ಶನಿವಾರ, 6 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸೆಕ್ಯೂರಿಟಿ ಗಾರ್ಡ್‌ ಹತ್ಯೆ: ಕಾಲೇಜು ವಿದ್ಯಾರ್ಥಿ ಬಂಧನ

Published 3 ಜುಲೈ 2024, 20:12 IST
Last Updated 3 ಜುಲೈ 2024, 20:12 IST
ಅಕ್ಷರ ಗಾತ್ರ

ಬೆಂಗಳೂರು: ಕಾಲೇಜಿನೊಳಗೆ ಪ್ರವೇಶಿಸುವ ವಿಚಾರದಲ್ಲಿ ವಿದ್ಯಾರ್ಥಿ ಮತ್ತು ಸೆಕ್ಯೂರಿಟಿ ಗಾರ್ಡ್‌ ಮಧ್ಯೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಈ ಬಗ್ಗೆ ಅಮೃತಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಅಮೃತಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯ ಕೆಂಪಾಪುರ ಸಿಂಧಿ ಕಾಲೇಜಿನ ಸೆಕ್ಯೂರಿಟಿ ಗಾರ್ಡ್‌ ಜೈ ಕಿಶೋರ್‌ ರಾಯ್‌ (52) ಕೊಲೆಯಾದವರು. ಆರೋಪಿ ಭಾರ್ಗವ್ (22) ಬಂಧಿಸಲಾಗಿದೆ’ ಎಂದು ಪೊಲೀಸರು ತಿಳಿಸಿದರು.

‘ಭಾರ್ಗವ್‌ ಬಿ.ಎ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದ. ಭಾರ್ಗವ್‌ ಕಾಲೇಜಿಗೆ ಮದ್ಯ ಸೇವಿಸಿ ಬಂದಿದ್ದ. ಆತ ಕಾಲೇಜಿನೊಳಕ್ಕೆ ಪ್ರವೇಶಿಸಲು ಜೈ ಕಿಶೋರ್‌ ರಾಯ್‌ ಅವಕಾಶ ನಿರಾಕರಿಸಿದ್ದರು. ಇದರಿಂದಾಗಿ ಇಬ್ಬರ ಮಧ್ಯೆ ಜಗಳ ಪ್ರಾರಂಭವಾಗಿತ್ತು. ಭಾರ್ಗವ್‌ ಪೇಯಿಂಗ್‌ ಗೆಸ್ಟ್‌ನಲ್ಲಿ (ಪಿಜಿ) ವಾಸವಾಗಿದ್ದ. ಕಾಲೇಜಿನೊಳಗೆ ಬಿಡದಿದ್ದಾಗ ಸಿಟ್ಟಿಗೆದ್ದ ಭಾರ್ಗವ್‌ ಅಂಗಡಿಗೆ ಹೋಗಿ ಚಾಕು ತಂದು ಜೈ ಕಿಶೋರ್‌ ರಾಯ್‌ ಅವರಿಗೆ ಇರಿದು ಕೊಲೆ ಮಾಡಿದ್ದಾನೆ’ ಎಂದು ಹೇಳಿದರು. 

‘ಭಾರ್ಗವ್‌ನನ್ನು ಬಂಧಿಸಿ ತನಿಖೆ ಮುಂದುವರೆಸಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT