<p><strong>ಬೆಂಗಳೂರು:</strong> ‘ಚುನಾವಣೆ ನಡೆಯುವ ಕಾರಣಕ್ಕಾಗಿ ನೀರಿನ ಸಮಸ್ಯೆ ಬಗ್ಗೆ ಹೆಚ್ಚಿನ ಪ್ರಚಾರ ಹಾಗೂ ರಾಜಕೀಯ ಮಾಡಲಾಗುತ್ತಿದೆ. ಸರ್ಕಾರ ಟ್ಯಾಂಕರ್ ನೀರಿಗೆ ದರ ನಿಗದಿ ಮಾಡಿ, ಟ್ಯಾಂಕರ್ ದಂಧೆಗೆ ಕಡಿವಾಣ ಹಾಕಿದೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.</p>.<p>ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ ‘ನೀರು ಉಳಿಸಿ ಬೆಂಗಳೂರು ಬೆಳಸಿ’ ಅಭಿಯಾನಕ್ಕೆ ಚಾಲನೆ ಹಾಗೂ ಅಂತರ್ಜಲ, ಜಲಸಂರಕ್ಷಕ, ಜಲಮಿತ್ರ, ಜಲಸ್ನೇಹಿ ವೆಬ್ ಆ್ಯಪ್ಗಳನ್ನು ಗುರುವಾರ ಬಿಡುಗಡೆ ಮಾಡಿ ಅವರು ಮಾತನಾಡಿದರು.</p>.<p>‘ನಾವು ಬೆಂಗಳೂರಿನ ಕುಡಿಯುವ ನೀರಿಗಾಗಿ ‘ನಮ್ಮ ನೀರು ನಮ್ಮ ಹಕ್ಕು’ ಹೋರಾಟ ಮಾಡಿಕೊಂಡು ಬಂದಿದ್ದೇವೆ. ನೀರನ್ನು ಉಳಿಸಿ, ಮುಂದಿನ ಪೀಳಿಗೆಯ ಕಣ್ಣೀರು ತಪ್ಪಿಸಲು ನಾವು ಶ್ರಮಿಸುತ್ತಿದ್ದೇವೆ. ಜಲ ರಕ್ಷಣೆಗಾಗಿ ಜನರಲ್ಲಿ ಅರಿವು ಮೂಡಿಸಬೇಕು’ ಎಂದರು.</p>.<p>‘ಚುನಾವಣೆ ಸಂದರ್ಭದಲ್ಲಿ ರಾಜಕೀಯ ಮಾಡಲಾಗುತ್ತಿದೆ. ಅದಕ್ಕೆ ತಲೆಕೆಡಿಸಿಕೊಳ್ಳದೇ ಸಮಸ್ಯೆ ನಿವಾರಣೆಗೆ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಚುನಾವಣೆ ನೀತಿ ಸಂಹಿತೆ ಏನೇ ಬರಲಿ, ಕುಡಿಯುವ ನೀರಿಗೆ ತೊಂದರೆ ಆಗದಂತೆ ನೋಡಿಕೊಳ್ಳಿ. ಎಲ್ಲೆಲ್ಲಿ ನೀರಿನ ಅಭಾವವಿದೆ ಅಲ್ಲಿ ನೀರನ್ನು ಪೂರೈಸಲು ಅಗತ್ಯ ಕ್ರಮ ಕೈಗೊಳ್ಳಿ’ ಎಂದು ಜಲಮಂಡಳಿ ಅಧಿಕಾರಿಗಳಿಗೆ ಸೂಚಿಸಿದರು. </p>.<p>‘ಬರ ಪರಿಸ್ಥಿತಿಯಲ್ಲಿ ನಾವೆಲ್ಲರೂ ನೀರನ್ನು ಬಹಳ ಜವಾಬ್ದಾರಿಯಿಂದ ಸಮರ್ಪಕವಾಗಿ ಬಳಸಬೇಕು. ಈ ವಿಚಾರವಾಗಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಅಗತ್ಯವಿದೆ’ ಎಂದು ಹೇಳಿದರು.</p>.<p>‘10 ವರ್ಷಗಳಿಂದ ನೀರಿನ ದರ ಏರಿಕೆ ಮಾಡಿಲ್ಲ. ನಾನು ಈ ಇಲಾಖೆ ಜವಾಬ್ದಾರಿ ವಹಿಸಿಕೊಂಡ ದಿನದಿಂದಲೇ ಜಲಮಂಡಳಿಗೆ ಶಕ್ತಿ ತುಂಬಲು ತೀರ್ಮಾನಿಸಿದ್ದೇನೆ’ ಎಂದರು.</p>.<p>ಜಲಮಂಡಳಿ ಅಧ್ಯಕ್ಷ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ಆ್ಯಪ್ಗಳ ಬಗ್ಗೆ ಮಾಹಿತಿ ನೀಡಿ, ಮಾರ್ಚ್ 15ರಿಂದ ಆ್ಯಪ್ಗಳು ಕಾರ್ಯಾರಂಭಿಸಲಿವೆ ಎಂದು ಹೇಳಿದರು. ಶಾಸಕರಾದ ಅಶೋಕ್ ಮನಗೂಳಿ, ಬಸವರಾಜ್ ಶಿವಗಂಗಾ, ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರರಾವ್ ಉಪಸ್ಥಿತರಿದ್ದರು.</p>.<p>ಅರಿವಿಗೆ ಇ–ರಿಕ್ಷಾ: ಸಮೃದ್ಧ ಬೆಂಗಳೂರಿಗೆ ನೀರು ಉಳಿಸುವ ಅಗತ್ಯ ಮತ್ತು ಪ್ರಾಮುಖ್ಯ ಸಾರುವ ಸಂದೇಶ, ನೀರು ಉಳಿಸುವ ಎಂಟು ದಾರಿಗಳು ಸೇರಿದಂತೆ ನೀರಿನ ಸಂದೇಶ ಹೊತ್ತ ಇ-ರಿಕ್ಷಾ ವಾಹನಗಳಿಗೆ ಇದೇ ಸಂದರ್ಭದಲ್ಲಿ ಹಸಿರು ನಿಶಾನೆ ತೋರಿಸಲಾಯಿತು. ಈ ಇ-ರಿಕ್ಷಾ ವಾಹನಗಳು ಅಭಿಯಾನದ ಸಂದೇಶ ಹೊತ್ತು ನಗರದಾದ್ಯಂತ ಸಂಚರಿಸಿ ಅರಿವು ಮೂಡಿಸಲಿವೆ.</p>.<h2><strong>ನಾಲ್ಕು ಆ್ಯಪ್ಗಳ ಪ್ರಮುಖಾಂಶ</strong> </h2><p><strong>ಅಂತರ್ಜಲ:</strong> ನಗರದ ನಾಗರಿಕರು ಮನೆಯಲ್ಲಿಯೇ ಕುಳಿತು ಈ ಆ್ಯಪ್ ಮೂಲಕ ಕೊಳವೆಬಾವಿ ಕೊರೆಯಲು ಅನುಮತಿ ಪಡೆಯಲು ಅರ್ಜಿ ಸಲ್ಲಿಸಬಹುದು ನಿರಾಕ್ಷೇಪಣಾ ಪತ್ರವನ್ನೂ ಪಡೆಯಬಹುದು. </p><p><strong>ಜಲಸ್ನೇಹಿ</strong>: ಸಾರ್ವಜನಿಕರು ಕುಡಿಯುವುದಕ್ಕೆ ಹೊರತಾಗಿ ಇನ್ನಿತರ ಕಾರ್ಯಗಳಿಗೆ ಬಳಕೆ ಮಾಡಲು ಸಂಸ್ಕರಿಸಿದ ನೀರನ್ನು ಈ ಆ್ಯಪ್ ಮೂಲಕ ಕಾಯ್ದಿರಿಸಿ ಸರಬರಾಜು ಪಡೆಯಬಹುದು.</p><p><strong>ಜಲಮಿತ್ರ</strong>: ನಗರ ವ್ಯಾಪ್ತಿಯಲ್ಲಿ ನೀರಿನ ಸೋರಿಕೆ ಒಳಚರಂಡಿ ನೀರು ಉಕ್ಕಿ ಹರಿಯುವುದು ಜಲಮಂಡಳಿಯ ಅಗತ್ಯ ದಾಖಲಾತಿಗಳ ಸರ್ವೆ ಮತ್ತು ಇನ್ನಿತರೆ ಕಾರ್ಯಗಳಿಗೆ ಜಲಮಂಡಳಿಗೆ ಸ್ವಯಂ ಸೇವೆ ನೀಡಲು ಇಚ್ಛಿಸುವ ನಾಗರಿಕರು ಎನ್ಜಿಒಗಳು ನಿವೃತ್ತ ತಾಂತ್ರಿಕ ಸಿಬ್ಬಂದಿ ಈ ಆ್ಯಪ್ ಮೂಲಕ ನೋಂದಾಯಿಸಿಕೊಳ್ಳಬಹದು. </p><p><strong>ಜಲ ಸಂರಕ್ಷಕ</strong>: ಕುಡಿಯುವ ನೀರಿನ ಬಳಕೆಯನ್ನು ಉಲ್ಲಂಘಿಸಿದವರಿಗೆ ಜಲಮಂಡಳಿ ಸಿಬ್ಬಂದಿ ಈ ಆ್ಯಪ್ ಮೂಲಕ ಸ್ಥಳದಲ್ಲಿಯೇ ದಂಡ ವಿಧಿಸಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಚುನಾವಣೆ ನಡೆಯುವ ಕಾರಣಕ್ಕಾಗಿ ನೀರಿನ ಸಮಸ್ಯೆ ಬಗ್ಗೆ ಹೆಚ್ಚಿನ ಪ್ರಚಾರ ಹಾಗೂ ರಾಜಕೀಯ ಮಾಡಲಾಗುತ್ತಿದೆ. ಸರ್ಕಾರ ಟ್ಯಾಂಕರ್ ನೀರಿಗೆ ದರ ನಿಗದಿ ಮಾಡಿ, ಟ್ಯಾಂಕರ್ ದಂಧೆಗೆ ಕಡಿವಾಣ ಹಾಕಿದೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.</p>.<p>ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ ‘ನೀರು ಉಳಿಸಿ ಬೆಂಗಳೂರು ಬೆಳಸಿ’ ಅಭಿಯಾನಕ್ಕೆ ಚಾಲನೆ ಹಾಗೂ ಅಂತರ್ಜಲ, ಜಲಸಂರಕ್ಷಕ, ಜಲಮಿತ್ರ, ಜಲಸ್ನೇಹಿ ವೆಬ್ ಆ್ಯಪ್ಗಳನ್ನು ಗುರುವಾರ ಬಿಡುಗಡೆ ಮಾಡಿ ಅವರು ಮಾತನಾಡಿದರು.</p>.<p>‘ನಾವು ಬೆಂಗಳೂರಿನ ಕುಡಿಯುವ ನೀರಿಗಾಗಿ ‘ನಮ್ಮ ನೀರು ನಮ್ಮ ಹಕ್ಕು’ ಹೋರಾಟ ಮಾಡಿಕೊಂಡು ಬಂದಿದ್ದೇವೆ. ನೀರನ್ನು ಉಳಿಸಿ, ಮುಂದಿನ ಪೀಳಿಗೆಯ ಕಣ್ಣೀರು ತಪ್ಪಿಸಲು ನಾವು ಶ್ರಮಿಸುತ್ತಿದ್ದೇವೆ. ಜಲ ರಕ್ಷಣೆಗಾಗಿ ಜನರಲ್ಲಿ ಅರಿವು ಮೂಡಿಸಬೇಕು’ ಎಂದರು.</p>.<p>‘ಚುನಾವಣೆ ಸಂದರ್ಭದಲ್ಲಿ ರಾಜಕೀಯ ಮಾಡಲಾಗುತ್ತಿದೆ. ಅದಕ್ಕೆ ತಲೆಕೆಡಿಸಿಕೊಳ್ಳದೇ ಸಮಸ್ಯೆ ನಿವಾರಣೆಗೆ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಚುನಾವಣೆ ನೀತಿ ಸಂಹಿತೆ ಏನೇ ಬರಲಿ, ಕುಡಿಯುವ ನೀರಿಗೆ ತೊಂದರೆ ಆಗದಂತೆ ನೋಡಿಕೊಳ್ಳಿ. ಎಲ್ಲೆಲ್ಲಿ ನೀರಿನ ಅಭಾವವಿದೆ ಅಲ್ಲಿ ನೀರನ್ನು ಪೂರೈಸಲು ಅಗತ್ಯ ಕ್ರಮ ಕೈಗೊಳ್ಳಿ’ ಎಂದು ಜಲಮಂಡಳಿ ಅಧಿಕಾರಿಗಳಿಗೆ ಸೂಚಿಸಿದರು. </p>.<p>‘ಬರ ಪರಿಸ್ಥಿತಿಯಲ್ಲಿ ನಾವೆಲ್ಲರೂ ನೀರನ್ನು ಬಹಳ ಜವಾಬ್ದಾರಿಯಿಂದ ಸಮರ್ಪಕವಾಗಿ ಬಳಸಬೇಕು. ಈ ವಿಚಾರವಾಗಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಅಗತ್ಯವಿದೆ’ ಎಂದು ಹೇಳಿದರು.</p>.<p>‘10 ವರ್ಷಗಳಿಂದ ನೀರಿನ ದರ ಏರಿಕೆ ಮಾಡಿಲ್ಲ. ನಾನು ಈ ಇಲಾಖೆ ಜವಾಬ್ದಾರಿ ವಹಿಸಿಕೊಂಡ ದಿನದಿಂದಲೇ ಜಲಮಂಡಳಿಗೆ ಶಕ್ತಿ ತುಂಬಲು ತೀರ್ಮಾನಿಸಿದ್ದೇನೆ’ ಎಂದರು.</p>.<p>ಜಲಮಂಡಳಿ ಅಧ್ಯಕ್ಷ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ಆ್ಯಪ್ಗಳ ಬಗ್ಗೆ ಮಾಹಿತಿ ನೀಡಿ, ಮಾರ್ಚ್ 15ರಿಂದ ಆ್ಯಪ್ಗಳು ಕಾರ್ಯಾರಂಭಿಸಲಿವೆ ಎಂದು ಹೇಳಿದರು. ಶಾಸಕರಾದ ಅಶೋಕ್ ಮನಗೂಳಿ, ಬಸವರಾಜ್ ಶಿವಗಂಗಾ, ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರರಾವ್ ಉಪಸ್ಥಿತರಿದ್ದರು.</p>.<p>ಅರಿವಿಗೆ ಇ–ರಿಕ್ಷಾ: ಸಮೃದ್ಧ ಬೆಂಗಳೂರಿಗೆ ನೀರು ಉಳಿಸುವ ಅಗತ್ಯ ಮತ್ತು ಪ್ರಾಮುಖ್ಯ ಸಾರುವ ಸಂದೇಶ, ನೀರು ಉಳಿಸುವ ಎಂಟು ದಾರಿಗಳು ಸೇರಿದಂತೆ ನೀರಿನ ಸಂದೇಶ ಹೊತ್ತ ಇ-ರಿಕ್ಷಾ ವಾಹನಗಳಿಗೆ ಇದೇ ಸಂದರ್ಭದಲ್ಲಿ ಹಸಿರು ನಿಶಾನೆ ತೋರಿಸಲಾಯಿತು. ಈ ಇ-ರಿಕ್ಷಾ ವಾಹನಗಳು ಅಭಿಯಾನದ ಸಂದೇಶ ಹೊತ್ತು ನಗರದಾದ್ಯಂತ ಸಂಚರಿಸಿ ಅರಿವು ಮೂಡಿಸಲಿವೆ.</p>.<h2><strong>ನಾಲ್ಕು ಆ್ಯಪ್ಗಳ ಪ್ರಮುಖಾಂಶ</strong> </h2><p><strong>ಅಂತರ್ಜಲ:</strong> ನಗರದ ನಾಗರಿಕರು ಮನೆಯಲ್ಲಿಯೇ ಕುಳಿತು ಈ ಆ್ಯಪ್ ಮೂಲಕ ಕೊಳವೆಬಾವಿ ಕೊರೆಯಲು ಅನುಮತಿ ಪಡೆಯಲು ಅರ್ಜಿ ಸಲ್ಲಿಸಬಹುದು ನಿರಾಕ್ಷೇಪಣಾ ಪತ್ರವನ್ನೂ ಪಡೆಯಬಹುದು. </p><p><strong>ಜಲಸ್ನೇಹಿ</strong>: ಸಾರ್ವಜನಿಕರು ಕುಡಿಯುವುದಕ್ಕೆ ಹೊರತಾಗಿ ಇನ್ನಿತರ ಕಾರ್ಯಗಳಿಗೆ ಬಳಕೆ ಮಾಡಲು ಸಂಸ್ಕರಿಸಿದ ನೀರನ್ನು ಈ ಆ್ಯಪ್ ಮೂಲಕ ಕಾಯ್ದಿರಿಸಿ ಸರಬರಾಜು ಪಡೆಯಬಹುದು.</p><p><strong>ಜಲಮಿತ್ರ</strong>: ನಗರ ವ್ಯಾಪ್ತಿಯಲ್ಲಿ ನೀರಿನ ಸೋರಿಕೆ ಒಳಚರಂಡಿ ನೀರು ಉಕ್ಕಿ ಹರಿಯುವುದು ಜಲಮಂಡಳಿಯ ಅಗತ್ಯ ದಾಖಲಾತಿಗಳ ಸರ್ವೆ ಮತ್ತು ಇನ್ನಿತರೆ ಕಾರ್ಯಗಳಿಗೆ ಜಲಮಂಡಳಿಗೆ ಸ್ವಯಂ ಸೇವೆ ನೀಡಲು ಇಚ್ಛಿಸುವ ನಾಗರಿಕರು ಎನ್ಜಿಒಗಳು ನಿವೃತ್ತ ತಾಂತ್ರಿಕ ಸಿಬ್ಬಂದಿ ಈ ಆ್ಯಪ್ ಮೂಲಕ ನೋಂದಾಯಿಸಿಕೊಳ್ಳಬಹದು. </p><p><strong>ಜಲ ಸಂರಕ್ಷಕ</strong>: ಕುಡಿಯುವ ನೀರಿನ ಬಳಕೆಯನ್ನು ಉಲ್ಲಂಘಿಸಿದವರಿಗೆ ಜಲಮಂಡಳಿ ಸಿಬ್ಬಂದಿ ಈ ಆ್ಯಪ್ ಮೂಲಕ ಸ್ಥಳದಲ್ಲಿಯೇ ದಂಡ ವಿಧಿಸಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>