<p><strong>ಬೆಂಗಳೂರು</strong>: ಯಲಹಂಕದ ಆರ್ಎನ್ಝೆಡ್ ಅಪಾರ್ಟ್ಮೆಂಟ್ನಲ್ಲಿ ತಾಯಿ ಹಾಗೂ ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆಕೊಂಡಿದ್ದಾರೆ.</p>.<p>ರಮ್ಯಾ ಶ್ರೀಧರ್(43) ಮತ್ತು ಅವರ ಪುತ್ರ ಭಾರ್ಗವ್ (23) ಆತ್ಮಹತ್ಯೆ ಮಾಡಿಕೊಂಡವರು.</p>.<p>ಈ ಸಂಬಂಧ ಯಲಹಂಕ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ. ಜುಲೈ 9ರಂದು ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು ಕುಟುಂಬಸ್ಥರು ಹಾಗೂ ಪೊಲೀಸರಿಗೆ ಶುಕ್ರವಾರ ಮಾಹಿತಿ ಗೊತ್ತಾಗಿದೆ.</p>.<p>ಪ್ರಾಥಮಿಕ ತನಿಖೆಯಲ್ಲಿ ಕೆಲವು ತಿಂಗಳ ಹಿಂದೆ ರಮ್ಯಾ ಪತಿ ಶ್ರೀಧರ್ ಅನಾರೋಗ್ಯಕ್ಕೀಡಾಗಿ ಮೃತಪಟ್ಟಿದ್ದರು. ಅದರಿಂದ ತಾಯಿ, ಪುತ್ರ ಮಾನಸಿಕವಾಗಿ ಕುಗ್ಗಿದ್ದರು. ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.</p>.<p>ಆಂಧ್ರಪ್ರದೇಶದ ರಮ್ಯಾ ಅವರು ಸಾಫ್ಟವೇರ್ ಎಂಜಿನಿಯರ್ ಶ್ರೀಧರ್ ಅವರನ್ನು ಪ್ರೀತಿಸಿ ಮದುವೆ ಆಗಿದ್ದರು. ದಂಪತಿಗೆ ಮಗಳು ಇದ್ದಾರೆ. ದಂಪತಿ ಮಕ್ಕಳ ಜತೆ ಬೆಂಗಳೂರಿನ ಅಪಾರ್ಟ್ಮೆಂಟ್ನಲ್ಲಿ ವಾಸವಾಗಿದ್ದರು. ಪುತ್ರಿ ಪಿ.ಜಿಯಲ್ಲಿದ್ದರು ಎಂದು ಪೊಲೀಸರು ಹೇಳಿದರು.</p>.<p>‘ಪತಿ ಮೃತಪಟ್ಟ ಮೇಲೆ ರಮ್ಯಾ ಅವರಿಗೆ ಕುಟುಂಬದ ನಿರ್ವಹಣೆ ನಡೆಸುವುದು ಕಷ್ಟವಾಗಿತ್ತು. ಫ್ಲ್ಯಾಟ್ ಬಾಡಿಗೆ, ಮಕ್ಕಳ ವಿದ್ಯಾಭ್ಯಾಸಕ್ಕೆ ಹಣ ಹೊಂದಿಸಲು ಆಕೆ ಪರದಾಡುತ್ತಿದ್ದರು ಎನ್ನಲಾಗಿದೆ. ಇದರಿಂದ ಖಿನ್ನತೆಗೆ ಒಳಗಾಗಿದ್ದರು. ಸಂಬಂಧಿಕರಿಗೆ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿಕೊಂಡಿದ್ದರು’ ಎನ್ನಲಾಗಿದೆ.</p>.<p>ಪಿ.ಜಿಯಲ್ಲಿದ್ದ ರಮ್ಯಾ ಅವರ ಪುತ್ರಿ ಎರಡು ದಿನಕ್ಕೊಮ್ಮೆ ತಾಯಿಗೆ ಕರೆ ಮಾಡುತ್ತಿದ್ದರು. ಜುಲೈ 9ರಂದು ರಾತ್ರಿ ತಾಯಿಗೆ ಕರೆ ಮಾಡಿ ಮಾತಾಡಿದ್ದರು. ಈ ವೇಳೆಯೂ ತಾಯಿ ಮತ್ತು ಸಹೋದರ ಆತ್ಮಹತ್ಯೆ ಮಾಡಿಕೊಳ್ಳುವ ಮಾತನಾಡಿದ್ದರು. ಆಗ ಇಬ್ಬರನ್ನೂ ಸಮಾಧಾನ ಪಡಿಸಿದ್ದರು. ‘ತಂದೆ ಮೃತಪಟ್ಟ ಬಳಿಕ ಆರ್ಥಿಕವಾಗಿ ಮತ್ತು ಮಾನಸಿಕವಾಗಿ ಕುಗ್ಗಿದ್ದರು’ ಎಂದು ಮೃತ ರಮ್ಯಾರ ಪುತ್ರಿ ಪೊಲೀಸರ ಬಳಿ ಹೇಳಿಕೊಂಡಿದ್ದಾರೆ.</p>.<p>ಜುಲೈ 12ರ ಶುಕ್ರವಾರ ಸಂಜೆ ಪುತ್ರಿ ಬಂದು ಮನೆಯ ಬಾಗಿಲು ಬಡಿದರು. ಆಗ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ. ಬಾಗಿಲು ಒಡೆದು ಪರಿಶೀಲಿಸಿದಾಗ ತಾಯಿ ಹಾಗೂ ಸಹೋದರ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.</p>.<p>ಸ್ಥಳ್ಕಕೆ ಬಂದ ಪೊಲೀಸರು ಪರಿಶೀಲಿಸಿದಾಗ, ಎರಡು ಮೃತದೇಹಗಳು ಕೊಳೆತ ಸ್ಥಿತಿಯಲ್ಲಿ ಇದ್ದವು. ಮರಣೋತ್ತರ ಪರೀಕ್ಷೆ ನಡೆಸಿ ಶನಿವಾರ ಮಧ್ಯಾಹ್ನ ಮೃತದೇಹಗಳನ್ನು ಕುಟುಂಬದ ಸದಸ್ಯರಿಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಯಲಹಂಕದ ಆರ್ಎನ್ಝೆಡ್ ಅಪಾರ್ಟ್ಮೆಂಟ್ನಲ್ಲಿ ತಾಯಿ ಹಾಗೂ ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆಕೊಂಡಿದ್ದಾರೆ.</p>.<p>ರಮ್ಯಾ ಶ್ರೀಧರ್(43) ಮತ್ತು ಅವರ ಪುತ್ರ ಭಾರ್ಗವ್ (23) ಆತ್ಮಹತ್ಯೆ ಮಾಡಿಕೊಂಡವರು.</p>.<p>ಈ ಸಂಬಂಧ ಯಲಹಂಕ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ. ಜುಲೈ 9ರಂದು ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು ಕುಟುಂಬಸ್ಥರು ಹಾಗೂ ಪೊಲೀಸರಿಗೆ ಶುಕ್ರವಾರ ಮಾಹಿತಿ ಗೊತ್ತಾಗಿದೆ.</p>.<p>ಪ್ರಾಥಮಿಕ ತನಿಖೆಯಲ್ಲಿ ಕೆಲವು ತಿಂಗಳ ಹಿಂದೆ ರಮ್ಯಾ ಪತಿ ಶ್ರೀಧರ್ ಅನಾರೋಗ್ಯಕ್ಕೀಡಾಗಿ ಮೃತಪಟ್ಟಿದ್ದರು. ಅದರಿಂದ ತಾಯಿ, ಪುತ್ರ ಮಾನಸಿಕವಾಗಿ ಕುಗ್ಗಿದ್ದರು. ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.</p>.<p>ಆಂಧ್ರಪ್ರದೇಶದ ರಮ್ಯಾ ಅವರು ಸಾಫ್ಟವೇರ್ ಎಂಜಿನಿಯರ್ ಶ್ರೀಧರ್ ಅವರನ್ನು ಪ್ರೀತಿಸಿ ಮದುವೆ ಆಗಿದ್ದರು. ದಂಪತಿಗೆ ಮಗಳು ಇದ್ದಾರೆ. ದಂಪತಿ ಮಕ್ಕಳ ಜತೆ ಬೆಂಗಳೂರಿನ ಅಪಾರ್ಟ್ಮೆಂಟ್ನಲ್ಲಿ ವಾಸವಾಗಿದ್ದರು. ಪುತ್ರಿ ಪಿ.ಜಿಯಲ್ಲಿದ್ದರು ಎಂದು ಪೊಲೀಸರು ಹೇಳಿದರು.</p>.<p>‘ಪತಿ ಮೃತಪಟ್ಟ ಮೇಲೆ ರಮ್ಯಾ ಅವರಿಗೆ ಕುಟುಂಬದ ನಿರ್ವಹಣೆ ನಡೆಸುವುದು ಕಷ್ಟವಾಗಿತ್ತು. ಫ್ಲ್ಯಾಟ್ ಬಾಡಿಗೆ, ಮಕ್ಕಳ ವಿದ್ಯಾಭ್ಯಾಸಕ್ಕೆ ಹಣ ಹೊಂದಿಸಲು ಆಕೆ ಪರದಾಡುತ್ತಿದ್ದರು ಎನ್ನಲಾಗಿದೆ. ಇದರಿಂದ ಖಿನ್ನತೆಗೆ ಒಳಗಾಗಿದ್ದರು. ಸಂಬಂಧಿಕರಿಗೆ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿಕೊಂಡಿದ್ದರು’ ಎನ್ನಲಾಗಿದೆ.</p>.<p>ಪಿ.ಜಿಯಲ್ಲಿದ್ದ ರಮ್ಯಾ ಅವರ ಪುತ್ರಿ ಎರಡು ದಿನಕ್ಕೊಮ್ಮೆ ತಾಯಿಗೆ ಕರೆ ಮಾಡುತ್ತಿದ್ದರು. ಜುಲೈ 9ರಂದು ರಾತ್ರಿ ತಾಯಿಗೆ ಕರೆ ಮಾಡಿ ಮಾತಾಡಿದ್ದರು. ಈ ವೇಳೆಯೂ ತಾಯಿ ಮತ್ತು ಸಹೋದರ ಆತ್ಮಹತ್ಯೆ ಮಾಡಿಕೊಳ್ಳುವ ಮಾತನಾಡಿದ್ದರು. ಆಗ ಇಬ್ಬರನ್ನೂ ಸಮಾಧಾನ ಪಡಿಸಿದ್ದರು. ‘ತಂದೆ ಮೃತಪಟ್ಟ ಬಳಿಕ ಆರ್ಥಿಕವಾಗಿ ಮತ್ತು ಮಾನಸಿಕವಾಗಿ ಕುಗ್ಗಿದ್ದರು’ ಎಂದು ಮೃತ ರಮ್ಯಾರ ಪುತ್ರಿ ಪೊಲೀಸರ ಬಳಿ ಹೇಳಿಕೊಂಡಿದ್ದಾರೆ.</p>.<p>ಜುಲೈ 12ರ ಶುಕ್ರವಾರ ಸಂಜೆ ಪುತ್ರಿ ಬಂದು ಮನೆಯ ಬಾಗಿಲು ಬಡಿದರು. ಆಗ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ. ಬಾಗಿಲು ಒಡೆದು ಪರಿಶೀಲಿಸಿದಾಗ ತಾಯಿ ಹಾಗೂ ಸಹೋದರ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.</p>.<p>ಸ್ಥಳ್ಕಕೆ ಬಂದ ಪೊಲೀಸರು ಪರಿಶೀಲಿಸಿದಾಗ, ಎರಡು ಮೃತದೇಹಗಳು ಕೊಳೆತ ಸ್ಥಿತಿಯಲ್ಲಿ ಇದ್ದವು. ಮರಣೋತ್ತರ ಪರೀಕ್ಷೆ ನಡೆಸಿ ಶನಿವಾರ ಮಧ್ಯಾಹ್ನ ಮೃತದೇಹಗಳನ್ನು ಕುಟುಂಬದ ಸದಸ್ಯರಿಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>