<p><strong>ನವದೆಹಲಿ: </strong>ಬೆಂಗಳೂರಿನ ಚಂದಾಪುರ ಕೆರೆಗೆಸುತ್ತಮುತ್ತಲ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಕೈಗಾರಿಕೆಗಳ ಕೊಳಚೆ ನೀರು ಸೇರಿ ಅಪಾರ ಹಾನಿ ಉಂಟಾಗಿದ್ದು, ಈ ಪರಿಸರ ಹಾನಿ ಸರಿಪಡಿಸಲು ಕರ್ನಾಟಕ ಸರ್ಕಾರವು ಕೆರೆಗೆ ₹500 ಕೋಟಿ ಪರಿಹಾರ ನೀಡಬೇಕು ಎಂದು ಹಸಿರು ನ್ಯಾಯಮಂಡಳಿಯ (ಎನ್ಜಿಟಿ) ಪ್ರಧಾನ ಪೀಠ ಆದೇಶಿಸಿದೆ.</p>.<p>ಚಂದಾಪುರ ಕೆರೆ ಮಾಲಿನ್ಯ ಪ್ರಕರಣದ ವಿಚಾರಣೆ ನಡೆಸುತ್ತಿರುವ ಎನ್ಜಿಟಿ ಮುಖ್ಯಸ್ಥ ನ್ಯಾಯಮೂರ್ತಿಆದರ್ಶ ಕುಮಾರ್ ಗೋಯೆಲ್, ನ್ಯಾಯಮೂರ್ತಿ ಸುಧೀರ್ ಅಗರವಾಲ್, ತಜ್ಞ ಸದಸ್ಯರಾದ ಪ್ರೊ.ಸೆಂಥಿಲ್ ವೇಲ್, ಡಾ.ಅಫ್ರೋಜ್ ಅಹ್ಮದ್ ಅವರನ್ನು ಒಳಗೊಂಡ ಪೀಠ ಈ ಆದೇಶ ಹೊರಡಿಸಿದೆ.</p>.<p>ಈ ಪರಿಹಾರದ ಮೊತ್ತವನ್ನು ಒಂದು ತಿಂಗಳಲ್ಲಿ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ಖಾತೆಯಲ್ಲಿ ಇಡಬೇಕು. ಈ ಮೊತ್ತವನ್ನು ಕೆರೆ ಅಭಿವೃದ್ಧಿ ಕಾಮಗಾರಿಗಳಿಗೆ ಬಳಸಬೇಕು. ಕೆರೆಯ ಪುನರುಜ್ಜೀವನಕ್ಕೆ ಸಮಗ್ರ ಯೋಜನೆ ರೂಪಿಸಬೇಕು. ಒಂದು ವೇಳೆ ಈ ಮೊತ್ತ ಕಡಿಮೆಯಾದರೆ ಹೆಚ್ಚುವರಿ ಅನುದಾನವನ್ನು ಒದಗಿಸಬೇಕು. ಅಭಿವೃದ್ಧಿ ಕಾಮಗಾರಿ ನಡೆಸಿ ಆರು ತಿಂಗಳಲ್ಲಿ ವರದಿ ಸಲ್ಲಿಸಬೇಕು ಎಂದೂ ಪೀಠ ನಿರ್ದೇಶನ ನೀಡಿದೆ. ಪ್ರಕರಣದ ವಿಚಾರಣೆಯನ್ನು 2023ರ ಫೆಬ್ರುವರಿ 22ಕ್ಕೆ ಮುಂದೂಡಿದೆ.</p>.<p>ಕೆರೆಯ ಅಭಿವೃದ್ಧಿಯ ಮೇಲೆ ನಿಗಾ ವಹಿಸಲು ಕರ್ನಾಟಕ ಜೌಗು ಪ್ರದೇಶ ಪ್ರಾಧಿಕಾರದ ಮುಖ್ಯಸ್ಥರ ನೇತೃತ್ವದಲ್ಲಿ ಮೇಲ್ವಿಚಾರಣಾ ಸಮಿತಿಯನ್ನು ರಚಿಸ ಬೇಕು. ಈ ಸಮಿತಿಯಲ್ಲಿ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಕೇಂದ್ರ ಅರಣ್ಯ, ಪರಿಸರ ಹಾಗೂ ಹವಾಮಾನ ಸಚಿವಾಲಯದ ಪ್ರಾದೇಶಿಕ ಅಧಿಕಾರಿ, ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು, ಜಿಲ್ಲಾಧಿಕಾರಿ, ಕೆಐಎಡಿಬಿಯ ಅಧಿಕಾರಿ ಇರಬೇಕು. ಈ ಸಮಿತಿಯು ಒಂದು ತಿಂಗ ಳೊಳಗೆ ಸಭೆ ಸೇರಿ ರೂಪರೇಷೆ ಸಿದ್ಧಪಡಿಸಬೇಕು ಎಂದೂ ಪೀಠ ಸೂಚಿಸಿದೆ.</p>.<p>ಕೆರೆಯ ಅಭಿವೃದ್ಧಿಗೆ ಕ್ರಿಯಾಯೋಜನೆ ರೂಪಿಸುವಂತೆ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಲಾಗಿತ್ತು. ಈ ಸಂಬಂಧ ಕೈಗೊಂಡ ಕ್ರಮಗಳ ಬಗ್ಗೆ ಮುಖ್ಯ ಕಾರ್ಯದರ್ಶಿಯವರು ವರದಿ ಸಲ್ಲಿಸಿದ್ದಾರೆ. ಸ್ಥಳೀಯ ಪ್ರಾಧಿಕಾರಗಳ ನಿರ್ಲಕ್ಷ್ಯದಿಂದ ಜಲಕಾಯದ ಪರಿಸರ ವ್ಯವಸ್ಥೆ ಮೇಲೆ ಹಾನಿ ಉಂಟಾಗಿದೆ. ಕೆರೆಯ ಮೀಸಲು ಪ್ರದೇಶದ ಸಂರಕ್ಷಣೆಯಲ್ಲೂ ಲೋಪ ಆಗಿದೆ ಎಂದು ಪೀಠ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಬೆಂಗಳೂರಿನ ಚಂದಾಪುರ ಕೆರೆಗೆಸುತ್ತಮುತ್ತಲ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಕೈಗಾರಿಕೆಗಳ ಕೊಳಚೆ ನೀರು ಸೇರಿ ಅಪಾರ ಹಾನಿ ಉಂಟಾಗಿದ್ದು, ಈ ಪರಿಸರ ಹಾನಿ ಸರಿಪಡಿಸಲು ಕರ್ನಾಟಕ ಸರ್ಕಾರವು ಕೆರೆಗೆ ₹500 ಕೋಟಿ ಪರಿಹಾರ ನೀಡಬೇಕು ಎಂದು ಹಸಿರು ನ್ಯಾಯಮಂಡಳಿಯ (ಎನ್ಜಿಟಿ) ಪ್ರಧಾನ ಪೀಠ ಆದೇಶಿಸಿದೆ.</p>.<p>ಚಂದಾಪುರ ಕೆರೆ ಮಾಲಿನ್ಯ ಪ್ರಕರಣದ ವಿಚಾರಣೆ ನಡೆಸುತ್ತಿರುವ ಎನ್ಜಿಟಿ ಮುಖ್ಯಸ್ಥ ನ್ಯಾಯಮೂರ್ತಿಆದರ್ಶ ಕುಮಾರ್ ಗೋಯೆಲ್, ನ್ಯಾಯಮೂರ್ತಿ ಸುಧೀರ್ ಅಗರವಾಲ್, ತಜ್ಞ ಸದಸ್ಯರಾದ ಪ್ರೊ.ಸೆಂಥಿಲ್ ವೇಲ್, ಡಾ.ಅಫ್ರೋಜ್ ಅಹ್ಮದ್ ಅವರನ್ನು ಒಳಗೊಂಡ ಪೀಠ ಈ ಆದೇಶ ಹೊರಡಿಸಿದೆ.</p>.<p>ಈ ಪರಿಹಾರದ ಮೊತ್ತವನ್ನು ಒಂದು ತಿಂಗಳಲ್ಲಿ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ಖಾತೆಯಲ್ಲಿ ಇಡಬೇಕು. ಈ ಮೊತ್ತವನ್ನು ಕೆರೆ ಅಭಿವೃದ್ಧಿ ಕಾಮಗಾರಿಗಳಿಗೆ ಬಳಸಬೇಕು. ಕೆರೆಯ ಪುನರುಜ್ಜೀವನಕ್ಕೆ ಸಮಗ್ರ ಯೋಜನೆ ರೂಪಿಸಬೇಕು. ಒಂದು ವೇಳೆ ಈ ಮೊತ್ತ ಕಡಿಮೆಯಾದರೆ ಹೆಚ್ಚುವರಿ ಅನುದಾನವನ್ನು ಒದಗಿಸಬೇಕು. ಅಭಿವೃದ್ಧಿ ಕಾಮಗಾರಿ ನಡೆಸಿ ಆರು ತಿಂಗಳಲ್ಲಿ ವರದಿ ಸಲ್ಲಿಸಬೇಕು ಎಂದೂ ಪೀಠ ನಿರ್ದೇಶನ ನೀಡಿದೆ. ಪ್ರಕರಣದ ವಿಚಾರಣೆಯನ್ನು 2023ರ ಫೆಬ್ರುವರಿ 22ಕ್ಕೆ ಮುಂದೂಡಿದೆ.</p>.<p>ಕೆರೆಯ ಅಭಿವೃದ್ಧಿಯ ಮೇಲೆ ನಿಗಾ ವಹಿಸಲು ಕರ್ನಾಟಕ ಜೌಗು ಪ್ರದೇಶ ಪ್ರಾಧಿಕಾರದ ಮುಖ್ಯಸ್ಥರ ನೇತೃತ್ವದಲ್ಲಿ ಮೇಲ್ವಿಚಾರಣಾ ಸಮಿತಿಯನ್ನು ರಚಿಸ ಬೇಕು. ಈ ಸಮಿತಿಯಲ್ಲಿ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಕೇಂದ್ರ ಅರಣ್ಯ, ಪರಿಸರ ಹಾಗೂ ಹವಾಮಾನ ಸಚಿವಾಲಯದ ಪ್ರಾದೇಶಿಕ ಅಧಿಕಾರಿ, ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು, ಜಿಲ್ಲಾಧಿಕಾರಿ, ಕೆಐಎಡಿಬಿಯ ಅಧಿಕಾರಿ ಇರಬೇಕು. ಈ ಸಮಿತಿಯು ಒಂದು ತಿಂಗ ಳೊಳಗೆ ಸಭೆ ಸೇರಿ ರೂಪರೇಷೆ ಸಿದ್ಧಪಡಿಸಬೇಕು ಎಂದೂ ಪೀಠ ಸೂಚಿಸಿದೆ.</p>.<p>ಕೆರೆಯ ಅಭಿವೃದ್ಧಿಗೆ ಕ್ರಿಯಾಯೋಜನೆ ರೂಪಿಸುವಂತೆ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಲಾಗಿತ್ತು. ಈ ಸಂಬಂಧ ಕೈಗೊಂಡ ಕ್ರಮಗಳ ಬಗ್ಗೆ ಮುಖ್ಯ ಕಾರ್ಯದರ್ಶಿಯವರು ವರದಿ ಸಲ್ಲಿಸಿದ್ದಾರೆ. ಸ್ಥಳೀಯ ಪ್ರಾಧಿಕಾರಗಳ ನಿರ್ಲಕ್ಷ್ಯದಿಂದ ಜಲಕಾಯದ ಪರಿಸರ ವ್ಯವಸ್ಥೆ ಮೇಲೆ ಹಾನಿ ಉಂಟಾಗಿದೆ. ಕೆರೆಯ ಮೀಸಲು ಪ್ರದೇಶದ ಸಂರಕ್ಷಣೆಯಲ್ಲೂ ಲೋಪ ಆಗಿದೆ ಎಂದು ಪೀಠ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>