’ಮೂರು ಪಾಳಿಯಲ್ಲಿ ಕಾರ್ಮಿಕರು ದುಡಿಯುತ್ತಿದ್ದಾರೆ. ಕಾರ್ಖಾನೆಯಲ್ಲಿ ಉತ್ಪನ್ನಗಳಿಗೆ ಬಳಸುವ ರಾಸಾಯನಿಕಗಳು ಕಾರ್ಮಿಕರ ಆರೋಗ್ಯಕ್ಕೆ ಹಾನಿ ಉಂಟು ಮಾಡುತ್ತಿದ್ದು, ಇದನ್ನು ಪ್ರಶ್ನಿಸುವುದಕ್ಕಾಗಿ ಕಾರ್ಮಿಕರ ಸಂಘ ಮಾಡಿಕೊಂಡಿದ್ದೇವೆ. ಇದನ್ನು ಸಹಿಸದೆ ಕಾರ್ಮಿಕರನ್ನು ಕೆಲಸದಿಂದ ತೆಗೆದು ಹಾಕಿರುವುದು ಸರಿಯಲ್ಲ’ ಎಂದು ಕಾರ್ಮಿಕ ಸಂಘದ ರಜನಿಕಾಂತ್, ಹರೀಶ್, ಬಿ.ಸಿ. ಸುನಿಲ್ ಕುಮಾರ್, ವೆಂಕಟರೆಡ್ಡಿ, ಬಾಲಸ್ವಾಮಿ ದೂರಿದರು.