<p><strong>ಬೆಂಗಳೂರು</strong>: ಸಾಹಿತ್ಯದಿಂದ ಸಾಮಾಜಿಕ ಬದಲಾವಣೆ ತರಲು ಸಾಧ್ಯ ಎಂದು ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕ ಸತೀಶಕುಮಾರ ಎಸ್.ಹೊಸಮನಿ ಹೇಳಿದರು.</p>.<p>ಅತ್ಯುತ್ತಮ ಪ್ರಕಾಶನ ಸಂಸ್ಥೆಗೆ ನೀಡುವ ‘ಅಂಕಿತ ಪುಸ್ತಕ ಪುರಸ್ಕಾರ’ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಲೇಖಕರು, ಪ್ರಕಾಶಕರು ಅಕ್ಷರ ಸಂಸ್ಕೃತಿಯನ್ನು ಉಳಿಸಿ ಬೆಳೆಸಿದ್ದಾರೆ. ಶ್ರೀಸಾಮಾನ್ಯರ ವಿಶ್ವವಿದ್ಯಾಲಯ ಎಂದೇ ಗುರುತಿಸಲಾಗಿರುವ ಗ್ರಂಥಾಲಯಗಳನ್ನು ಉಳಿಸಿದ್ದು ಕೂಡ ಸಾಹಿತ್ಯವೇ ಆಗಿದೆ. ಸಾಹಿತ್ಯ ಪರಂಪರೆ ಉಳಿಸಿದವರು ಪ್ರಕಾಶಕರು ಎಂದು ತಿಳಿಸಿದರು.</p>.<p>ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ, ‘ಮುಂದಿನ ದಿನಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ನಾಡಿನ ಪ್ರಕಾಶಕರೊಂದಿಗೆ ಸೇರಿ ‘ಪುಸ್ತಕ ಉತ್ಸವ’ ಮಾಡಬೇಕೆಂಬ ಯೋಜನೆ ಇದೆ’ ಎಂದು ಹೇಳಿದರು.</p>.<p>ಲೇಖಕ ಗಿರೀಶ್ ರಾವ್ ಹತ್ವಾರ್ ಮಾತನಾಡಿ, ‘ಹಿಂದೆ ಲೇಖಕರು ಪ್ರಕಾಶಕರನ್ನು ಹುಡುಕುತ್ತಿದ್ದರು. ಈಗ ಪ್ರಕಾಶಕರೇ ಲೇಖಕರನ್ನು ಹುಡುಕುವ ಕಾಲ ಬಂದಿದೆ. ಇಬ್ಬರೂ ಸೇರಿ ಓದುಗರನ್ನು ಹುಡುಕಬೇಕಿದೆ’ ಎಂದರು.</p>.<p>ಅಂಕಿತ ಪುಸ್ತಕ ಪ್ರಕಾಶನ ಸಂಸ್ಥೆಯ ಪ್ರಕಾಶ ಕಂಬತ್ತಳ್ಳಿ ಮಾತನಾಡಿ, ‘ಹಿಂದೆ ಪುಸ್ತಕಕ್ಕೆ ಪುಸ್ತಕಗಳೇ ಪೈಪೋಟಿ ಕೊಡುತ್ತಿದ್ದವು. ಈಗ ಕಾಲ ಬದಲಾಗಿದೆ. ಪುಸ್ತಕಗಳಿಗೆ ಸಾಮಾಜಿಕ ಜಾಲ ತಾಣಗಳು, ಒಟಿಟಿ, ಆನ್ಲೈನ್, ಇ-ಬುಕ್ಗಳು ಸ್ಪರ್ಧೆ ನೀಡುತ್ತಿವೆ. ಮತ್ತೆ ಪುಸ್ತಕ ಓದುವ ವೈಭವ ಮರುಕಳಿಸಬೇಕು’ ಎಂದು ಆಶಯ ವ್ಯಕ್ತಪಡಿಸಿದರು.</p>.<p>ಸಾಗರದ ‘ರವೀಂದ್ರ ಪುಸ್ತಕಾಲಯ’ಕ್ಕೆ 2022ನೇ ಸಾಲಿನ ಹಾಗೂ ಬೆಂಗಳೂರಿನ ʻಛಂದ ಪುಸ್ತಕʼ ಸಂಸ್ಥೆಗೆ 2023ನೇ ಸಾಲಿನ ಅಂಕಿತ ಪುಸ್ತಕ ಪುರಸ್ಕಾರ ಪ್ರದಾನ ಮಾಡಲಾಯಿತು. ರವೀಂದ್ರ ಪುಸ್ತಕಾಲಯದ ಯಲ್ಲಪ್ಪ ಅಪ್ಪಾಜಿರಾವ್ ದಂತಿ, ಛಂದ ಪುಸ್ತಕ ಸಂಸ್ಥೆಯ ವಸುಧೇಂದ್ರ ಅಬಿಪ್ರಾಯ ಹಂಚಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಸಾಹಿತ್ಯದಿಂದ ಸಾಮಾಜಿಕ ಬದಲಾವಣೆ ತರಲು ಸಾಧ್ಯ ಎಂದು ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕ ಸತೀಶಕುಮಾರ ಎಸ್.ಹೊಸಮನಿ ಹೇಳಿದರು.</p>.<p>ಅತ್ಯುತ್ತಮ ಪ್ರಕಾಶನ ಸಂಸ್ಥೆಗೆ ನೀಡುವ ‘ಅಂಕಿತ ಪುಸ್ತಕ ಪುರಸ್ಕಾರ’ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಲೇಖಕರು, ಪ್ರಕಾಶಕರು ಅಕ್ಷರ ಸಂಸ್ಕೃತಿಯನ್ನು ಉಳಿಸಿ ಬೆಳೆಸಿದ್ದಾರೆ. ಶ್ರೀಸಾಮಾನ್ಯರ ವಿಶ್ವವಿದ್ಯಾಲಯ ಎಂದೇ ಗುರುತಿಸಲಾಗಿರುವ ಗ್ರಂಥಾಲಯಗಳನ್ನು ಉಳಿಸಿದ್ದು ಕೂಡ ಸಾಹಿತ್ಯವೇ ಆಗಿದೆ. ಸಾಹಿತ್ಯ ಪರಂಪರೆ ಉಳಿಸಿದವರು ಪ್ರಕಾಶಕರು ಎಂದು ತಿಳಿಸಿದರು.</p>.<p>ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ, ‘ಮುಂದಿನ ದಿನಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ನಾಡಿನ ಪ್ರಕಾಶಕರೊಂದಿಗೆ ಸೇರಿ ‘ಪುಸ್ತಕ ಉತ್ಸವ’ ಮಾಡಬೇಕೆಂಬ ಯೋಜನೆ ಇದೆ’ ಎಂದು ಹೇಳಿದರು.</p>.<p>ಲೇಖಕ ಗಿರೀಶ್ ರಾವ್ ಹತ್ವಾರ್ ಮಾತನಾಡಿ, ‘ಹಿಂದೆ ಲೇಖಕರು ಪ್ರಕಾಶಕರನ್ನು ಹುಡುಕುತ್ತಿದ್ದರು. ಈಗ ಪ್ರಕಾಶಕರೇ ಲೇಖಕರನ್ನು ಹುಡುಕುವ ಕಾಲ ಬಂದಿದೆ. ಇಬ್ಬರೂ ಸೇರಿ ಓದುಗರನ್ನು ಹುಡುಕಬೇಕಿದೆ’ ಎಂದರು.</p>.<p>ಅಂಕಿತ ಪುಸ್ತಕ ಪ್ರಕಾಶನ ಸಂಸ್ಥೆಯ ಪ್ರಕಾಶ ಕಂಬತ್ತಳ್ಳಿ ಮಾತನಾಡಿ, ‘ಹಿಂದೆ ಪುಸ್ತಕಕ್ಕೆ ಪುಸ್ತಕಗಳೇ ಪೈಪೋಟಿ ಕೊಡುತ್ತಿದ್ದವು. ಈಗ ಕಾಲ ಬದಲಾಗಿದೆ. ಪುಸ್ತಕಗಳಿಗೆ ಸಾಮಾಜಿಕ ಜಾಲ ತಾಣಗಳು, ಒಟಿಟಿ, ಆನ್ಲೈನ್, ಇ-ಬುಕ್ಗಳು ಸ್ಪರ್ಧೆ ನೀಡುತ್ತಿವೆ. ಮತ್ತೆ ಪುಸ್ತಕ ಓದುವ ವೈಭವ ಮರುಕಳಿಸಬೇಕು’ ಎಂದು ಆಶಯ ವ್ಯಕ್ತಪಡಿಸಿದರು.</p>.<p>ಸಾಗರದ ‘ರವೀಂದ್ರ ಪುಸ್ತಕಾಲಯ’ಕ್ಕೆ 2022ನೇ ಸಾಲಿನ ಹಾಗೂ ಬೆಂಗಳೂರಿನ ʻಛಂದ ಪುಸ್ತಕʼ ಸಂಸ್ಥೆಗೆ 2023ನೇ ಸಾಲಿನ ಅಂಕಿತ ಪುಸ್ತಕ ಪುರಸ್ಕಾರ ಪ್ರದಾನ ಮಾಡಲಾಯಿತು. ರವೀಂದ್ರ ಪುಸ್ತಕಾಲಯದ ಯಲ್ಲಪ್ಪ ಅಪ್ಪಾಜಿರಾವ್ ದಂತಿ, ಛಂದ ಪುಸ್ತಕ ಸಂಸ್ಥೆಯ ವಸುಧೇಂದ್ರ ಅಬಿಪ್ರಾಯ ಹಂಚಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>