<p><strong>ಬೆಂಗಳೂರು</strong>: ನಗರದಲ್ಲಿ ಎರಡು ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿ ಸೇರಿ ಇಬ್ಬರು ಮೃತಪಟ್ಟಿದ್ದು, ಒಬ್ಬ ವಿದ್ಯಾರ್ಥಿ ಗಾಯಗೊಂಡಿದ್ದಾರೆ. </p>.<p>ಚಿಕ್ಕಜಾಲ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಪಘಾತದಲ್ಲಿ ಅತಿವೇಗವಾಗಿ ಬಂದ ಬೈಕ್ವೊಂದು ರಸ್ತೆ ದಾಟುತ್ತಿದ್ದ ಎಂಜಿನಿಯರ್ ವಿದ್ಯಾರ್ಥಿಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಕಲಬುರಗಿಯ ಕಿರಣ್(19) ಮೃತಪಟ್ಟಿದ್ದಾರೆ. ಚೇತನ್(19) ಗಾಯಗೊಂಡಿದ್ಧಾರೆ. </p>.<p>ಎಂವಿಐಟಿ ಜಂಕ್ಷನ್ ಬಳಿ ಈ ಘಟನೆ ನಡೆದಿದೆ. ಕೃತ್ಯ ಎಸಗಿದ ಬೈಕ್ ಸವಾರ ವಿಜಯ್(25) ಎಂಬಾತನನ್ನು ಬಂಧಿಸಲಾಗಿದೆ ಎಂದು ಸಂಚಾರ ಪೊಲೀಸರು ಮಾಹಿತಿ ನೀಡಿದರು.</p>.<p>ಯಲಹಂಕದ ಎಂವಿಐಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಇ ವ್ಯಾಸಂಗ ಮಾಡುತ್ತಿರುವ ಕಿರಣ್, ಕಾಲೇಜು ಸಮೀಪದ ಹಾಸ್ಟೆಲ್ನಲ್ಲಿ ವಾಸವಾಗಿದ್ದರು.</p>.<p>ಮಂಗಳವಾರ ರಾತ್ರಿ ತನ್ನ ಐವರು ಸ್ನೇಹಿತರ ಜತೆ ಹಾಸ್ಟೆಲ್ ಸಮೀಪದ ಬರ್ಗರ್ ಸೆಂಟರ್ಗೆ ಹೋಗಿ ವಾಪಸ್ಸಾಗುತ್ತಿದ್ದರು. ಈ ವೇಳೆ ರಸ್ತೆ ವಿಭಜಕ ದಾಟುವಾಗ ಕೆಂಪೇಗೌಡ ವಿಮಾನ ನಿಲ್ದಾಣ ರಸ್ತೆ ಕಡೆಯಿಂದ ನಗರದ ಕಡೆಗೆ ವೇಗವಾಗಿ ಬಂದ ಬೈಕ್ ಏಕಾಏಕಿ ಕಿರಣ್ ಹಾಗೂ ಚೇತನ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಿರಣ್ ಮತ್ತು ಚೇತನ್ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು.</p>.<p>ಕೂಡಲೇ ಸ್ನೇಹಿತರು ಸ್ಥಳೀಯರ ನೆರವಿನಿಂದ ಸಮೀಪದ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆಯೇ ಕಿರಣ್ ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ಧಾರೆ. ಚೇತನ್ ಕಾಲಿಗೆ ಗಂಭೀರ ಪೆಟ್ಟುಬಿದ್ದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.</p>.<p><strong>ಬೈಕ್ ಸವಾರ ಸಾವು:</strong></p>.<p>ಎಲೆಕ್ಟ್ರಾನಿಕ್ ಸಿಟಿ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಬೈಕ್ವೊಂದು ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೂಡ್ಲು ನಿವಾಸಿ ಶಶಿಕುಮಾರ್(35) ಮೃತಪಟ್ಟವರು.</p>.<p>ಮಂಗಳವಾರ ರಾತ್ರಿ 10.30ಕ್ಕೆ ಸಿಂಗಸಂದ್ರದ ಸಿಲ್ವರ್ ಕೌಂಟಿ ರಸ್ತೆಯ ಬಿರ್ಲಾ ಜಂಕ್ಷನ್ ಬಳಿ ಈ ದುರ್ಘಟನೆ ನಡೆದಿದೆ.</p>.<p>ಎಚ್ಎಸ್ಆರ್ ಲೇಔಟ್ನ ಟ್ರಾವೆಲ್ಸ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಬೈಕ್ ಸವಾರ, ಕೆಲಸ ಮುಗಿಸಿಕೊಂಡು ಸಿಂಗಸಂದ್ರದ ಕಡೆಗೆ ಬಂದಿದ್ದರು. ಅಲ್ಲಿಂದ ಮನೆಗೆ ವಾಪಸ್ ಆಗುತ್ತಿದ್ದ ವೇಳೆ ಬಿರ್ಲಾ ಜಂಕ್ಷನ್ ಈ ಅಪಘಾತ ನಡೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಗರದಲ್ಲಿ ಎರಡು ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿ ಸೇರಿ ಇಬ್ಬರು ಮೃತಪಟ್ಟಿದ್ದು, ಒಬ್ಬ ವಿದ್ಯಾರ್ಥಿ ಗಾಯಗೊಂಡಿದ್ದಾರೆ. </p>.<p>ಚಿಕ್ಕಜಾಲ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಪಘಾತದಲ್ಲಿ ಅತಿವೇಗವಾಗಿ ಬಂದ ಬೈಕ್ವೊಂದು ರಸ್ತೆ ದಾಟುತ್ತಿದ್ದ ಎಂಜಿನಿಯರ್ ವಿದ್ಯಾರ್ಥಿಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಕಲಬುರಗಿಯ ಕಿರಣ್(19) ಮೃತಪಟ್ಟಿದ್ದಾರೆ. ಚೇತನ್(19) ಗಾಯಗೊಂಡಿದ್ಧಾರೆ. </p>.<p>ಎಂವಿಐಟಿ ಜಂಕ್ಷನ್ ಬಳಿ ಈ ಘಟನೆ ನಡೆದಿದೆ. ಕೃತ್ಯ ಎಸಗಿದ ಬೈಕ್ ಸವಾರ ವಿಜಯ್(25) ಎಂಬಾತನನ್ನು ಬಂಧಿಸಲಾಗಿದೆ ಎಂದು ಸಂಚಾರ ಪೊಲೀಸರು ಮಾಹಿತಿ ನೀಡಿದರು.</p>.<p>ಯಲಹಂಕದ ಎಂವಿಐಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಇ ವ್ಯಾಸಂಗ ಮಾಡುತ್ತಿರುವ ಕಿರಣ್, ಕಾಲೇಜು ಸಮೀಪದ ಹಾಸ್ಟೆಲ್ನಲ್ಲಿ ವಾಸವಾಗಿದ್ದರು.</p>.<p>ಮಂಗಳವಾರ ರಾತ್ರಿ ತನ್ನ ಐವರು ಸ್ನೇಹಿತರ ಜತೆ ಹಾಸ್ಟೆಲ್ ಸಮೀಪದ ಬರ್ಗರ್ ಸೆಂಟರ್ಗೆ ಹೋಗಿ ವಾಪಸ್ಸಾಗುತ್ತಿದ್ದರು. ಈ ವೇಳೆ ರಸ್ತೆ ವಿಭಜಕ ದಾಟುವಾಗ ಕೆಂಪೇಗೌಡ ವಿಮಾನ ನಿಲ್ದಾಣ ರಸ್ತೆ ಕಡೆಯಿಂದ ನಗರದ ಕಡೆಗೆ ವೇಗವಾಗಿ ಬಂದ ಬೈಕ್ ಏಕಾಏಕಿ ಕಿರಣ್ ಹಾಗೂ ಚೇತನ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಿರಣ್ ಮತ್ತು ಚೇತನ್ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು.</p>.<p>ಕೂಡಲೇ ಸ್ನೇಹಿತರು ಸ್ಥಳೀಯರ ನೆರವಿನಿಂದ ಸಮೀಪದ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆಯೇ ಕಿರಣ್ ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ಧಾರೆ. ಚೇತನ್ ಕಾಲಿಗೆ ಗಂಭೀರ ಪೆಟ್ಟುಬಿದ್ದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.</p>.<p><strong>ಬೈಕ್ ಸವಾರ ಸಾವು:</strong></p>.<p>ಎಲೆಕ್ಟ್ರಾನಿಕ್ ಸಿಟಿ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಬೈಕ್ವೊಂದು ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೂಡ್ಲು ನಿವಾಸಿ ಶಶಿಕುಮಾರ್(35) ಮೃತಪಟ್ಟವರು.</p>.<p>ಮಂಗಳವಾರ ರಾತ್ರಿ 10.30ಕ್ಕೆ ಸಿಂಗಸಂದ್ರದ ಸಿಲ್ವರ್ ಕೌಂಟಿ ರಸ್ತೆಯ ಬಿರ್ಲಾ ಜಂಕ್ಷನ್ ಬಳಿ ಈ ದುರ್ಘಟನೆ ನಡೆದಿದೆ.</p>.<p>ಎಚ್ಎಸ್ಆರ್ ಲೇಔಟ್ನ ಟ್ರಾವೆಲ್ಸ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಬೈಕ್ ಸವಾರ, ಕೆಲಸ ಮುಗಿಸಿಕೊಂಡು ಸಿಂಗಸಂದ್ರದ ಕಡೆಗೆ ಬಂದಿದ್ದರು. ಅಲ್ಲಿಂದ ಮನೆಗೆ ವಾಪಸ್ ಆಗುತ್ತಿದ್ದ ವೇಳೆ ಬಿರ್ಲಾ ಜಂಕ್ಷನ್ ಈ ಅಪಘಾತ ನಡೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>