong>: ನಗರದ ಮಳಿಗೆಗಳಿಗೆ ಸಿಗರೇಟ್ ಸರಬರಾಜು ಮಾಡುವ ವಿತರಕನನ್ನು ಹಿಂಬಾಲಿಸಿದ್ದ ದುಷ್ಕರ್ಮಿಗಳ ತಂಡ, ಪಿಸ್ತೂಲ್ ತೋರಿಸಿ ಕಣ್ಣಿಗೆ ಖಾರದ ಪುಡಿ ಎರಚಿ ₹15 ಲಕ್ಷ ಸುಲಿಗೆ ಮಾಡಿದೆ.</p>.<p>ನಾಗರಬಾವಿ ಬಳಿಯ ಪಾಪರೆಡ್ಡಿ ಪಾಳ್ಯದಲ್ಲಿ ನಡೆದಿರುವ ಸುಲಿಗೆ ಸಂಬಂಧ ಅನ್ನಪೂರ್ಣೇಶ್ವರಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ವಿತರಕ ಗೋಪಾಲ್, ಟಾಟಾ ಏಸ್ ವಾಹನದಲ್ಲಿ ಸಿಗರೇಟ್ ಬಾಕ್ಸ್ಗಳನ್ನು ಇಟ್ಟುಕೊಂಡು ಮಳಿಗೆಗಳಿಗೆ ಕೊಡಲು ಹೊರಟಿದ್ದರು. ಸಿಗರೇಟ್ ಕೊಟ್ಟ ನಂತರ ಹಣವನ್ನೂ ಸಂಗ್ರಹಿಸಿಟ್ಟುಕೊಂಡಿದ್ದರು. ಕೆಂಗೇರಿಯಿಂದ ಪಾಪರೆಡ್ಡಿ ಪಾಳ್ಯದತ್ತ ಬಂದಿದ್ದರು. ಅವರನ್ನು ಆರೋಪಿಗಳು ಹಿಂಬಾಲಿಸಿದ್ದರು’ ಎಂದು ಪೊಲೀಸರು ಹೇಳಿದರು.</p>.<p>‘ವಾಹನ ಅಡ್ಡಗಟ್ಟಿದ್ದ ಆರೋಪಿಗಳು, ಪಿಸ್ತೂಲ್ ತೋರಿಸಿ ಕೊಲೆ ಬೆದರಿಕೆಯೊಡ್ಡಿದ್ದರು. ನಂತರ, ಕಣ್ಣಿಗೆ ಖಾರದ ಪುಡಿ ಎರಚಿದ್ದರು. ಗೋಪಾಲ್ ಅವರನ್ನು ಅಟ್ಟಾಡಿಸಿದ್ದ ಆರೋಪಿಗಳು, ಹಣದ ಬ್ಯಾಗ್ ಕಿತ್ತುಕೊಂಡು ಪರಾರಿಯಾಗಿದ್ದಾರೆ’ ಎಂದು ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಗರದ ಮಳಿಗೆಗಳಿಗೆ ಸಿಗರೇಟ್ ಸರಬರಾಜು ಮಾಡುವ ವಿತರಕನನ್ನು ಹಿಂಬಾಲಿಸಿದ್ದ ದುಷ್ಕರ್ಮಿಗಳ ತಂಡ, ಪಿಸ್ತೂಲ್ ತೋರಿಸಿ ಕಣ್ಣಿಗೆ ಖಾರದ ಪುಡಿ ಎರಚಿ ₹15 ಲಕ್ಷ ಸುಲಿಗೆ ಮಾಡಿದೆ.</p>.<p>ನಾಗರಬಾವಿ ಬಳಿಯ ಪಾಪರೆಡ್ಡಿ ಪಾಳ್ಯದಲ್ಲಿ ನಡೆದಿರುವ ಸುಲಿಗೆ ಸಂಬಂಧ ಅನ್ನಪೂರ್ಣೇಶ್ವರಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ವಿತರಕ ಗೋಪಾಲ್, ಟಾಟಾ ಏಸ್ ವಾಹನದಲ್ಲಿ ಸಿಗರೇಟ್ ಬಾಕ್ಸ್ಗಳನ್ನು ಇಟ್ಟುಕೊಂಡು ಮಳಿಗೆಗಳಿಗೆ ಕೊಡಲು ಹೊರಟಿದ್ದರು. ಸಿಗರೇಟ್ ಕೊಟ್ಟ ನಂತರ ಹಣವನ್ನೂ ಸಂಗ್ರಹಿಸಿಟ್ಟುಕೊಂಡಿದ್ದರು. ಕೆಂಗೇರಿಯಿಂದ ಪಾಪರೆಡ್ಡಿ ಪಾಳ್ಯದತ್ತ ಬಂದಿದ್ದರು. ಅವರನ್ನು ಆರೋಪಿಗಳು ಹಿಂಬಾಲಿಸಿದ್ದರು’ ಎಂದು ಪೊಲೀಸರು ಹೇಳಿದರು.</p>.<p>‘ವಾಹನ ಅಡ್ಡಗಟ್ಟಿದ್ದ ಆರೋಪಿಗಳು, ಪಿಸ್ತೂಲ್ ತೋರಿಸಿ ಕೊಲೆ ಬೆದರಿಕೆಯೊಡ್ಡಿದ್ದರು. ನಂತರ, ಕಣ್ಣಿಗೆ ಖಾರದ ಪುಡಿ ಎರಚಿದ್ದರು. ಗೋಪಾಲ್ ಅವರನ್ನು ಅಟ್ಟಾಡಿಸಿದ್ದ ಆರೋಪಿಗಳು, ಹಣದ ಬ್ಯಾಗ್ ಕಿತ್ತುಕೊಂಡು ಪರಾರಿಯಾಗಿದ್ದಾರೆ’ ಎಂದು ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>